• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತೀಯ ಕಾಫಿಗೆ ವಿಶ್ವ ಮಾನ್ಯತೆ ದೊರಕಿಸಲು ಕೇಂದ್ರ ಸರ್ಕಾರ ಪ್ರಯತ್ನ ; ಸಚಿವ ಪಿಯುಷ್‌ ಗೋಯಲ್

ಪ್ರತಿಧ್ವನಿ by ಪ್ರತಿಧ್ವನಿ
December 24, 2024
in Top Story, ಇತರೆ / Others, ಕರ್ನಾಟಕ
0
ಭಾರತೀಯ ಕಾಫಿಗೆ ವಿಶ್ವ ಮಾನ್ಯತೆ ದೊರಕಿಸಲು ಕೇಂದ್ರ ಸರ್ಕಾರ ಪ್ರಯತ್ನ ; ಸಚಿವ ಪಿಯುಷ್‌ ಗೋಯಲ್
Share on WhatsAppShare on FacebookShare on Telegram

ಹಾಸನ ; ಲಕ್ಷಾಂತರ ಬೆಳೆಗಾರರು, ಕಾರ್ಮಿಕರು, ಉದ್ಯಮಿಗಳ ಪಾಲಿನ ಜೀವನಾಡಿ ಯಂತಿರುವ ಕಾಫಿ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಬದ್ದವಾಗಿದೆ ಎಂದು ಕೇಂದ್ರದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದರು.

ADVERTISEMENT

ಪಟ್ಟಣದ ಎಪಿಎಂಸಿ ಆವರಣದಲ್ಲಿ ಸೋಮವಾರ ಕರ್ನಾಟಕ ಬೆಳೆಗಾರರ ಒಕ್ಕೂಟದಿಂದ ಆಯೋಜಿಸಲಾಗಿದ್ದ ಕಾಫಿ ಬೆಳೆಗಾರರ ಸಮಾವೇಶ ಹಾಗೂ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿ, ಭಾರತದ ಕಾಫಿ ಇಂದು ಎಲ್ಲೆಡೆ ಖ್ಯಾತಿ ಗಳಿಸುತ್ತಿದೆ. ವಿದೇಶಗಳಲ್ಲಿ ಎಲ್ಲ ಕಡೆ ಭಾರತೀಯ ಕಾಫಿ ಪರಿಚಯ ಆಗಬೇಕು ಹಾಗೂ ದೇಶದ ಎಲ್ಲೆಡೆ ಮಾರುಕಟ್ಟೆ ಸೃಷ್ಟಿಸಬೇಕು.ಪ್ರಧಾನಿ ಮೋದಿ ಅವರು ವಿದೇಶಕ್ಕೆ ಹೋದಾಗ, ವಿದೇಶ ಗಣ್ಯರು ಬಂದಾಗ ಕಾಫಿಗೆ ಹೆಚ್ಚು ಪ್ರಚಾರ ಕೊಡುವಲ್ಲಿ ಗಮನ ಹರಿಸುತ್ತಾರೆ. ಕಾಫಿ ಬೆಳೆಗಾರರಿಗೆ ವಿವಿಧ ಸಬ್ಸಿಡಿಗಾಗಿ 100 ಕೋಟಿ ರೂ. ಅನುದಾನದ ಬೇಡಿಕೆಯಿದ್ದು, ಹಣಕಾಸು ಸಚಿವರ ಜತೆ ಚರ್ಚಿಸಿ ಅನುದಾನ ಬಿಡುಗಡೆಗೊಳಿಸಲಿದ್ದೇನೆ ಎಂದರು.

ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿನ ಸಂಶೋಧಕ ಡಾ. ಸುರೇಂದ್ರ ವರ್ಮಾ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗುತ್ತದೆಯಲ್ಲದೇ, ಕಾಡಾನೆಗಳ ಕಾರಿಡಾರ್ ಕಂಡುಹಿಡಿಯುವ ನಿಟ್ಟಿನಲ್ಲಿ ಉಪಗ್ರಹ ಆಧಾರಿತ ಸಂಶೋಧನೆಗೆ ಮುಂದಾಗುವುದಾಗಿ ಕೇಂದ್ರದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದರು.ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಆಯೋಜಿತ ಕಾಫಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಪಿಯೂಷ್ ಗೋಯಲ್, ಭಾರತೀಯ ಕಾಫಿಯನ್ನು ವಿಶ್ವದ ಕಾಫಿಯಾಗಿ ಪ್ರಖ್ಯಾತಿಗೊಳಿಸಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದರು.

2011ರಿಂದ ಸ್ಥಗಿತಗೊಂಡಿದ್ದ ಸಮಗ್ರ ಕಾಫಿ ಅಭಿವೃದ್ಧಿ ಯೋಜನೆ ಮರು ಅನುಷ್ಠಾನಗೊಳಿಸಲಾಗುವುದು. ಇದು ಕಾಫಿ ಗುಣಮಟ್ಟ ಹಾಗೂ ಯಾಂತ್ರೀಕರಣಕ್ಕೆ ಒತ್ತು ನೀಡಲಿದೆ.ಜತೆಗೆ, ರೈತ ಉತ್ಪಾದಕ ಕಂಪನಿಗಳ ಮೂಲಕ ಅಗತ್ಯ ಪರಿಕರಗಳನ್ನು ಒದಗಿಸಲು ಅನುಕೂಲವಾಗಲಿದೆ.ಇದರಿಂದ ಕಾಫಿಯ ಮೌಲ್ಯವರ್ಧನೆಯಾಗಲಿದೆ ಎಂದು ಗೋಯಲ್ ಹೇಳಿದ್ದಾರೆ.

ಕಾಫಿ ಅಭಿವೃದ್ಧಿಗಾಗಿ ಸ್ಟಾರ್ಟಪ್‌ಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಬಾಳೆಹೊನ್ನೂರಿನಲ್ಲಿ ಕಾಫಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಅಗತ್ಯ ಅನುದಾನ ನೀಡಲು ಕೇಂದ್ರ ಬದ್ಧವಾಗಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾತನಾಡಿದರು.

Tags: 100 crore21000applications.APMC premisesCentral government effortscoffee sectorHassanUnion Commerce Minister Piyush GoyalUnion minister HD Kumaraswamy
Previous Post

ಸತೀಶ್ ಜಾರಕಿಹೊಳಿ ಸೇರಿದಂತೆ ಹಿರಿಯ ಸಚಿವರು ಫುಲ್ ಸೈಲೆಂಟ್ ! ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣದಲ್ಲಿ ಅಂತರ ಕಾಯ್ದುಕೊಂಡ ಸಿದ್ದು ಟೀಮ್ ! 

Next Post

ಮಾಜಿ ಸಚಿವ ವರ್ತೂರು ಪ್ರಕಾಶ್ ಅರೆಸ್ಟ್ ?! ಮೂರನೇ ನೋಟೀಸ್ ಗೆ ವಿಚಾರಣೆಗೆ ಹಾಜರಾದ ವರ್ತೂರು ! 

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಮಾಜಿ ಸಚಿವ ವರ್ತೂರು ಪ್ರಕಾಶ್ ಅರೆಸ್ಟ್ ?! ಮೂರನೇ ನೋಟೀಸ್ ಗೆ ವಿಚಾರಣೆಗೆ ಹಾಜರಾದ ವರ್ತೂರು ! 

ಮಾಜಿ ಸಚಿವ ವರ್ತೂರು ಪ್ರಕಾಶ್ ಅರೆಸ್ಟ್ ?! ಮೂರನೇ ನೋಟೀಸ್ ಗೆ ವಿಚಾರಣೆಗೆ ಹಾಜರಾದ ವರ್ತೂರು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada