• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕಸರತ್ತು: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

Shivakumar A by Shivakumar A
July 2, 2021
in ದೇಶ
0
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕಸರತ್ತು: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ಸಚಿವ ಸಂಪುಟದ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಮುಂಬರುವ ವಿಧಾನಸಭೆ ಚುನಾವಣೆಗಳು ಹಾಗೂ 2024ರ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟು ಈ ಬಾರಿಯ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ. 81 ಸಚಿವರನ್ನು ನೇಮಿಸಲು ಅವಕಾಶವಿದ್ದು, ಸದ್ಯಕ್ಕೆ ಕೇವಲ 53 ಸಚಿವರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅಂದರೆ, ಇನ್ನೂ 28 ಜನ ಸಂಸದರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆಯಿದೆ. ಈ ಬಾರಿ ಸಚಿವ ಸ್ಥಾನ ಪಡೆಯಲಿರುವ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ. 

ADVERTISEMENT

ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೇರಲು ಅವಕಾಶ ಮಾಡಿಕೊಟ್ಟ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಈ ಬಾರಿ ಸಚಿವ ಸ್ಥಾನ ಖಚಿತವೆನ್ನಲಾಗುತ್ತಿದೆ. ಅಸ್ಸಾಂನಲ್ಲಿ ಹಿಮಂತ್ ಬಿಸ್ವಾ ಅವರಿಗೆ ಸಿಎಂ ಆಗಲು ಅನುವು ಮಾಡಿಕೊಟ್ಟ ಸರ್ಬಾನಂದ ಸೋನೋವಾಲ್ ಅವರು ಕೂಡಾ ಸಚಿವ ಸ್ಥಾನದ ರೇಸ್ ನಲ್ಲಿದ್ದಾರೆ. 

ಜಫರ್ ಇಸ್ಲಾಂ

ಬಿಹಾರದಿಂದ ಲೋಕಸಭೆಗೆ ಪ್ರತಿನಿಧಿಸುವವರ ಪೈಕಿ ಎನ್ ಡಿ ಎ ಮಿತ್ರಪಕ್ಷವಾಗಿರುವ ಜೆಡಿಯುಗೆ ಸಚಿವ ಸ್ಥಾನ ಲಭಿಸಲಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 2019ರಲ್ಲಿ ಕೇಂದ್ರ ಬಿಜೆಪಿಯೊಂದಿಗೆ ಮುನಿಸಿಕೊಂಡಿದ್ದ ನಿತೀಶ್ ಕುಮಾರ್ ಸಚಿವ ಸ್ಥಾನವನ್ನು ನಿರಾಕರಿಸಿದ್ದರು. ಈಗ ಮತ್ತೆ ಅವರಿಗೆ ಮಣೆ ಹಾಕಲಾಗುವುದೋ ಇಲ್ಲವೋ ಎಂಬುದು ಕಾದು ನೋಡಬೇಕಷ್ಟೇ. ಈ ಬಾರಿ ಕೇಂದ್ರದಲ್ಲಿ ಎರಡು ಸಚಿವ ಸ್ಥಾನ ಪಡೆಯಬೇಕೆಂದು ನಿತೀಶ್ ಆಶಿಸಿದ್ದಾರೆ. ಜೆಡಿಯು ಸಂಸದರಾದ ಲಲ್ಲನ್ ಸಿಂಗ್, ರಾಮ್ ನಾಥ್ ಠಾಕುರ್ ಹಾಗೂ ಸಂತೋಷ್ ಖುಷ್ವಾಹ ರೇಸ್ ನಲ್ಲಿದ್ದಾರೆ. 

ರಾಮ್ ನಾಥ್ ಠಾಕೂರ್

ಎಲ್ ಜೆ ಪಿಯ ರಾಮ್ ವಿಲಾಸ್ ಪಾಸ್ವಾನ್ ನಿಧನದ ನಂತರ ಖಾಲಿಯಾಗಿರುವ ಸಚಿವ ಸ್ಥಾನಕ್ಕೆ, ಅವರ ಪುತ್ರ ಚಿರಾಗ್ ಪಾಸ್ವಾನ್ ಆಯ್ಕೆಯಾಗುತ್ತಾರೆ ಎಂಬ ಭರವಸೆ ಇತ್ತು. ಆದರೆ, ಕಳೆದೆರಡು ವಾರದಲ್ಲಿ ಎಲ್ ಜೆ ಪಿ ನಾಯಕರು ಚಿರಾಗ್ ವಿರುದ್ದವೇ ಬಂಡೆದ್ದರಿಂದ, ಈಗ ಈ ಸ್ಥಾನ ಚಿರಾಗ್ ಕುಟುಂಬದ ಮತ್ತೋರ್ವ ಸಂಸದ ಪಶುಪತಿ ಪರಾಸ್ ಅವರಿಗೆ ಲಭಿಸುವ ಸಾಧ್ಯತೆಯಿದೆ.
ಬಿಹಾರದ ಹಿಂದಿನ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ, ಮಹಾರಾಷ್ಟ್ರದ ನಾರಾಯಣ ರಾಣೆ ಮತ್ತು ಹಿರಿಯ ನಾಯಕ ಭೂಪೇಂದ್ರ ಯಾದವ್ ಅವರಿಗೆ ಸಚಿವ ಸ್ಥಾನ ಬಹತೇಕ ಖಚಿತವಾಗಿದೆ. 

ಲಲ್ಲನ್ ಸಿಂಗ್

ಸತತ ಒಂದು ತಿಂಗಳ ಪರಾಮರ್ಶೆಯ ನಂತರ ಈಗಿರುವ ಸಚಿವರ ಅಂಕಪಟ್ಟಿಯನ್ನು ಕೂಡಾ ತಯಾರಿಸಲಾಗಿದೆ. ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ಉತ್ತರ ಪ್ರದೇಶದಕ್ಕೆ ಈ ಬಾರಿ ಬಂಪರ್ ಆಫರ್ ಲಭಿಸುವ ಸಾಧ್ಯತೆಯಿದೆ. ವರುಣ್ ಗಾಂಧಿ, ರಾಮ್ ಶಂಕರ್ ಕಠೇರಿಯಾ, ಅನಿಲ್ ಜೈನ್, ರೀಟಾ ಬಹುಗುಣ ಜೋಷಿ ಮತ್ತು ಜಫರ್ ಇಸ್ಲಾಂ ಅವರು ಆಕಾಂಕ್ಷಿಗಳಾಗಿದ್ದಾರೆ. 

ಉತ್ತರಾಖಂಡದಿಂದ ಅಜಯ್ ಭಟ್ ಅಥವಾ ಅನಿಲ್ ಬಲೂನಿ ಹಾಗೂ ಕರ್ನಾಟಕದಿಂದ ಅಚ್ಚರಿಯ ಆಯ್ಕೆಯಾಗಿ ಯುವ ಸಂಸದ ಪ್ರತಾಪ ಸಿಂಹ ಅವರು ಸಚಿವರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. 

ಇತ್ತೀಚಿಗೆ ಚುನಾವಣೆ ಸೋತಿರುವ ಪಶ್ಚಿಮ ಬಂಗಾಳದಿಂದ ನಾಯಕರನ್ನು ಕೂಡಾ ಸಚಿವ ಸ್ಥಾನಕ್ಕೆ ಸೇರಿಸುವ ಆಲೋಚನೆ ಬಿಜೆಪಿ ಹೈಕಮಾಂಡ್ ಹೊಂದಿದ್ದು, ಇದರಿಂದ ಬಂಗಾಳದಲ್ಲಿ ಪಕ್ಷ ಸಂಘಟನೆ ಉತ್ತಮವಾಗಿ ನಡೆಯಲಿದೆ ಎಂಬ ಲೆಕ್ಕಾಚಾರ ಹಾಕಲಾಗಿದೆ. ಒಂದು ವೇಳೆ ಬಂಗಾಳದ ನಾಯಕರಿಗೆ ಸಚಿವ ಸ್ಥಾನ ನೀಡಿದರೆ, ಜಗನ್ನಾಥ್ ಸರ್ಕಾರ್, ಶಾಂತನು ಠಾಖೂರ್ ಮತ್ತು ನಿತೀತ್ ಪ್ರಮಾಣಿಕ್ ಅವರ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ. 

ಪಶುಪತಿ ಪರಾಸ್

ಇನ್ನುಳಿದಂತೆ, ಹರ್ಯಾಣದ ಬ್ರಿಜೇಂದ್ರ ಸಿಂಗ್, ರಾಜಸ್ಥಾನದ ರಾಹುಲ್ ಕಸ್ವಾನ್, ಓಡಿಶಾದ ಅಶ್ವನಿ ವೈಷ್ಣವ್, ಮಹಾರಾಷ್ಟ್ರದಿಂದ ಪೂನಂ ಮಹಾಜನ್ ಅಥವಾ ಪ್ರೀತಂ ಮುಂಡೆ ಮತ್ತು ದೆಹಲಿಯಿಂದ ಪರ್ವೇಶ್ ವರ್ಮಾ ಅಥವಾ ಮೀನಾಕ್ಷಿ ಲೇಖಿ ಸಚಿವ ಸ್ಥಾನವನ್ನು ಅಲಂಕರಿಸಲಿದ್ದಾರೆ. 

ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರ ಹಿಡಿಯುವ ಉದ್ದೇಶದಿಂದ ಈ ಬಾರಿ ಅತ್ಯಂತ ಜಾಗರೂಕತೆಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರಧಾನಿ ಮೋದಿಯವರು, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಜತೆ ಸರಣಿ ಸಭೆಗಳನ್ನು ನಡೆಸಿದ್ದಾರೆ. 

ಈಗಾಗಲೇ ಹೆಚ್ಚುವರಿಯಾಗಿ ಇಲಾಖೆಗಳನ್ನು ಪಡೆದಿರುವ ಪ್ರಕಾಶ್ ಜಾವಡೇಕರ್, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ನಿತಿನ್ ಗಡ್ಕರಿ, ಹರ್ಷ್ ವರ್ಧನ್, ನರೇಂದ್ರ ಸಿಂಗ್ ತೋಮರ್, ರವಿಶಂಕರ್ ಪ್ರಸಾದ್, ಸ್ಮೃತಿ ಇರಾಣಿ ಹಾಗೂ ಹರ್ದೀಪ್ ಸಿಂಗ್ ಪುರಿ ಅವರು ತಮ್ಮ ಹೆಚ್ಚುವರಿ ಖಾತೆಯನ್ನು ಬಿಟ್ಟುಕೊಡಬೇಕಾದ ಸಂದರ್ಭ ಎದುರಾಗುವ ಸಾಧ್ಯತೆಯಿದೆ. 

Previous Post

ಮೂರನೇ ಅಲೆಯ ಮುಂದೆ ದೇಶದ ಜನರ ಜೀವ ಉಳಿಸುವುದೇ ಲಸಿಕಾ ವ್ಯವಸ್ಥೆ?

Next Post

ʼಗೋವಾ ಕನ್ನಡಿಗರ ಬದುಕು ಡೋಲಾಯಮಾನ ಪರಿಸ್ಥಿತಿಯಲ್ಲಿದೆʼ – ಸಾಮೂಹಿಕ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಕುಮಾರಸ್ವಾಮಿ ಆಗ್ರಹ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಹೆಚ್ ಡಿ ಕುಮಾರಸ್ವಾಮಿಗೆ ಕರೋನಾ ಪಾಸಿಟಿವ್

ʼಗೋವಾ ಕನ್ನಡಿಗರ ಬದುಕು ಡೋಲಾಯಮಾನ ಪರಿಸ್ಥಿತಿಯಲ್ಲಿದೆʼ - ಸಾಮೂಹಿಕ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಕುಮಾರಸ್ವಾಮಿ ಆಗ್ರಹ

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada