Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸುಪ್ರೀಂಕೋರ್ಟ್​ನಲ್ಲಿ ಕಾವೇರಿ ನೀರು ವಿವಾದ.. ನೀರು ಬಿಡಿ ಅಷ್ಟೇ..

ಲಿಖಿತ್‌ ರೈ

ಲಿಖಿತ್‌ ರೈ

September 21, 2023
Share on FacebookShare on Twitter

ಕರ್ನಾಟಕಕ್ಕೆ ಕಾವೇರಿ ವಿಚಾರದಲ್ಲಿ ಮತ್ತೆ ಸುಪ್ರೀಂಕೋರ್ಟ್​ನಲ್ಲೂ ಹಿನ್ನಡೆ ಆಗಿದೆ. ಪ್ರತಿದಿನ ಸುಯಮಾರು 6,400 ಕ್ಯೂಸೆಕ್​ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಬೇಕು ಎಂದು ತಮಿಳುನಾಡು ಪರ ಹಿರಿಯ ವಕೀಲ ಮುಕುಲ್​ ರೊಹ್ಟಗಿ ಸುಪ್ರೀಂಕೋರ್ಟ್ ವಾದ ಮಂಡನೆ ಮಾಡಿದ್ದಾರೆ. ಆದರೆ ಅಷ್ಟು ಪ್ರಮಾಣದ ನೀರು ಬಿಡುಗಡೆ ಸಾಧ್ಯವಿಲ್ಲ. ಕರ್ನಾಟಕದಲ್ಲಿ ಮಳೆಯಾಗಿಲ್ಲ, ಜಲಾಶಯದಲ್ಲಿ ನೀರಿಲ್ಲ. ಸಂಕಷ್ಟದ ಸಮಯದಲ್ಲೂ CWMA ನೀಡಿದ್ದ ಸೂಚನೆಯನ್ನು ಪಾಲಿಸಿದ್ದೇವೆ. ಸದ್ಯದ ನೀರಿನ ಲಭ್ಯತೆ ಆಧಾರದಲ್ಲಿ ಕರ್ನಾಟಕ 2600 ಕ್ಯೂಸೆಕ್ ನೀರು ಬಿಡಲು ಸಾಧ್ಯವಿದೆ ಅಂತಾ ಸುಪ್ರೀಂಕೋರ್ಟ್ ಗೆ ತಿಳಿಸಿದ ಕರ್ನಾಟಕ ಪರ ವಕೀಲ ಶ್ಯಾಮ್​ ದಿವಾನ್​.

ಹೆಚ್ಚು ಓದಿದ ಸ್ಟೋರಿಗಳು

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

ಚಾರ್‌ಧಾಮ್‌ ಹಾದಿಗೆ ದುಡಿಮೆಗಾರರ ಹಾಸುಗಲ್ಲು : ನಾ ದಿವಾಕರ ಅವರ ಬರಹ ಭಾಗ – 2

Bank: 18 ಕೋಟಿ ರೂಪಾಯಿ ದರೋಡೆ

CWMA ಆದೇಶಕ್ಕೆ ಮಧ್ಯಪ್ರವೇಶ ಮಾಡಲ್ಲ ಎಂದ ಸುಪ್ರೀಂ

ಪ್ರತಿದಿನ 12, 500 ಕ್ಯೂಸೆಕ್​ ನೀರು ಬಿಡಬೇಕಿರುವ ಕರ್ನಾಟಕ, ತಮಿಳುನಾಡಿದೆ 1200 ಕ್ಯೂಸೆಕ್​ ನೀರು ಹರಿಸುತ್ತಿದೆ ಇದು ಯಾವ ನ್ಯಾಯ ಎಂದು ತಮಿಳುನಾಡು ಸುಪ್ರೀಂಕೋರ್ಟ್​ಗೆ ಮನವರಿಕೆ ಮಾಡಲು ಯಶಸ್ವಿಯಾಗಿದೆ. CWMA ಆದೇಶ ಮಾಡಿದಷ್ಟೂ ನೀರನ್ನು ಬಿಡುತ್ತಿಲ್ಲ ಎಂದು ಗಮನಸೆಳೆಯುವ ವಾದವನ್ನು ಮಾನ್ಯ ಮಾಡಿದ ಸುಪ್ರೀಂಕೋರ್ಟ್​, ಅಂತಿಮವಾಗಿ ಯಥಾಸ್ಥಿತಿ ಕಾಯ್ದುಕೊಳ್ಳುವ ಮೂಲಕ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ.. ಮುಂದಿನ ಎರಡು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ಹೇಳಿರುವ ಸುಪ್ರೀಂಕೋರ್ಟ್, ಹದಿನೈದು ದಿನಗಳ ಬಳಿಕ ಮತ್ತೆ ಸಭೆ ನಡೆಸುವಂತೆ CWMAಗೂ ಸೂಚನೆ ನೀಡಿದೆ.

