• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನಕಶ್ರೀ ಪ್ರಶಸ್ತಿಗೆ ಜಾತಿ-ಧರ್ಮ ಮುಖ್ಯ ಅಲ್ಲ: ಕನಕದಾಸರ ಸಾಮಾಜಿಕ ಸಂದೇಶದ ಮೇಲೆ ಕೆಲಸ ಮಾಡುವುದಷ್ಟೆ ಮುಖ್ಯ: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು: ಸಿಎಂ

ADVERTISEMENT

ಸಂವಿಧಾನ-ಪ್ರಜಾಪ್ರಭುತ್ವ-ಜಾತ್ಯತೀತತೆ ಬಗ್ಗೆ ನಮಗೆ ಸ್ಪಷ್ಟತೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ

ಜಾತಿ, ಧರ್ಮದ ಹೆಸರಲ್ಲಿ, ಮೇಲು-ಕೀಳು ಎನ್ನುವ ತಾರತಮ್ಯವನ್ನು ತ್ಯಜಿಸಿ ಮನುಷ್ಯರನ್ನು ಪ್ರೀತಿಸುವುದೇ ಕನಕದಾಸರಿಗೆ ನಾವು ಸಲ್ಲಿಸುವ ನಿಜವಾದ ಗೌರವ: ಸಿಎಂ*

ಬೆಂಗಳೂರು ನ 18: ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು. ಸಂವಿಧಾನ-ಪ್ರಜಾಪ್ರಭುತ್ವ-ಜಾತ್ಯತೀತತೆ ಬಗ್ಗೆ ಪ್ರತಿಯೊಬ್ಬರೂ ಸ್ಪಷ್ಟತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಉದ್ಘಾಟಿಸಿ, ಕನಕ ಶ್ರೀ ಪ್ರಶಸ್ತಿ ಪ್ರದಾನ ಮಾಡಿ ಸಮಗ್ರ ತತ್ವಪದ ಯೋಜನೆಯ 18 ಸಂಪುಟಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕನಕದಾಸರ 500ನೇ ಜಯಂತೋತ್ಸವವನ್ನು ಆಚರಿಸುವ ಅವಕಾಶ ನನಗೆ ಸಿಕ್ಕಿತ್ತು. ಆ ಸಂದರ್ಭದಲ್ಲಿ ಕನಕದಾಸರ ಕೀರ್ತನೆಗಳನ್ನು ಸುಲಭವಾಗಿ ಜನರ ಕೈಗೆ ತಲುಪಿಸುವ ಕಾರ್ಯವನ್ನು ಮಾಡಲಾಗಿತ್ತು ಎಂದು ಸ್ಮರಿಸಿದರು.

ಕನಕಶ್ರೀ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಕನಕಶ್ರೀ ಪ್ರಶಸ್ತಿಗೆ ಜಾತಿ-ಧರ್ಮ ಮುಖ್ಯ ಅಲ್ಲ. ಕನಕದಾಸರ ಸಾಮಾಜಿಕ ಸಂದೇಶದ ಮೇಲೆ ಕೆಲಸ ಮಾಡುವುದಷ್ಟೆ ಮುಖ್ಯ ಎಂದರು.

ಬಸವಾದಿ ಶರಣರು, ಕನಕದಾಸರು ಇಬ್ಬರೂ ಮನುಷ್ಯರನ್ನು ವಿಭಜಿಸುವ ಜಾತಿ-ಧರ್ಮದ ತಾರತಮ್ಯವನ್ನು ವಿರೋಧಿಸಿದ್ದರು. ವಚನ ಚಳವಳಿಗೂ ಮೊದಲು ಜನರಿಗೆ ಅರ್ಥ ಆಗದ ಭಾಷೆಯಲ್ಲಿ ಧರ್ಮ‌ ಪ್ರಚಾರ ನಡೆಯುತ್ತಿತ್ತು. ಜನರಿಗೆ ಅರ್ಥವಾಗದ ಸಂಸ್ಕೃತ ಶ್ಲೋಕಗಳನ್ನು ಮುಟ್ಟದ ಬಸವಾದಿ ಶರಣರು ಜನರಿಗೆ ಅರ್ಥವಾಗುವ ಜನರ ಭಾಷೆಯಲ್ಲೇ ಅತ್ಯಂತ ಸರಳವಾಗಿ ಮಾನವೀಯ ಧರ್ಮವನ್ನು ಹೇಳಿದರು. ಮನುಷ್ಯ ನಿರ್ಮಿತ ಜಾತಿ ತಾರತಮ್ಯವನ್ನು, ಧಾರ್ಮಿಕ ತಾರತಮ್ಯವನ್ನು ಅಳಿಸಲು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಮುನ್ನಡೆಸಿದ ಮಾನವೀಯ ಧರ್ಮವನ್ನು 15 ನೇ ಶತಮಾನದಲ್ಲಿ ಕನಕದಾಸರು ಮುಂದುವರೆಸಿದರು.

ಬುದ್ದ, ಬಸವ, ಕನಕದಾಸರು, ಅಂಬೇಡ್ಕರ್ ಅವರ ಆಶಯಗಳೆಲ್ಲಾ ಒಂದೇ ಆಗಿದ್ದವು. ಜಾತಿ, ಧರ್ಮದ ಹೆಸರಿನಲ್ಲಿ ನಡೆಯುವ ಮನುಷ್ಯ ತಾರತಮ್ಯಗಳನ್ನು ನಿವಾರಿಸಲು ಶ್ರಮಿಸಿದರು ಎಂದು ವಿವರಿಸಿದರು.

ವಿದ್ಯಾವಂತರಾದಷ್ಟೂ ಜಾತಿವಾದಿಗಳಾದರೆ ಆ ವಿದ್ಯೆಗೆ ಗೌರವ ಬರುತ್ತದಾ? ಸಂವಿಧಾನವನ್ನು ವಿರೋಧಿಸುವವರೂ ಈಗ ತಲೆ ಎತ್ತಿದ್ದಾರೆ. ಸಂವಿಧಾನ ವಿರೋಧಿಗಳು ನಿಜವಾದ ಮನುಷ್ಯ ವಿರೋಧಿಗಳು ಎಂದರು.

ಮನುಷ್ಯ ಮನುಷ್ಯರನ್ನು ಜಾತಿ, ಧರ್ಮದ ಹೆಸರಲ್ಲಿ, ಮೇಲು-ಕೀಳು ಎನ್ನುವ ತಾರತಮ್ಯವನ್ನು ತ್ಯಜಿಸಿ ಮನುಷ್ಯರನ್ನು ಪ್ರೀತಿಸುವುದೇ ಕನಕದಾಸರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದರು.

ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಸಿದ್ದರಾಮಾನಂದ ಸ್ವಾಮಿಗಳ‌ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕರಾದ ಬಂಜಗೆರೆ ಜಯಪ್ರಕಾಶ್ ಅವರು ವಿಶೇಷ ಉಪನ್ಯಾಸ ನೀಡಿದರು. ಸಚಿವರಾದ ಶಿವರಾಜ್ ತಂಗಡಗಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇಲಾಖೆ ಪ್ರಕಟಣೆಗಳಿಗೆ ಶೇ50 ರಿಯಾಯ್ತಿ ನೀಡಿ: ಸಿಎಂ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವ ಎಲ್ಲಾ ಅಕಾಡೆಮಿಗಳು ಮತ್ತು ಪ್ರಾಧಿಕಾರಿಗಳು ಪ್ರಕಟಿಸುವ ಪುಸ್ತಕಗಳನ್ನು ವಿಶೇಷ ಸಂದರ್ಭಗಳಲ್ಲಿ ಶೇ50 ರಷ್ಟು ರಿಯಾಯ್ತಿ ದರದಲ್ಲಿ ಮಾರಾಟ ಮಾಡುವಂತೆ ಇದೇ ಸಂದರ್ಭದಲ್ಲಿ ಘೋಷಿಸಿದರು.

Tags: BJPcongressCongress PartyKanaka JayanthiKarnatakaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಮ್ಮ ಗ್ಯಾರಂಟಿಗಳ ಮೇಲೆ ಅಪಪ್ರಚಾರ ಮಾಡಿದ ಮಹಾರಾಷ್ಟ್ರ ಸರ್ಕಾರದ ಮೇಲೆ ಕೇಸ್ ಹಾಕ್ತಿವಿ : ಸಿಎಂ ಸಿದ್ದರಾಮಯ್ಯ ! 

Next Post

ಅನಗತ್ಯ ಹೇಳಿಕೆ ನೀಡಿ ಮುಜುಗರಕ್ಕೀಡಾದ ಕಾಂಗ್ರೆಸ್ ಶಾಸಕ ?! ನಿಜಕ್ಕೂ ದಾಖಲೆ ಬಿಡುಗಡೆ ಮಾಡ್ತಾರ ಗಣಿಗ ರವಿ ?! 

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025
Next Post
ಅನಗತ್ಯ ಹೇಳಿಕೆ ನೀಡಿ ಮುಜುಗರಕ್ಕೀಡಾದ ಕಾಂಗ್ರೆಸ್ ಶಾಸಕ ?! ನಿಜಕ್ಕೂ ದಾಖಲೆ ಬಿಡುಗಡೆ ಮಾಡ್ತಾರ ಗಣಿಗ ರವಿ ?! 

ಅನಗತ್ಯ ಹೇಳಿಕೆ ನೀಡಿ ಮುಜುಗರಕ್ಕೀಡಾದ ಕಾಂಗ್ರೆಸ್ ಶಾಸಕ ?! ನಿಜಕ್ಕೂ ದಾಖಲೆ ಬಿಡುಗಡೆ ಮಾಡ್ತಾರ ಗಣಿಗ ರವಿ ?! 

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada