• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರ ಸರ್ಕಾರ ರೈತರ ಹಣ ಕಡಿತಗೊಳಿಸಿ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ:ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
November 29, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ನಬಾರ್ಡ್ 4.5% ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. ಶೇ10 ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್ ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ ಎಂದರು.‌

15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆಯಿತು. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆಗೂ ಕೊಡಲಿಲ್ಲ. ಇವೆಲ್ಲದರಿಂದ 11000 ಕೋಟಿ ರೂ ರಾಜ್ಯಕ್ಕೆ ನಷ್ಟವಾಗಿದ್ದನ್ನೂ ಪ್ರಧಾನಮಂತ್ರಿಯವರಿಗೆ ನೆನಪಿಸಿದ್ದೇವೆ. ಹೀಗಾಗಿ ಈ ಬಾರಿ ಮತ್ತೆ ನಬಾರ್ಡ್ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿದ್ದೇವೆ ಎಂದರು.

ರಾಜ್ಯದ ಸಂಸದರು ಬಾಯಿ ಬಿಡಲ್ಲ: ಮಣ್ಣಿನ ಮಗ ಮಂತ್ರಿ ಏನು ಮಾಡುತ್ತಿದ್ದಾರೆ?

ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಮಹದಾಯಿ, ಮೇಕೆದಾಟುಗೆ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.

ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

Tags: BAIRATI SURESHBJPBJP MPs electedCentral GovernmentChief Minister's Political Secretary Govindaraju.CM SiddaramaiahCongress Partyfarmers to moneylenders:Former Prime Minister Deve GowdaJDSMinisters KJ Georgereduced farmers' moneyUnion minister HD Kumaraswamy
Previous Post

ಸ್ವದೇಶ ಬಿಟ್ಟು ವಿದೇಶದಲ್ಲಿ ಬರ್ತ್​ಡೇ ಆಚರಿಸಿಕೊಂಡ ನಟಿ ರಮ್ಯಾ…

Next Post

ಸಂವಿಧಾನ ಮೌಲ್ಯಗಳೂ ತಿದ್ದುಪಡಿಯ ಹಪಹಪಿಯೂ

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post
ಸಂವಿಧಾನ ಮೌಲ್ಯಗಳೂ ತಿದ್ದುಪಡಿಯ ಹಪಹಪಿಯೂ

ಸಂವಿಧಾನ ಮೌಲ್ಯಗಳೂ ತಿದ್ದುಪಡಿಯ ಹಪಹಪಿಯೂ

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada