• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರದ ಅಂಗಳಕ್ಕೆ ಜಾತಿಗಣತಿ ವರದಿ.. ಸಿಗುತ್ತಾ ಸಾಮಾಜಿಕ ನ್ಯಾಯ..?

Krishna Mani by Krishna Mani
February 29, 2024
in Top Story, ಕರ್ನಾಟಕ
0
ಸರ್ಕಾರದ ಅಂಗಳಕ್ಕೆ ಜಾತಿಗಣತಿ ವರದಿ.. ಸಿಗುತ್ತಾ ಸಾಮಾಜಿಕ ನ್ಯಾಯ..?
Share on WhatsAppShare on FacebookShare on Telegram

ADVERTISEMENT

-ಕೃಷ್ಣಮಣಿ

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷರ ಅವಧಿ ಇಂದಿಗೆ ಮುಕ್ತಾಯ ಆಗಲಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಸದಸ್ಯರೊಂದಿಗೆ ಸೇರಿಕೊಂಡು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಲಿದ್ದಾರೆ. ಸರ್ಕಾರಕ್ಕೆ ಜಾತಿಗಣತಿ ಸಮೀಕ್ಷೆ ವರದಿ ಸಲ್ಲಿಸಲಿರುವ ಜಯಪ್ರಕಾಶ್ ಹೆಗ್ಡೆ, 2015ರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವರದಿ ಸಿದ್ದವಾಗಿದ್ದು, ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುತ್ತದೆ ಎಂದಿದ್ದಾರೆ.

ರಾಜ್ಯ ಸರ್ಕಾರಕ್ಕೆ ಇಂದು ಜಾತಿಗಣತಿ ವರದಿ ಸಲ್ಲಿಕೆ ಆಗಲಿದೆ. ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿ ಗಣತಿಗೆ ಸೂಚನೆ ನೀಡಿದ್ದರು. ಆದರೆ ಕಾಂತರಾಜು ಆಯೋಗ ಜಾತಿಗಣತಿ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದು, ಅದೇ ಮಾಹಿತಿ ಮೇರೆಗೆ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅಂಕಿ ಅಂಶಗಳ ಮೇಲೆ ಅಧ್ಯಯನ ವರದಿ ಸಲ್ಲಿಸಲಿದ್ದಾರೆ. ಸರ್ಕಾರಕ್ಕೆ ಸಾಕಷ್ಟು ಮಾಹಿತಿ ಸಿಗಲಿದ್ದು, ಹಿಂದುಳಿದ ಜಾತಿಗಳ ಶ್ರೇಯೋಭಿವೃದ್ದಿ ಅನುಕೂಲ ಆಗಲಿದೆ ಎಂದು ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ದತ್ತಾಂಶ ಸಂಗ್ರಹಿದೆ. ಸಮೀಕ್ಷೆ ಆಧಾರದ ಮೇಲೆ ಸರ್ಕಾರ ಸೌಲಭ್ಯ ನೀಡಲು ಅನುಕೂಲಕರ ಎನ್ನಲಾಗ್ತಿದೆ. ಜಾತಿವೊಂದೇ ಅಲ್ಲದೆ 54 ಅಂಶಗಳನ್ನು ಆಧರಿಸಿ ಅಧ್ಯಯನ ಮಾಡಲಾಗಿದೆ. ಅದರಲ್ಲಿ ಜಾತಿ ಕೂಡ ಒಂದು ಅಂಶ ಮಾತ್ರ ಆಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ಜಾತಿಗಣತಿ ವೈಜ್ಞಾನಿಕವಾಗಿಲ್ಲ ಎಂದು ಈಗಾಗಲೇ ಲಿಂಗಾಯತ ಹಾಗು ಒಕ್ಕಲಿಗ ಸಮುದಾಯ ಕಿಡಿಕಾರಿದ್ದು, ವರದಿ ಬಿಡುಗಡೆ ಬಳಿಕ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಯಿದೆ.

ಜಾತಿಗಣತಿಗೆ ಪ್ರಬಲ ಸಮುದಾಯಗಳಾದ ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ತೀವ್ರ ವಿರೋಧ ಮಾಡಿರುವ ಕಾರಣಕ್ಕೆ ಜಾತಿ ಗಣತಿ ಸ್ವೀಕಾರ ಆದರೂ ಬಿಡುಗಡೆ ಆಗಲ್ಲ ಅನ್ನೋ ಮಾಹಿತಿ ಹರಿದಾಡುತ್ತಿದೆ. ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆ ಆಗಲಿದ್ದು, ಒಂದು ವೇಳೆ ಜಾತಿಗಣತಿ ಬಿಡುಗಡೆ ಆಗಿ, ಒಕ್ಕಲಿಗ ಲಿಂಗಾಯತ ಸಮುದಾಯವನ್ನು ಎದುರು ಹಾಕಿಕೊಂಡರೆ ಕಾಂಗ್ರೆಸ್‌‌ಗೆ ನಷ್ಟ ಅನ್ನೋ ಲೆಕ್ಕಾಚಾರವಿದೆ. ಇದೇ ಕಾರಣಕ್ಕೆ ಜಾತಿ ಗಣತಿಯನ್ನು ಸ್ವೀಕಾರ ಮಾಡುವಂತೆ ಹಲವಾರು ಸಂಘ ಸಂಸ್ಥೆಗಳು ಆಗ್ರಹ ಮಾಡಿರುವ ಕಾರಣಕ್ಕೆ ವರದಿ ಸ್ವೀಕಾರ ಮಾಡಿ ಸುಮ್ಮನಾಗ್ತಾರೆ ಎನ್ನಲಾಗ್ತಿದೆ.

ಜಯಪ್ರಕಾಶ್‌ ಹೆಗ್ಡೆ ನೀಡುವ ವರದಿ ಮೇಲೆ ಸಮಿತಿ ರಚನೆ ಮಾಡಿ ಅಧ್ಯಯನಕ್ಕೆ ಸೂಚಿಸುವ ಮೂಲಕ ಕಾಲಹರಣ ಮಾಡುವುದು ಕಾಂಗ್ರೆಸ್‌ ಸರ್ಕಾರ ನಿರ್ಧಾರ. ಪುನರ್ ಪರಿಶೀಲನೆ ಸಮಿತಿ ರಚನೆ ಮಾಡಿ ಆಯೋಗದ ವರದಿ ಪುನರ್ ಪರಿಶೀಲನೆ ಸಮಿತಿ ಮೂಲಕ ಪರಾಮರ್ಶೆ ವರದಿ ಪಡೆಯುವುದು. ಲೋಕಸಭೆ ಚುನಾವಣೆ ಬಳಿಕ ಪುನರ್ ಪರಿಶೀಲನೆ ಸಮಿತಿ ವರದಿ ಪಡೆದು, ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚೆ ಮಾಡುವುದು. ಆ ಬಳಿಕ ಸದನದಲ್ಲಿ ಮಂಡಿಸುವ ಬಗ್ಗೆ ನಿರ್ಧಾರ ಮಾಡೋಣ. ಸದ್ಯಕ್ಕೆ ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ ಎಂದು ಸಿದ್ದರಾಮಯ್ಯ ಆಪ್ತರ ಬಳಿ ಹೇಳಿದ್ದಾರೆ ಎನ್ನುವುದು ವಿಧಾನಸೌಧದಿಂದ ಸಿಕ್ಕಿರುವ ಖಚಿತ ಮಾಹಿತಿ.

Previous Post

ಇಂದು ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ಸಾಧ್ಯತೆ

Next Post

ಪಾಕ್ ಪರ ಘೋಷಣೆ: ಎನ್ ಐಎ ತನಿಖೆ ನಡೆಸುವಂತೆ ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಪಾಕ್ ಪರ ಘೋಷಣೆ: ಎನ್ ಐಎ ತನಿಖೆ ನಡೆಸುವಂತೆ ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

ಪಾಕ್ ಪರ ಘೋಷಣೆ: ಎನ್ ಐಎ ತನಿಖೆ ನಡೆಸುವಂತೆ ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada