
ಬೆಂಗಳೂರು : ಹರಿಯಾಣ ಮತ್ತು ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಪಕ್ಕಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.ಬೆಂಗಳೂರಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಖರ್ಗೆ, ಜನರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ.

ಎರಡು ರಾಜ್ಯದ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿದೆ. ಇದೆ ವಿಚಾರ ಬಹಳ ದಿನಗಳಿಂದ ನಾವು ನಿರೀಕ್ಷಿಸಿದ್ದೆವು. ನಮ್ಮ ವಿಶ್ವಾಸಕ್ಕೆ ತಕ್ಕಂತೆ ಫಲಿತಾಂಶ ಬರಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಜನರು ವಿಶ್ವಾಸವಿಟ್ಟು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ. ಎಲೆಕ್ಷನ್ ನಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ತಿಳಿಸಿದರು.ಇನ್ನು, ಜಾತಿ ಗಣತಿ ವರದಿ ಜಾರಿ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಖರ್ಗೆ , ಅದನ್ನ ಇಲ್ಲಿಯವರ ಬಳಿ ಕೇಳಿ ಎಂದು ಹೇಳಿ ಆಶ್ಚರ್ಯಕರ ಹೇಳಿಕೆ ನೀಡಿದ್ರು.





