ತಾಲಿಬಾನ್: ಅತಂತ್ರದಲ್ಲಿ ಮಹಿಳಾ ಸ್ವಾತಂತ್ರ್ಯ

“ನಮ್ಮನ್ನು ಮನೆಯಲ್ಲಿಯೇ ಬಂಧಿಯಾಗಿ ಇರಿಸಲಾಗಿದೆ. ಕೆಲಸ ಮಾಡಲು ಅಥವಾ ನಮ್ಮ ಧ್ವನಿ ಎತ್ತಲು ಇಲ್ಲಿ ಅವಕಾಶವಿಲ್ಲ. ನಾನು ದೈಹಿಕವಾಗಿ ಸತ್ತಿಲ್ಲವಾದರೂ, ಇಂತಹ ಪರಿಸ್ಥಿತಿಯಲ್ಲಿ ಬದುಕುತ್ತಿರುವುದು ಸತ್ತಂತೆಯೇ ಭಾಸವಾಗುತ್ತಿದೆ.” ಇಂದು ಅಫ್ಘಾನಿಸ್ತಾನದಲ್ಲಿರುವ ಬಹುತೇಕ ಮಹಿಳೆಯರು, ತಮ್ಮ ವ್ಯಾಸಂಗ ಪ್ರಮಾಣಪತ್ರಗಳನ್ನು ಸುಟ್ಟು ಹಾಕುತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳನ್ನು, ಬಹಿರಂಗವಾಗಿ ತೆಗೆದಂತಹ ಫೋಟೋಗಳನ್ನು ಅಳಿಸಿ ಹಾಕುತ್ತಿದ್ದಾರೆ. ಸಣ್ಣಪುಟ್ಟ ವ್ಯಾಪಾರ ನಡೆಸಿ ಆರ್ಥಿಕ ಸ್ವಾವಲಂಬನೆಯತ್ತ ದೃಷ್ಟಿ ನೆಟ್ಟಿದ್ದ ಮಹಿಳೆಯರು, ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಯಲ್ಲಿಟ್ಟಿದ್ದ ಬುರ್ಖಾ ಹುಡುಕುವತ್ತ ಗಮನ ನೀಡಿದ್ದಾರೆ.  ಕಳೆದ ಎರಡು ತಿಂಗಳಿನಿಂದ ಅಫ್ಗಾನಿಸ್ತಾನದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳು, ಆ ದೇಶವನ್ನು ಎರಡು ದಶಕಗಳಷ್ಟು ಹಿಂದಕ್ಕೆ ಕರೆದುಕೊಂಡು ಹೋಗಿದೆ. ಮುಖ್ಯವಾಗಿ, ಅಲ್ಲಿನ ಮಹಿಳೆಯರು ತಮಗಿದ್ದ ಸ್ವಾತಂತ್ರ್ಯವನ್ನು ಕಳೆದುಕೊಂಡು, ತಮ್ಮ ಹೆಣ್ಣು ಮಕ್ಕಳ ಭವಿಷ್ಯ ಎಲ್ಲಿ ಕಮರಿ ಹೋಗುವುದೋ ಎಂಬ ಭಯದಲ್ಲಿ ಬದುಕುತ್ತಿದ್ದಾರೆ.  1996ರಿಂದ 2001ರ ನಡುವಿನ ತಾಲಿಬಾನ್ ಆಡಳಿತವನ್ನು ಮತ್ತೆ ನೆನಪಿಸಿಕೊಂಡರೆ, ಹೆಣ್ಣು ಮಕ್ಕಳಿಗೆ ಶಿಕ್ಷಣದ ಹಕ್ಕು ಇರಲಿಲ್ಲ. ಮಹಿಳೆಯರಿಗೆ ಕೆಲಸಕ್ಕೆ ಹೋಗುವ ಸ್ವಾತಂತ್ರ್ಯ ಇರಲಿಲ್ಲ. ಮನೆಯಿಂದ ಹೊರಗೆ ಬರುವಾಗ ತಮ್ಮ ಮುಖವನ್ನು ಇಸ್ಲಾಮಿಕ್ ಬುರ್ಖಾ ಧರಿಸಿ ಮುಚ್ಚಬೇಕಿತ್ತು. ಮನೆಯ ಗಂಡು ಸದಸ್ಯರ ಸಹಾಯದೊಂದಿಗೆ ಮಾತ್ರ ಮನೆಯಿಂದ ಹೊರ ಬರಬೇಕಿತ್ತು. ಇಂತಹ ಕರಾಳ ದಿನಗಳನ್ನು ನೋಡಿರುವ ಅಲ್ಲಿನ ಮಹಿಳೆಯರು, ಮತ್ತೆ ಸ್ವಾತಂತ್ರ್ಯದ ಹರಣಕ್ಕೆ ಸಾಕ್ಷಿಯಾಗಿದ್ದಾರೆ.  ಇಂದಿಗೂ 90ರ ದಶಕದ ಅತ್ಯಂತ ಕ್ರೂರ ಶಿಕ್ಷೆಗಳಾದ ಛಡಿಯೇಟು ಹಾಗೂ ಕಲ್ಲುಗಳನ್ನು ಎಸೆಯುವುದನ್ನು ಮಹಿಳೆಯರು ಇನ್ನೂ ಮರೆತಿಲ್ಲ. ಇಂತಹ ಕಠೋರವಾದ ಇಸ್ಲಾಮಿಕ್ ನಿಯಮಗಳನ್ನು ಜಾರಿಗೆ ತರಲಾಗಿತ್ತು.  ತಮ್ಮ ಮೊತ್ತ ಮೊದಲ ಸುದ್ದಿಗೋಷ್ಟಿಯಲ್ಲಿ ಮಹಿಳೆಯರಿಗೆ ‘ಇಸ್ಲಾಮಿಕ್ ನಿಯಮಗಳ’ ಅಡಿಯಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಹೋಗಲು ಅವಕಾಶ ನೀಡಲಾಗುವುದು, ಎಂದು ತಾಲಿಬಾನ್ ಹೇಳಿದೆ. ಆದರೆ, ತಾಲಿಬಾನ್ ಈ ಹಿಂದೆ ದೇಶದ ಜನರೊಂದಿಗೆ ನಡೆದುಕೊಂಡಿರುವ ಕ್ರೂರ ರೀತಿಯಿಂದ ಯಾರೂ ಈ ಮಾತುಗಳನ್ನು ನಂಬಲು ಸಿದ್ದರಿಲ್ಲ. ಮಿಗಿಲಾಗಿ, ಕೆಲಸಕ್ಕೆಂದು ಹೋದ ಮಹಿಳೆಯರನ್ನು ವಾಪಾಸ್ ಮನೆಗೆ ಕಳುಹಿಸಿರುವ ತಾಜಾ ಉದಾಹರಣೆಗಳು ಕಣ್ಣ ಮುಂದಿರುವಾಗ, ಬಂದೂಕಿನಿಂದ ಶಾಂತಿ ಸ್ಥಾಪನೆಗೆ ಹೊರಟವರ ಮಾತುಗಳನ್ನು ನಂಬುವುದಾದರೂ ಹೇಗೆ?  ಅಫ್ಘಾನಿಸ್ತಾನದಲ್ಲಿ ಅತ್ಯಂತ ಜನಪ್ರಿಯತೆ ಪಡೆದಿದ್ದ ಪತ್ರಕರ್ತೆಯೊಬ್ಬರು ಅಲ್ಲಿನ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ತಾಲಿಬಾನ್ ಪಡೆಗಳು ಕಾಬೂಲನ್ನು ವಶಪಡಿಸಿಕೊಂಡ ಕೇವಲ ಮೂರು ದಿನಗಳ ನಂತರ ಸಂಪೂರ್ಣ ದೇಶದ ಚಿತ್ರಣವೇ ಬದಲಾಗಿ ಹೋಗಿದೆ. ಮಹಿಳೆಯರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ, ಎಂದು ಅವರು ಹೇಳಿದ್ದಾರೆ.  “ನಾನು ತಾಲಿಬಾನಿಗಳ ವಿರುದ್ದ, ಅವರ ಕಾರ್ಯಾಚರಣೆಗಳ ಕುರಿತು ನೂರಾರು ವರದಿಗಳನ್ನು ಮಾಡಿದ್ದೆ. ಈಗ ಅವರು ನನ್ನ ಗುರುತು ಪತ್ತೆ ಹಚ್ಚಿದರೆ ಏನು ಮಾಡುತ್ತಾರೆ ಎಂದೂ ತಿಳಿದಿಲ್ಲ. ನನ್ನ ಅಸ್ಮಿತೆಯನ್ನೇ ಬಚ್ಚಿಡುವ ಪ್ರಯತ್ನವನ್ನು ಮಾಡುತ್ತಿದ್ದೇನೆ,” ಎಂದು ಅವರು ರಾಯಿಟರ್ಸ್’ಗೆ ಹೇಳಿಕೆ ನೀಡಿದ್ದಾರೆ.  “ನಮ್ಮನ್ನು ಮನೆಯಲ್ಲಿಯೇ ಬಂಧಿಯಾಗಿ ಇರಿಸಲಾಗಿದೆ. ಕೆಲಸ ಮಾಡಲು ಅಥವಾ ನಮ್ಮ ಧ್ವನಿ ಎತ್ತಲು ಇಲ್ಲಿ ಅವಕಾಶವಿಲ್ಲ. ನಾನು ದೈಹಿಕವಾಗಿ ಸತ್ತಿಲ್ಲವಾದರೂ, ಇಂತಹ ಪರಿಸ್ಥಿತಿಯಲ್ಲಿ ಬದುಕುತ್ತಿರುವುದು ಸತ್ತಂತೆಯೇ ಭಾಸವಾಗುತ್ತಿದೆ,” ಎಂದು ಅವರು ಕಣ್ಣೀರಿಟ್ಟಿದ್ದಾರೆ.  ಕಾಬೂಲ್’ನಲ್ಲಿ ಸಲೂನ್ ನಡೆಸುತ್ತಿದ್ದ ಮಹಿಳೆಯೊಬ್ಬರು ತಮ್ಮ ವ್ಯಾಪಾರವನ್ನು ಮುಚ್ಚಿ ಈಗ ಮನೆಯಲ್ಲಿ ಅವಿತು ಕುಳಿತಿದ್ದಾರೆ.  “ನನ್ನ ಅಂಗಡಿಯಿಂದ ಕನಿಷ್ಟ 24 ಜನರ ಕುಟುಂಬಗಳು ಬದುಕುತ್ತಿದ್ದವು. ಅದು ಕೂಡಾ ಎಲ್ಲಾ ಕೆಲಸಗಾರರು ಮಹಿಳೆಯರಾಗಿದ್ದರು. ಈಗ ಅದು ಇತಿಹಾಸವಾಗಿದೆ. ತಾಲಿಬಾನ್ ಭಯದಿಂದ ಮಹಿಳೆಯರು ಮನೆಯಿಂದ ಹೊರಹೋಗಲೂ ಅಂಜುತ್ತಿದ್ದಾರೆ,” ಎಂದು ಆ ಮಹಿಳೆ ಹೇಳಿದ್ದಾರೆ.  ಪ್ರತಿರೋಧದ ಆರಂಭ ತಾಲಿಬಾನ್ ವಿರುದ್ದ ಈಗಾಗಲೇ ಮಹಿಳೆಯರ ಪ್ರತಿರೋಧ ಆರಂಭವಾಗಿದೆ. ಮಹಿಳೆಯರ ಒಂದು ಸಣ್ಣ ಗುಂಪು ಕಾಬೂಲ್’ನ ಬೀದಿಗಳಲ್ಲಿ ತಾಲಿಬಾನ್ ವಿರುದ್ದ ಪ್ರತಿಭಟನೆಯನ್ನು ನಡೆಸುತ್ತಿದೆ.  “ಅಫ್ಘಾನಿಸ್ತಾನದ ಮಹಿಳೆಯರಿಗಾಗಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಇಲ್ಲಿನ ಮಹಿಳೆಯರ ಹೃದಯದಲ್ಲಿ ಅಡಗಿರುವ ಭಯವನ್ನು ಹೋಗಲಾಡಿಸಲು ನಾವು ಪ್ರತಿಭಟಸುತ್ತಿದ್ದೇವೆ. ಭಯದಿಂದ ಮನೆಯಲ್ಲಿ ಕುಳಿತಿರುವ ಪ್ರತಿಯೊಬ್ಬ ಮಹಿಳೆಯೂ ನಮ್ಮೊಂದಿಗೆ ಕೈಜೋಡಿಸಬೇಕು. ದೇವರಿಚ್ಚೆ ಇದ್ದರೆ ನಾವು ನಮ್ಮ ಪ್ರತಿರೋಧವನ್ನು ಮುಂದುವರೆಸುತ್ತೇವೆ. ಇನ್ನು ಹೆಚ್ಚಿನ  ಮಹಿಳೆಯರು ನಮ್ಮೊಂದಿಗೆ ಸೇರುತ್ತಾರೆ,” ಎಂದು ಪ್ರತಿಭನಾನಿರತ ಮಹಿಳೆ ಸೂದಾವರ್ ಕಬೀರಿ ಹೇಳಿದ್ದಾರೆ.  https://twitter.com/missnzl/status/1427914119370264580 ಕಳೆದ ಇಪ್ಪತ್ತು ವರ್ಷಗಳಲ್ಲಿ ಅಫ್ಘಾನ್ ಮಹಿಳೆಯರು ಪಡೆದಿರುವ ಧ್ವನಿಯನ್ನು ಈಗ ಮೌನವಾಗಿಸಲು ನಾವು ಬಿಡುವುದಿಲ್ಲ ಎಂದು ತಾಲಿಬಾನಿಗಳ ಕ್ರೌರತೆಯ ವಿರುದ್ದ ತೊಡೆ ತಟ್ಟಿ ನಿಂತಿದ್ದಾರೆ.  90ರ ದಶಕದ ಕರಾಳ ನೆನಪುಗಳನ್ನು ಮೀರಿ ನಿಲ್ಲುವಂತಹ ಪ್ರಗತಿಯನ್ನು ಅಫ್ಘಾನ್ ಮಹಿಳೆಯರು ಸಾಧಿಸಿದ್ದರು. ಶಿಕ್ಷಣ, ವಿಜ್ಞಾನ, ವ್ಯಾಪಾರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸುವ ಅವಕಾಶ ಒದಗಿ ಬಂದಿತ್ತು. ಆದರೆ, ಈಗ ಆ ಪ್ರಗತಿ ಮತ್ತೆ ಅಧಃಪತನದತ್ತ ಸಾಗುತ್ತಿದೆ. ಮಹಿಳಾ ಸ್ವಾತಂತ್ರ್ಯವೆಂಬುದು ಕೇವಲ ಕನಸಾಗಿ ಉಳಿಯುವ ದಿನಗಳು ಮುಂದೆ ಕಾಣುತ್ತಿವೆ ಎಂಬ ಭಯ ಅಲ್ಲಿನ ಮಹಿಳೆಯರಲ್ಲಿ ಕಾಡುತ್ತಿದೆ.  ಈಗ ಬೀದಿಗಿಳಿದು ಪ್ರತಿಭಟಿಸುತ್ತಿರುವ ಮಹಿಳೆಯ ವಿರುದ್ದ ತಾಲಿಬಾನಿನ ಕ್ರೂರ ದೃಷ್ಟಿ ಬೀರುವ ಸಾಧ್ಯತೆಯಿದ್ದರೂ, ತಮ್ಮ ಹಕ್ಕುಗಳಿಗಾಗಿ ಮಹಿಳೆಯರ ಹೊರಾಟ ನಿರಂತರವಾಗಿ ಸಾಗಿದೆ.  “ಅಫ್ಘಾನಿಸ್ತಾನದಲ್ಲಿ 18 ಮಿಲಿಯನ್ ಮಹಿಳೆಯರಿದ್ದಾರೆ. ಅವರೆಲ್ಲರನ್ನು ಮನೆಯ ನಾಲ್ಕು ಗೋಡೆಗಳ ನಡುವೆ ಬಂಧಿಯಾಗಿಸುವುದು ಕಷ್ಟ....

Read moreDetails

ವಿಭಜನೆಯ ಕ್ರೌರ್ಯವನ್ನು ಸ್ಮರಿಸುವಾಗ,,,

ಸಾಮೂಹಿಕ ಹತ್ಯಾಕಾಂಡಗಳ ಮತ್ತು ಸಮೂಹ ಹಿಂಸಾಕಾಂಡಗಳ ಸ್ಮರಣೆಯ ಮೂಲಕ ಒಂದು ಸಮಾಜವು, ತಾನು ಮನುಕುಲದ ವಿರುದ್ಧ ನಡೆಸಿದ ದೌರ್ಜನ್ಯಗಳಿಗೆ ಪಶ್ಚಾತ್ತಾಪ ಪಡುತ್ತಲೇ, ಮತ್ತೊಮ್ಮೆ ಅಂತಹ ವಿದ್ರಾವಕ ಘಟನೆಗಳು...

Read moreDetails

‘ಶತಮಾನದ ಹಗರಣ’ ಆಗಲಿರುವ ‘ಪಶ್ಚಿಮವಾಹಿನಿ’ ಕಿಂಡಿ ಅಣೆಕಟ್ಟುಗಳು.!

ಇತ್ತೀಚೆಗೆ ರಾಜ್ಯದ ಕಿರುನೀರಾವರಿ ಸಚಿವರು 1400 ಕಿರು ಅಣೆಕಟ್ಟುಗಳನ್ನು ರಾಜ್ಯದಲ್ಲಿ ನಿರ್ಮಿಸುವ ಬಗ್ಗೆ ಹೇಳಿದ್ದಾರೆ. ಆ ಯೋಜನೆ ಏಕೆ ಅಪಾಯಕಾರಿ ಎಂಬ ಕುರಿತು ಇನ್ನೊಂದಿಷ್ಟು ಪೂರಕ ಸಂಗತಿಗಳನ್ನು...

Read moreDetails

ಸಾಮ್ರಾಜ್ಯಶಾಹಿಯ ದಾಹವೂ ಮತಾಂಧತೆಯ ಅಸ್ತಿತ್ವವೂ

ಅಮೆರಿಕದ ಸಾಮ್ರಾಜ್ಯಶಾಹಿ ರಾಜಕಾರಣದಲ್ಲಿ ಕೊಲ್ಲಿ ರಾಷ್ಟ್ರಗಳು ತೈಲ ಸಂಪತ್ತಿಗಾಗಿ ಪ್ರಾಮುಖ್ಯತೆ ಪಡೆದರೆ, ಆಫ್ಘಾನಿಸ್ತಾನ ಭೌಗೋಳಿಕ ರಾಜಕಾರಣಕ್ಕಾಗಿ ಮತ್ತು ಮಧ್ಯ ಏಷ್ಯಾ ದೇಶಗಳ ನಡುವಿನ ವಾಣಿಜ್ಯ ಹಿತಾಸಕ್ತಿಗಳಿಗಾಗಿ ಪ್ರಾಮುಖ್ಯತೆ...

Read moreDetails

ಅಮೃತ ಮಹೋತ್ಸವಕ್ಕೆ ಸಜ್ಜಾಗುವ ಮುನ್ನ,,, ಕುಸಿಯುತ್ತಿರುವ ಸ್ತಂಭಗಳೂ ಅಡಗುತ್ತಿರುವ ದನಿಗಳೂ

ತಮ್ಮ 75ನೆಯ ಸ್ವಾತಂತ್ರ್ಯೋತ್ಸವದ ಕೆಂಪುಕೋಟೆಯ ಭಾಷಣಕ್ಕೆ ಮಾನ್ಯ ಪ್ರಧಾನಮಂತ್ರಿಗಳು ಸಾರ್ವಜನಿಕರ ಸಲಹೆಗಳನ್ನು ಕೋರಿದ್ದರು. ಹಾಗೆಯೇ ದೇಶದ ಸಮಸ್ತ ಪ್ರಜೆಗಳೂ ರಾಷ್ಟ್ರಗೀತೆಯನ್ನು ಹಾಡಿ, ರೆಕಾರ್ಡ್ ಮಾಡಿ ಒಂದು ಜಾಲತಾಣಕ್ಕೆ...

Read moreDetails

ಆಫ್ಘಾನಿಸ್ತಾನದ ವಿಷಯದಲ್ಲಿ ಭಾರತ ಮೌನಕ್ಕೆ ಕಾರಣವೇನು?

ತಾಲಿಬಾನಿಗಳ ವಿಷಯದಲ್ಲಿ ಏನನ್ನೂ ದಿಢೀರನೇ ನಿರ್ಧರಿಸುವ, ತತಕ್ಷಣದ ನಿಲುವಿಗೆ ಬರುವ ಸ್ಥಿತಿಯಲ್ಲಿ ಕೂಡ ಭಾರತ ಇಲ್ಲ. ನಿಜಕ್ಕೂ ಇದು ನುಂಗಲೂ ಆಗದ, ಉಗಿಯಲೂ ಆಗದ ಬಿಸಿ ತುಪ್ಪವನ್ನು...

Read moreDetails

ಶ್ರಮದ ಸೈಜುಗಲ್ಲುಗಳೂ ಶೋಷಣೆಯ ಹಾಸುಗಲ್ಲುಗಳೂ

ನಾವು ಸ್ವತಂತ್ರರಾಗಿದ್ದೇವೆ ಎಂಬ ಘೋಷಣೆಯೊಡನೆ 1947ರ ಆಗಸ್ಟ್ 14ರ ನಡುರಾತ್ರಿ ವಿಧಿಯೊಡನೆ ಸಂಧಾನದ ನಡೆಸಿದ ಭಾರತ ಇಂದು 75 ವರ್ಷಗಳ ನಂತರ ಮತ್ತೊಮ್ಮೆ ನವ ಉದಾರವಾದದ ದುರ್ವಿಧಿಯೊಡನೆ...

Read moreDetails

ದೇಶ ವಿಭಜನೆಯ ಕರಾಳ ನೆನಪು ಸ್ಮರಣೆ: ಮೋದಿ ಘೋಷಣೆಯ ಅಸಲೀ ಉದ್ದೇಶವೇನು?

ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವಾಗ, ಪ್ರಧಾನಿ ಮೋದಿಯವರು ದೇಶ ವಿಭಜನೆಯ ಆರದ ಗಾಯದ ನೆನಪಿನ ದಿನವನ್ನು ಘೋಷಿಸಿದ್ದಾರೆ. ಆ ಮೂಲಕ ದೇಶದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ...

Read moreDetails

ಅಮೃತಘಳಿಗೆಯ ವಿಜೃಂಭಣೆಯೂ, ಪ್ರಜಾತಂತ್ರ ಭಾರತದ ಆತಂಕಗಳೂ

ಎರಡು ಶತಮಾನಗಳ ವಸಾಹತು ಶೋಷಣೆ ಸಂಕೋಲೆಗಳಿಂದ ವಿಮೋಚನೆ ಪಡೆದು ಒಂದು ಸ್ವತಂತ್ರ ರಾಷ್ಟ್ರವಾಗಿ ರೂಪುಗೊಂಡ ಭಾರತ ಇಂದು ತನ್ನ 75ನೆಯ ವರ್ಷವನ್ನು ಪ್ರವೇಶಿಸುತ್ತಿದೆ. ಸಾಮಾಜಿಕಾರ್ಥಿಕ ಅಸಮಾನತೆಯನ್ನು ಹೊದ್ದುಕೊಂಡೇ...

Read moreDetails

ಸಿ ಟಿ ರವಿ ಕನ್ನಡ ವಿರೋಧಿ ಧೋರಣೆಗೆ ಹೊಸ ಸೇರ್ಪಡೆ ಮೇಕೆದಾಟು ಹೇಳಿಕೆ ವಿವಾದ!

ಕಳೆದ ವಾದ ಆಗಸ್ಟ್ 5ರಂದು ಮೇಕೆದಾಟು ಯೋಜನೆ ವಿರೋಧಿಸಿ ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಮಾಡಿದಾಗ, ಅವರ...

Read moreDetails

ಅಮೃತ ಮಹೋತ್ಸವಕ್ಕೆ ಸಜ್ಜಾಗುವ ಮುನ್ನ, ಶೋಷಿತ ಮಹಿಳೆಯರ ದನಿ ಕೇಳುವಂತವರಾಗಿ

ಸ್ವತಂತ್ರ ಭಾರತ #ಆತ್ಮನಿರ್ಭರತೆಯಿಂದ 75ನೆಯ ವರ್ಷಕ್ಕೆ ಕಾಲಿಡುತ್ತಿದ್ದು ಅಮೃತ ಮಹೋತ್ಸವದ ವಿಜೃಂಭಣೆಗೆ ಸಜ್ಜಾಗುತ್ತಿದೆ. 74 ವರ್ಷಗಳು ನಡೆದು ಬಂದ ಹಾದಿಯನ್ನು ಪರಾಮರ್ಶಿಸುತ್ತಾ, ಹಿಂದಿರುಗಿ ನೋಡುತ್ತಲೇ ಮುಂದಿನ ಹೆಜ್ಜೆಗಳನ್ನು...

Read moreDetails

ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆಗಳ ಹಿಂದಿನ ಮರ್ಮವೇನು?

ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಕುರ್ಚಿಯಿಂದ ಇಳಿದ ಬಳಿಕ ರಾಜ್ಯ ಬಿಜೆಪಿಯಲ್ಲಿ ಢಾಳಾಗಿ ಎದ್ದು ಕಾಣುವ ಬದಲಾವಣೆಯ ಗಾಳಿ ಬೀಸತೊಡಗಿದೆ. ಅದು ಹಿಂದುತ್ವವಾದಿ ಪ್ರಚೋದನಕಾರಿ ಹೇಳಿಕೆಗಳ ವಿಷಯದಲ್ಲಿರಬಹುದು,...

Read moreDetails

ಅಮೃತ ಮಹೋತ್ಸವಕ್ಕೆ ಸಜ್ಜಾಗುವ ಮುನ್ನ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ

ಸ್ವತಂತ್ರ ಭಾರತ ತನ್ನ 75 ವರ್ಷಗಳನ್ನು ಪೂರೈಸಲಿದೆ. ಇಡೀ ದೇಶವೇ ಅತ್ಯುತ್ಸಾಹದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷವನ್ನು ಪ್ರವೇಶಿಸುತ್ತಿದೆ. ಸದಾ ಸಾಂಕೇತಿಕ ವೈಭವೀಕರಣದ ಮೂಲಕವೇ ವಾಸ್ತವಗಳನ್ನು ಮರೆತು...

Read moreDetails

ಸ್ವಾತಂತ್ರ್ಯೋತ್ಸವದ ಜನ್ ಕಿ ಬಾತ್

ಸಾಮಾನ್ಯವಾಗಿ ಭಾರತದ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ದೇಶದ ಪ್ರಧಾನಮಂತ್ರಿಯಾದವರು ಭಾರತದ ಸಮಸ್ತ ಜನತೆಯ ಮನದಾಭಿಲಾಷೆಗಳನ್ನು ಬಿಂಬಿಸುತ್ತಲೇ ಭವಿಷ್ಯದ ಭರವಸೆಗಳನ್ನು ಮತ್ತಷ್ಟು ಗಟ್ಟಿಗೊಳಿಸುವಂತಹ ಮಾತುಗಳನ್ನಾಡುತ್ತಾರೆ. ನೆಹರೂ ಕಾಲದಿಂದ ಮನಮೋಹನ್ ಸಿಂಗ್‍ವರೆಗೂ...

Read moreDetails

ಪೇಗಾಸಸ್: ಬಿಜೆಪಿಯ ಮಂತ್ರದೆದುರು ದಿಕ್ಕೆಟ್ಟು ಹೋಯಿತೆ ಪ್ರತಿಪಕ್ಷ ತಂತ್ರಗಾರಿಕೆ?

ಪೇಗಾಸಸ್ ಗೂಢಚಾರಿಕೆ ಮತ್ತು ಕೃಷಿ ಕಾಯ್ದೆ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ಇದೀಗ ಚರ್ಚೆಗೆ ಒಪ್ಪದ ಸರ್ಕಾರದ...

Read moreDetails

ಹಿಂದುತ್ವದ ಹಿತಾಸಕ್ತಿಯೂ ಜಾತಿಯ ಅನಿವಾರ್ಯತೆಯೂ

ಯಡಿಯೂರಪ್ಪನವರ ಪದಚ್ಯುತಿ ಮತ್ತು ಬೊಮ್ಮಾಯಿಯವರ ಅಧಿಕಾರ ಸ್ವೀಕಾರವನ್ನು ಕೇವಲ ಜಾತಿ ರಾಜಕಾರಣದ ಕೋನದಿಂದಲೇ ನೋಡಲಾಗುವುದಿಲ್ಲ. ಇಲ್ಲಿ ಜಾತಿ ಒಂದು ನಿಮಿತ್ತ ಮಾತ್ರ.

Read moreDetails

ಜಾತಿ ದೌರ್ಜನ್ಯದ ಒಲಿಂಪಿಕ್ ಆಯಾಮ

ಆತ್ಮನಿರ್ಭರಭಾರತ ಸೂಕ್ಷ್ಮ ಮನುಜ ಸಂವೇದನೆಗಳನ್ನೂ ಕಳೆದುಕೊಂಡು ಬೆತ್ತಲಾಗುತ್ತಿದೆ. ದೇಶದ ರಾಜಧಾನಿಯಲ್ಲಿ ನಡೆಯುವ ಒಂದು ಅತ್ಯಾಚಾರ ಮತ್ತು ಕೊಲೆಗೆ ಸಂತಾಪವನ್ನೂ ಸೂಚಿಸದ ಒಂದು ಸರ್ಕಾರ ಈ ದೇಶದಲ್ಲಿ ಅಧಿಕಾರದ...

Read moreDetails

ಶಕೀರಾಳನ್ನು ಜೀವಂತ ಸಮಾಧಿ ಮಾಡಿದ್ದ ಶೃದ್ಧಾನಂದ ಸ್ವಾಮಿಗೆ ಕ್ಷಮಾದಾನವೇ.? ಒಂದು ಭೀಕರ ಹತ್ಯೆಯ ಹಿಂದಿನ ಕತೆಯ ಡಿಟೇಲ್ಸ್

ಆಸ್ತಿಗಾಗಿ ಕೊಲೆ ಮಾಡಿದ ಶೃಧ್ಧಾನಂದ ಸ್ವಾಮಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಈಗ ಅವರು ತಮ್ಮ ವಯಸ್ಸಿನ ಕಾರಣ ಮುಂದಿಟ್ಟು ತಮಗೆ ಸೆರೆವಾಸ ಮುಕ್ತಿ ನೀಡಬೇಕು ಎಂದು ರಾಷ್ಟ್ರಪತಿಗಳಿಗೆ ...

Read moreDetails

ವಿಶ್ವಗುರು ಭಾರತದಲ್ಲಿ ಮತ್ತೊಂದು ಕಾಮಕ್ರೌರ್ಯ: ದೆಹಲಿಯ ಹಳೆ ನಂಗ್ಲೀಯಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಆ ಪುಟಾಣಿಗೆ ಇನ್ನೂ 9 ವರ್ಷ. ಹೆಸರು ತಾರ. ಆಡಿ, ನಲಿದು ಬದುಕ ಬೇಕಿತ್ತು ಆ ಕೂಸು. ಆದರೆ ನಾಲ್ವರು ನರರಾಕ್ಷಸರ ಕಾಮದ ತೆವಲಿಗೆ ಆ ಒಂಬತ್ತು...

Read moreDetails

ಸಾಹಿತ್ಯ ಪರಿಚಾರಕರೋ ಸಂಘ ಪ್ರಚಾರಕರೋ?

ಮೈಸೂರಿನ ಎನ್‍ಟಿಎಂಎಸ್ ಶಾಲೆಯ ವಿವಾದ ಮೂಲತಃ ಎರಡು ಸಾಂಸ್ಕೃತಿಕ ನೆಲೆಗಳ ನಡುವಿನ ಸಂಘರ್ಷ. ಶಿಕ್ಷಣ, ಜನಪರ ಪರಂಪರೆ ಮತ್ತು ಇತಿಹಾಸ ಒಂದೆಡೆಯಾದರೆ ಆಧುನಿಕ ಸಾಂಸ್ಕೃತಿಕ ರಾಜಕಾರಣ, ಅಧ್ಯಾತ್ಮದ...

Read moreDetails
Page 41 of 56 1 40 41 42 56

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!