ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬ್ಯಾನರ್ ವಿಚಾರವಾಗಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಅಮಾನುಷ ಹಲ್ಲೆ ಪ್ರಕರಣದಲ್ಲಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಹಾಗೂ ಮೂವರು ಖಾಕಿ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
![](https://pratidhvani.com/wp-content/uploads/2023/05/inbound8734621939640484461.jpg)
ಪುತ್ತೂರು ಡಿವೈಎಸ್ಪಿ, ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ಐ, ಪುತ್ತುರು ಗ್ರಾಮಾಂತರ ಠಾಣೆ ಪಿಸಿ ಹರ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಸ್ತುತ ಈ ಪ್ರಕರಣದ ತನಿಖೆಯನ್ನು ಬಂಟ್ವಾಳದ ಡಿವೈಎಸ್ಪಿ ಜವಾಬ್ದಾರಿಗೆ ನೀಡಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನೀಡಿದ ವರದಿ ಆಧರಿಸಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಐ, ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿಲಾಗಿದೆ. ಪುತ್ತೂರು ಡಿವೈಎಸ್ಪಿ ವಿರುದ್ಧ ಕೇಸ್ ದಾಖಲಾಗಿದೆ.