ಕರ್ನಾಟಕ ಕಂಗಾಲು ದೆಹಲಿಯಲ್ಲಿ ತುರ್ತು ಸಭೆ.. ಮುಂದೇನು..?

CWMA ಆದೇಶದ ಪ್ರಕಾರ ಕರ್ನಾಟಕದಿಂದ ತಮಿಳುನಾಡಿಗೆ ಸದ್ಯ 4,500 ಕ್ಯೂಸೆಕ್ ನೀರು ಹರಿಸಲಾಗ್ತಿದೆ. ಆದರೂ ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಪದೇ ಪದೇ ಅನ್ಯಾಯ ಆಗುತ್ತಿದ್ದು, ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಜಲಸಂಪನ್ಮೂಲ ಖಾತೆ ಸಚಿವ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹಾದೇವಪ್ಪ , ಚೆಲುವರಾಯಸ್ವಾಮಿ, ನವದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸಭೆಯಲ್ಲಿ ಉಪಸ್ಥಿತರಿದ್ದು, ಸುಪ್ರೀಂಕೋರ್ಟ್​ ಆದೇಶವನ್ನ ಪಾಲಿಸಬೇಕೆ ಅಥವಾ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕೆಎನ್ನುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಕರ್ನಾಟಕದ ಪರಿಸ್ಥಿತಿ ಪರಿಶೀಲನೆ ಮಾಡದೆ ಆದೇಶ ಹೇಗೆ..?

ಕಾವೇರಿ ನಿಯಂತ್ರಣ ಆಯೋಗ ಹಾಗು ಕಾವೇರಿ ನಿರ್ವಹಣಾ ಪ್ರಾಧಿಕಾರದ ಶಿಫಾರಸುಗಳು ಮತ್ತು ಆದೇಶಗಳ ವಿರುದ್ಧದ ಮಧ್ಯಂತರ ಅರ್ಜಿಗಳ ಮೇಲೆ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಣೆ ಮಾಡಿದೆ. ಇದೇ ವೇಳೆ ಸಂಕಷ್ಟ ಸೂತ್ರದ ಅಗತ್ಯತೆ ಬಗ್ಗೆ ವಕೀಲ ದುಷ್ಯಂತ ದವೇ ಪ್ರಸ್ತಾಪಿಸಿದ್ದಾರೆ. ಸುಪ್ರೀಂಕೋರ್ಟ್​ನಲ್ಲಿ ರೈತರ ಪರ ದವೇ ವಾದ ಮಂಡಿಸಿದ್ದು, ಕರ್ನಾಟಕದಲ್ಲಿ ಮಳೆಯಿಲ್ಲದೆ ಸಂಕಷ್ಟ ಎದುರಾಗಿದೆ ಎಂದು ಅರ್ಥ ಮಾಡಿಸಲು ಯತ್ನಿಸಿದ್ದಾರೆ. ಆದರೆ ಸಂಕಷ್ಟ ಪರಿಶೀಲನೆಗೆ ತಜ್ಞರ ಸಮಿತಿ ಇದೆಯಲ್ಲ ಎಂದಿದ್ದಾರೆ ನ್ಯಾಯಮೂರ್ತಿ ಬಿ ಆರ್ ಗವಾಯಿ. ಸದ್ಯದ ವಾಸ್ತವ ಪರಿಸ್ಥಿತಿ ಅಧ್ಯಯನ ಮಾಡಲು ತಜ್ಞರು ಬರಬೇಕು ಎಂದ ವಕೀಲ ಮೋಹನ್ ಕಾತರಕಿ ಮನವಿ ಮಾಡಿಕೊಂಡಿದ್ದಾರೆ. ಆದರೂ ಕರ್ನಾಟಕಕ್ಕೆ ಮಾತ್ರ ಬರೆ ಮೇಲೆ ಬರೆ ಬೀಳುತ್ತಿರುವುದು ಮಾತ್ರ ಸುಳ್ಳಲ್ಲ.

ಕೃಷ್ಣಮಣಿ

RS 500
RS 1500

SCAN HERE

Pratidhvani Youtube

«
Prev
1
/
6193
Next
»
loading
play
ಸಮೀಕ್ಷೆ ನೋಡಿ ಶಾಕ್ ಆಯ್ತು..!#siddaramaiah #dkshivakumar #ctravi #bjp #congress #brs #telangana
play
ಸಿಎಂ ಗೆ ಮನವಿ ಮಾಡಿದ ಸಿಟಿ ರವಿ..! #siddaramaiah #dkshivakumar #ctravi #bjp #congress #shcool #children
«
Prev
1
/
6193
Next
»
loading

don't miss it !

ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ
ಅಂಕಣ

ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ

by Prathidhvani
November 27, 2023
ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌
Top Story

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್‌ ಭೀತಿ – ಮುಜಾಹಿದ್ದೀನ್‌ ಹೆಸರಲ್ಲಿ ಬೆದರಿಕೆ

by Prathidhvani
December 1, 2023
ಚಾರ್‌ಧಾಮ್‌ ಹಾದಿಗೆ ದುಡಿಮೆಗಾರರ ಹಾಸುಗಲ್ಲು : ನಾ ದಿವಾಕರ ಅವರ ಬರಹ ಭಾಗ – 2
ಅಂಕಣ

ಚಾರ್‌ಧಾಮ್‌ ಹಾದಿಗೆ ದುಡಿಮೆಗಾರರ ಹಾಸುಗಲ್ಲು : ನಾ ದಿವಾಕರ ಅವರ ಬರಹ ಭಾಗ – 2

by Prathidhvani
December 2, 2023
ಕನಕ ನಾಯಕ: ಬ್ರಾಹ್ಮಣ್ಯದ ಒಳಹೊಕ್ಕು ಬ್ರಾಹ್ಮಣ್ಯವನ್ನು ಟೀಕಿಸಿದ ಸಂತ – ಡಾ. ಜೆ ಎಸ್ ಪಾಟೀಲ ಅವರ ಬರಹ
ಅಂಕಣ

ಕನಕ ನಾಯಕ: ಬ್ರಾಹ್ಮಣ್ಯದ ಒಳಹೊಕ್ಕು ಬ್ರಾಹ್ಮಣ್ಯವನ್ನು ಟೀಕಿಸಿದ ಸಂತ – ಡಾ. ಜೆ ಎಸ್ ಪಾಟೀಲ ಅವರ ಬರಹ

by ಡಾ | ಜೆ.ಎಸ್ ಪಾಟೀಲ
December 1, 2023
ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ  ಡಿ ವೈ ಚಂದ್ರಚೂಡ್​
ಕರ್ನಾಟಕ

ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ ಡಿ ವೈ ಚಂದ್ರಚೂಡ್​

by Prathidhvani
November 25, 2023
Next Post
ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ;  ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ; ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ

ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ: ಬೊಮ್ಮಾಯಿ

ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ: ಬೊಮ್ಮಾಯಿ

16 ಎಎಸ್‌ಐಗಳಿಗೆ ಪಿಎಸ್‌ಐ ಮುಂಭಡ್ತಿ – ಶಶಿಕುಮಾರ್, ಕುಲದೀಪ್ ಮಾಡಿ ತೋರಿಸಿದ ಅನುಪಮ್ ಅಗರ್ವಾಲ್

16 ಎಎಸ್‌ಐಗಳಿಗೆ ಪಿಎಸ್‌ಐ ಮುಂಭಡ್ತಿ - ಶಶಿಕುಮಾರ್, ಕುಲದೀಪ್ ಮಾಡಿ ತೋರಿಸಿದ ಅನುಪಮ್ ಅಗರ್ವಾಲ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist