ಜಾತಿ ಗಣತಿಗೆ ಸಂಬಂಧಿಸಿದ ಮೂಲ ವರದಿಯೇ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕರಕ್ಕೆ ಪತ್ರ ಬರೆದಿದ್ದಾರೆ.
ಪತ್ರವು ದಿನಾಂದ 05/10/2021 ರಂದು ಬೊಮ್ಮಾಯಿ ಸರ್ಕಾರಕ್ಕೆ ಬರೆದಿದ್ದು, ಇದರಲ್ಲಿ, ದಿನಾಂಕ:26,08, 2021 ರಂದು ಆಯೋಗದ ಕಛೇರಿಯಲ್ಲಿರಿಸಲಾಗಿದ್ದ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರಲ್ಲಿ ಸಂಗ್ರಹಿಸಿದ ಅಂಕಿ ಅಂಶಗಳು ಹಾಗೂ ಇತರ ವಿವರಗಳನ್ನೊಳಗೊಂಡ ಸೀಲ್ಡ್ ಬಾಕ್ಸ್ಗಳನ್ನು ಆಯೋಗದ ಅಧ್ಯಕ್ಷರು, ಸದಸ್ಯರು ಸದಸ್ಯ ಕಾರ್ಯದರ್ಶಿಯವರ ಸಮ್ಮುಖದಲ್ಲಿ, ಮಹಜರ್ ನಡೆಸಿ ತೆರೆಯಲಾಗಿರುತ್ತದೆ.
![](https://pratidhvani.com/wp-content/uploads/2023/06/vidha-soudha-1528423109-1628151053-1.jpg)
ಮುದ್ರಿತ ಮುಖ್ಯವರದಿಯಲ್ಲಿ ಸದಸ್ಯ ಕಾರ್ಯದರ್ಶಿಯವರ ಸಹಿ ಇಲ್ಲದೆ ಇರುವುದು ಆಯೋಗವು ಗಮನಿಸಿರುತ್ತದೆ. ಇದರೊಂದಿಗೆ ಅದಕ್ಕೆ ಸಂಬಂಧಿಸಿದ ಮುಖ್ಯ ವರದಿಯ ಮೂಲ ಅಥವಾ ಹಸ್ತಪ್ರತಿ ಸೀಟ್ ಬಾಕ್ಸಿನಲ್ಲಿ ಲಭ್ಯವಿಲ್ಲದಿರುವುದರಿಂದ ಸದರಿ ಹಸ್ತಪ್ರತಿಯನ್ನು ಕೂಡಲೇ ಆಯೋಗದ ಕಛೇರಿಗೆ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಲಾಗಿತ್ತು. ಸದರಿಯವರು ಸೂಚನೆಗೆ ಉತ್ತರವನ್ನು ನೀಡಿದ್ದು, ಅವರ ಪ್ರತಿಯನ್ನು ಲಗತ್ತಿಸಿದೆ. ಸದರಿ ವಿಷಯವನ್ನು ಸರ್ಕಾರದ ಗಮನಕ್ಕೆ ತರಬಯಸುತ್ತಾ, ಮುಂದೆ ಈ ವಿಷಯಕ್ಕೆ ಸಂಬಂಧಪಟ್ಟಂತೆ. ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಹಂತದಲ್ಲಿ ಸ್ಪಷ್ಟ ಪಡಿಸುವಂತೆ ಕೋರುತ್ತೇನೆ ಅಂತ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕರಕ್ಕೆ ಪತ್ರ ಬರೆದಿದ್ದಾರೆ.
![](https://pratidhvani.com/wp-content/uploads/2023/11/n55867975217006479492155200a7afee982a61f69864b22ad928e9fcf3affdb1dd55fb690d50b8185a2b51.jpg)