• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಪರೇಷನ್‌ ಕಮಲ ಯಶಸ್ವಿಗೊಳಿಸಲು ನನ್ನ ವಿರುದ್ಧ ಸಿಬಿಐ ತನಿಖೆ: ದಿಲ್ಲಿ DCM ಮನೀಶ್‌ ಸಿಸೋಡಿಯಾ ಗಂಭೀರ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
October 18, 2022
in Top Story, ದೇಶ
0
ಆಪರೇಷನ್‌ ಕಮಲ ಯಶಸ್ವಿಗೊಳಿಸಲು ನನ್ನ ವಿರುದ್ಧ ಸಿಬಿಐ ತನಿಖೆ: ದಿಲ್ಲಿ DCM ಮನೀಶ್‌ ಸಿಸೋಡಿಯಾ ಗಂಭೀರ ಆರೋಪ
Share on WhatsAppShare on FacebookShare on Telegram

ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ರಾಜಕೀಯ ಎದುರಾಳಿಗಳನ್ನು ಸದೆಬಡಿಯಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂಬ ಆರೋಪಗಳು ವ್ಯಾಪಕವಾಗಿದೆ. ಇದಕ್ಕೆ ಪೂರಕವೆನಿಸುವಂತೆ ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿಯೇತರ ಪಕ್ಷಗಳ ನಾಯಕರ ಹಾಗೂ ಸಂಘಟನೆಗಳ ಮೇಲೆ ಇಡಿ, ಸಿಬಿಐ, ಎನ್‌ಐಎ ಸೇರಿದಂತೆ ಕೇಂದ್ರೀಯ ತನಿಖಾ ದಳಗಳ ದಾಳಿಗಳು ನಿರಂತರವಾಗಿದೆ.

ADVERTISEMENT

ಈ ನಡುವೆ,  ದೆಹಲಿ ಅಬಕಾರಿ ನೀತಿ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ವಿರುದ್ಧ ಸಿಬಿಐ ವಿಚಾರಣೆ ತೀವ್ರ ರಾಜಕೀಯ ತಿರುವುಗಳನ್ನು ಪಡೆಯುತ್ತಿದೆ. ಸಿಸೋಡಿಯಾರನ್ನು ಸಿಬಿಐ ಸೋಮವಾರ 9 ಗಂಟೆ ವಿಚಾರಣೆ ನಡೆಸಿದ್ದು,  ವಿಚಾರಣೆ ಬಳಿಕ ಮಾತನಾಡಿದ ಸಿಸೋಡಿಯಾ, ಆಮ್ ಆದ್ಮಿ ಪಕ್ಷ ಬಿಡುವಂತೆ ಸಿಬಿಐ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹಾಕಿದ್ದಾರೆ, ಅಲ್ಲದೆ, ದೆಹಲಿ ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ಆಮಿಷ ಒಡ್ಡಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಿದ್ದಾರೆ.

‘10,000 ಕೋಟಿ ರೂ. ಅಬಕಾರಿ ಹಗರಣ ನಡೆದಿದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ಸಿಬಿಐ ಬಳಿ ಹಗರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ . ಇದು ನಕಲಿ ಪ್ರಕರಣ. ನನ್ನ ವಿರುದ್ಧ ದಾಖಲಿಸಿರುವ ನಕಲಿ ಪ್ರಕರಣವು ದೆಹಲಿಯಲ್ಲಿ ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಲು ನಡೆಸಿರುವ ಪಿತೂರಿʼ ಸಿಸೋಡಿಯಾ ಹೇಳಿದ್ದಾರೆ.

‘ಎಎಪಿ ತೊರೆಯುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ದೆಹಲಿ ಸಿಎಂ ಸ್ಥಾನ ಅಥವಾ ಜೈಲು ಶಿಕ್ಷೆ  ಯಾವುದು ಬೇಕೊ ಆಯ್ಕೆ ಮಾಡಿಕೊಳ್ಳಿ ಎಂದು ಸಿಬಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ’ಎಂದು ಸಿಸೋಡಿಯಾ ಗಂಭೀರ ಆರೋಪ ಹೊರಿಸಿದ್ದಾರೆ.

ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದ್ದು, ದಿಲ್ಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ.  ಮದ್ಯದಂಗಡಿ ಪರವಾನಗಿಗಾಗಿ ಖಾಸಗಿ ವ್ಯಕ್ತಿಗಳು ರಾಜಕೀಯ ಮುಖಂಡರಿಗೆ ಕಿಕ್ ಬ್ಯಾಕ್ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

 ಆರೋಪ ನಿರಾಕರಿಸಿದ ಸಿಬಿಐ

 ವಿಚಾರಣೆ ವೇಳೆ ಎಎಪಿ ತೊರೆಯಲು ಒತ್ತಡ ಹಾಕಲಾಯಿತು ಎಂಬ ಮನೀಶ್ ಸಿಸೋಡಿಯಾ ಮಾಡಿರುವ ಆರೋಪವನ್ನು ಸಿಬಿಐ ತಳ್ಳಿ ಹಾಕಿದ್ದು, ಎಫ್‌ಐಆರ್‌ನಲ್ಲಿರುವ ಆರೋಪಗಳು ಮತ್ತು ತನಿಖೆಯ ಸಂದರ್ಭದಲ್ಲಿ ಇದುವರೆಗೆ ಸಂಗ್ರಹಿಸಲಾದ ಸಾಕ್ಷ್ಯಗಳ ಕುರಿತು ಮಾತ್ರ ಸಿಸೋಡಿಯಾ ಅವರನ್ನು ಪ್ರಶ್ನಿಸಲಾಗಿದೆ ಎಂದು ತಿಳಿಸಿದೆ.

‘ಸಿಬಿಐ ಈ ಆರೋಪಗಳನ್ನು ಬಲವಾಗಿ ನಿರಾಕರಿಸುತ್ತದೆ. ಎಫ್‌ಐಆರ್‌ನಲ್ಲಿ ಅವರ ವಿರುದ್ಧದ ಆರೋಪಗಳ ಅನ್ವಯ ಸಿಸೋಡಿಯಾ ಅವರ ವಿಚಾರಣೆಯನ್ನು ವೃತ್ತಿಪರ ಮತ್ತು ಕಾನೂನು ರೀತಿಯಲ್ಲಿ ಕಟ್ಟುನಿಟ್ಟಾಗಿ ನಡೆಸಲಾಗಿದೆ ಎಂದು ಪುನರುಚ್ಚರಿಸುತ್ತದೆ. ಪ್ರಕರಣದ ತನಿಖೆಯು ಕಾನೂನಿನ ಪ್ರಕಾರ ಮುಂದುವರಿಯುತ್ತದೆ’ಎಂದು ಸಿಬಿಐ ಹೇಳಿದೆ.

Previous Post

ಬೆಂಗಳೂರಿನಲ್ಲಿ ದಾಖಲೆಯ ಮಳೆ; ನವೆಂಬರ್ ಕೊನೆಯವರೆಗೂ ಬೆಂಗಳೂರಲ್ಲಿ ಮಳೆ ಸಾಧ್ಯತೆ !

Next Post

ಒತ್ತುವರಿ ತೆರವು ಮಾಡಿದ ಜಾಗದಲ್ಲಿ ಕಂದಾಯ ನೀಲಿನಕ್ಷೆಯಂತೆ ರಾಜಕಾಲುವೆ ನಿರ್ಮಾಣಕ್ಕೆ‌ ಪಾಲಿಕೆ ಸಿದ್ಧತೆ !

Related Posts

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Top Story

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 25, 2026
0

ಬೆಂಗಳೂರು : ಪೆಟ್ರೋಲ್ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ದರ...

Read moreDetails
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
ಬಿಬಿಎಂಪಿ ಡಿ ಲಿಮಿಟೇಷನ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ : ನಾಲ್ಕೇ ದಿನಕ್ಕೆ 2 ಸಾವಿರ Objection Letter.!

ಒತ್ತುವರಿ ತೆರವು ಮಾಡಿದ ಜಾಗದಲ್ಲಿ ಕಂದಾಯ ನೀಲಿನಕ್ಷೆಯಂತೆ ರಾಜಕಾಲುವೆ ನಿರ್ಮಾಣಕ್ಕೆ‌ ಪಾಲಿಕೆ ಸಿದ್ಧತೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada