• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಪ್ರೀಂಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?: ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಹೆಚ್‌ಡಿಕೆ ಚಾಟಿ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in Top Story, ಕರ್ನಾಟಕ, ರಾಜಕೀಯ
0
ಸುಪ್ರೀಂಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?: ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಹೆಚ್‌ಡಿಕೆ ಚಾಟಿ
Share on WhatsAppShare on FacebookShare on Telegram

ಬೆಂಗಳೂರು: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

ADVERTISEMENT

ಅಲ್ಲದೆ, ನಮ್ಮ ನೆಲ ಜಲ ಭಾಷೆ ರಕ್ಷಣೆ ಹಾಗೂ ನಮ್ಮ ನೀರಿನ ಹಕ್ಕು, ರೈತರ ಪ್ರಶ್ನೆ ಬಂದಾಗ ಪ್ರತಿಪಕ್ಷಗಳು ಮಾತನಾಡದೆ ಮೌನವಾಗಿರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಕಾವೇರಿ ವಿಷಯಕ್ಕೆ ಸಂಬಂಧಿಸಿ ವಿಧಾನಸಭೆ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗುತ್ತಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿ ಅವರು ತಮ್ಮ ಅಭಿಪ್ರಾಯ ಮಂಡಿಸಿದರು.

ರಾಜಕೀಯ ಎನ್ನಬೇಡಿ:

ರಾಜ್ಯದ ನೆಲ ಜಲ ಭಾಷೆ ವಿಚಾರದಲ್ಲಿ ಪ್ರತಿಪಕ್ಷಗಳು ಪ್ರಶ್ನೆ ಮಾಡಿದರೆ, ಅದನ್ನು ರಾಜಕೀಯ ಎಂದು ಭಾವಿಸುವುದು ತಪ್ಪು. ಹಾಗೇ ಭಾವಿಸುವ ಪ್ರಶ್ನೆಯೇ ಬೇಕಿಲ್ಲ. ನೀರನ್ನು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ಈಗ ನೀವು ತಮಿಳುನಾಡಿಗೆ ನೀರು ಹರಿಸುತ್ತಿದ್ದೀರಿ. ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ಈಗ ಏನು ಸಮಜಾಯಿಷಿ ನೀಡುತ್ತೀರಿ? ಎಂದು ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅವರು ಬೇಸರ ವ್ಯಕ್ತಪಡಿಸಿದರು.

ಸರಕಾರ ಏತಕ್ಕೆ?

ನೀರು ಬೇಕಾದರೆ ರೈತರೇ ನ್ಯಾಯಾಲಯಕ್ಕೆ ಹೋಗಲಿ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಅವರು ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆ ಸರಿ ಅಲ್ಲ. ರೈತರೇ ನ್ಯಾಯಾಲಕ್ಕೆ ಹೋಗುವುದಾದರೆ ಸರಕಾರ ಏತಕ್ಕೆ ಬೇಕು? ಇಷ್ಟೆಲ್ಲಾ ವ್ಯವಸ್ಥೆ ಅಗತ್ಯ ಏನಿದೆ? ಈ ಬಗ್ಗೆ ತಪ್ಪು ತಿಳಿಯುವ ಅಗತ್ಯ ಇಲ್ಲ ಎಂದು ಕುಮಾರಸ್ವಾಮಿ ಅವರು ನೇರವಾಗಿ ಚಾಟಿ ಬೀಸಿದರು.

ಪ್ರತಿಪಕ್ಷಗಳನ್ನು ರಾಜಕೀಯ ಮಾಡಬೇಡಿ ಎಂದು ಹೇಳುತ್ತೀರಿ, ಆದರೆ ಇಂಥ ಸೂಕ್ಷ್ಮ ವಿಷಯಗಳಲ್ಲಿ ನಿಮ್ಮ ಜವಾಬ್ದಾರಿ ಏನಿದೆ? ಎಂದು ಅವರು ಮತ್ತೆ ಮತ್ತೆ  ಖಾರವಾಗಿ ಪ್ರಶ್ನಿಸಿದ ಅವರು; ನೆಲ ಜಲ ಭಾಷೆ ವಿಷಯದಲ್ಲಿ ರಾಜಕೀಯದ ಅಗತ್ಯ ಇಲ್ಲ. ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಆದರೆ, ಸರಕಾರವ್ಯು ಹೊಣೆಗಾರಿಕೆಯಿಂದ ವರ್ತಿಸಬೇಕು ಎಂದರು.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ನಮ್ಮ ಅಧಿಕಾರಿಗಳು ಉತ್ತಮ ರೀತಿಯಲ್ಲಿ ರಾಜ್ಯದ ಪರ ಅಭಿಪ್ರಾಯ ತಿಳಿಸಿದ್ದಾರೆ. ಜಲ ಸಂಕಷ್ಟದ ಬಗ್ಗೆ ವಿವರಿಸಿದ್ದಾರೆ. ಆದರೆ, ಅಲ್ಲಿ ತಮಿಳುನಾಡು ಅಧಿಕಾರಿಗಳು ಪಟ್ಟು ಹಿಡಿದು ಸಭೆಯಿಂದ ಹೊರ ನಡೆದಿದ್ದಾರೆ. ಆದರೆ, ಸರ್ವೋಚ್ಚ ನ್ಯಾಯಾಲಯಕ್ಕೆ ತಮಿಳುನಾಡು ಅರ್ಜಿ ಹಾಕಿದಾಗ ನಾವು ಅಷ್ಟೇ ವೇಗದಿಂದ ಆಕ್ಷೇಪಣಾ ಅರ್ಜಿ ಸಲ್ಲಿಸಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರತಿಪಾದಿಸಿದರು.

ಹಿಂದೆ ದೇವೇಗೌಡರು ಸೇರಿದಂತೆ ಇನ್ನೂ ಹಲವರು ಮುಖ್ಯಮಂತ್ರಿಗಳಾಗಿದ್ದಾಗ ಇಂಥ ಪರಿಸ್ಥಿತಿ ಎದುರಾದಾಗ ಅದನ್ನು ಹೇಗೆ ಎದುರಿಶಾಲಾಯಿತು ಎಂಬುದನ್ನು ಕಾನೂನು ತಜ್ಞರ ತಂಡದ ಮುಖ್ಯಸ್ಥ ಮೋಹನ್ ಕಾತರಕಿ ಅವರು ಈ ಸಭೆಯಲ್ಲಿಯೇ ಹೇಳಿದ್ದಾರೆ. ಅದೆಲ್ಲಾ ವಿಷಯಗಳನ್ನು ಈ ಸರಕಾರ ತಿಳಿದುಕೊಳ್ಳಬೇಕು ಎಂದರು ಅವರು.

ಯಾರ ಅಭಿಪ್ರಾಯ ಸರಿ ಇದೆ?:

ಈ ಸಭೆಯಲ್ಲಿ ಏನೇ ವಾದ ಮಾಡಿದರೂ ಕಾವೇರಿ ಪ್ರಾಧಿಕಾರ ಹಾಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ಪರಿಣಾಮಕಾರಿ ವಾದ ಮಂಡಿಸಬೇಕು. ಅಲ್ಲದೆ, ಈ ದಿನ ಪತ್ರಿಕೆಯೊಂದರಲ್ಲಿ ಸಂಕಷ್ಟ ಸೂತ್ರದ ಬಗ್ಗೆ ನಮ್ಮ ಅಡ್ವೋಕೇಟ್ ಜನರಲ್ ಅವರು ಒಂದು ಹೇಳಿಕೆ ನೀಡಿದ್ದಾರೆ. ಆ ಹೇಳಿಕೆ ಸರಿ ಇದೆಯಾ? ಆದರೆ, ಮೋಹನ್ ಕಾತರಕಿ ಅವರು ಇದಕ್ಕೆ ತದ್ವಿರುದ್ದವಾದ ಮಾಹಿತಿಯನ್ನು ಈ ಸಭೆಗೆ ನೀಡಿದ್ದಾರೆ. ಹಾಗಾದರೆ, ಯಾರ ಮಾಹಿತಿ ಸರಿ ಇದೆ? ನನಗೆ ತಿಳಿದಿರುವ ಮಾಹಿತಿಯಂತೆ ಸಂಕಷ್ಟ ಸಮಯದಲ್ಲಿ ನೀರನ್ನು ಹಂಚಿಕೊಳ್ಳುವ ಬಗ್ಗೆ ಯಾವುದೇ ಸೂತ್ರ, ಪರಿಹಾರ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags: HD KumaraswamyKaveriWater Disputewater releaseಬಿಜೆಪಿಸಿದ್ದರಾಮಯ್ಯ
Previous Post

ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ 3 ಲ್ಯಾಂಡ್: ಇಸ್ರೊ ಪ್ರಕಟ

Next Post

ಜಲ ವಿವಾದ | ಸಂಕಷ್ಟ ಹಂಚಿಕೆ ಸೂತ್ರ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಜಲ ವಿವಾದ | ಸಂಕಷ್ಟ ಹಂಚಿಕೆ ಸೂತ್ರ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada