ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು 3-0ಯಿಂದ ಕ್ಲೀನ್ ಸ್ವೀಪ್ ಮಾಡಿದ ಭಾರತ ತಂಡದ ಮೊದಲ ನಾಯಕ ಎಂಬ ಗೌರವಕ್ಕೆ ಶಿಖರ್ ಧವನ್ ಪಾತ್ರರಾಗಿದ್ದಾರೆ.
ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ಗುರುವಾರ ತಡರಾತ್ರಿ ನಡೆದ ಪಂದ್ಯ ಮಳೆಯಿಂದ ಅಡಚಣೆಗೊಳಗಾದರೂ ಭಾರತ ತಂಡ 119 ರನ್ ಗಳ ಭಾರೀ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿತು.
ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0ಯಿಂದ ಕ್ಲೀನ್ ಸ್ವೀಪ್ ಮಾಡಿತು. ಈ ಮೂಲಕ ಕೆರಿಬಿಯನ್ ನೆಲದಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ಮೊದಲ ನಾಯಕ ಎಂಬ ಗೌರವಕ್ಕೆ ಶಿಖರ್ ಧವನ್ ಪಾತ್ರರಾಗಿದ್ದಾರೆ.
ಒಟ್ಟಾರೆಯಾಗಿ ಭಾರತ ವಿದೇಶಿ ನೆಲದಲ್ಲಿ 5ನೇ ಬಾರಿ ವೈಟ್ ವಾಶ್ ಸಾಧನೆ ಮಾಡಿದೆ. ಇದಕ್ಕೂ ಮುನ್ನ ಜಿಂಬಾಬ್ವೆ ಮತ್ತು ಶ್ರೀಲಂಕಾದಲ್ಲಿ ಭಾರತ ಈ ಸಾಧನೆ ಮಾಡಿತ್ತು.
ಸ್ಟಾರ್ ಆಟಗಾರರಾದ ರೋಹಿತ್ ಶರ್, ವಿರಾಟ್ ಕೊಹ್ಲಿ, ಜಸ್ ಪ್ರೀತ್ ಬುಮ್ರಾ, ರಿಷಭ್ ಪಂತ್ ಮುಂತಾದ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲೂ ಧವನ್ ತಂಡವನ್ನು ಮುನ್ನಡೆಸಿದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಯುವ ಆಟಗಾರರಾದ ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ಅಕ್ಸರ್ ಪಟೇಲ್, ಮೊಹಮದ್ ಸಿರಾಜ್, ಯಜುರ್ವೆಂದ್ರ ಚಾಹಲ್ ಮುಂತಾದ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.