
ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆನವದೆಹಲಿ: ನಿಧನರಾದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಿಸಲು ಜಾಗ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದರು.ಎರಡು ಅವಧಿಗೆ ದೇಶದ ಜನತೆ ಗೌರವಿಸುವ ಪ್ರಧಾನಿಯಾಗಿದ್ದ ಸಿಂಗ್ ಅವರ ಸ್ಮಾರಕವನ್ನು ಸ್ಥಾಪಿಸುವ ಕುರಿತು ಮೋದಿ ಅವರೊಂದಿಗೆ ಮಾತನಾಡಿದ ನಂತರ ಬೆಳಗ್ಗೆ ನಡೆದ ದೂರವಾಣಿ ಸಂಭಾಷಣೆಯನ್ನು ಪ್ರಸ್ತಾಪಿಸಿ, ಡಾ ಮನಮೋಹನ್ ಸಿಂಗ್ ಅವರ ಅಂತಿಮ ವಿಧಿಗಳನ್ನು ಶನಿವಾರ (ಡಿ.28) ಅವರ ಅಂತಿಮ ವಿಧಿಗಳನ್ನು ಸ್ಮಾರಕವನ್ನು ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸುವಂತೆ ನಾನು ವಿನಂತಿಸಿದ್ದೇನೆ, ಅದು ಭಾರತದ ಮಹಾನ್ ಪುತ್ರನ ಸ್ಮಾರಕವಿರುವ ಪವಿತ್ರ ಸ್ಥಳವಾಗಬೇಕಿದೆ. ಇದು ರಾಜಕಾರಣಿಗಳು ಮತ್ತು ಮಾಜಿ ಪ್ರಧಾನ ಮಂತ್ರಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿ ಅವರ ಸ್ಮಾರಕಗಳನ್ನು ಹೊಂದಿರುವ ಸಂಪ್ರದಾಯಕ್ಕೆ ಅನುಗುಣವಾಗಿದೆ ಎಂದು ಖರ್ಗೆ ತಮ್ಮ ಎರಡು ಪುಟಗಳ ಪತ್ರದಲ್ಲಿ ತಿಳಿಸಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಖರ್ಗೆ ಮತ್ತು ಡಾ. ಸಿಂಗ್ ಅವರ ಕುಟುಂಬಕ್ಕೆ ಈ ನಿರ್ಧಾರವನ್ನು ತಿಳಿಸಿದ್ದಾರೆ. ಡಾ. ಸಿಂಗ್ ಅವರ ಪರಂಪರೆಯನ್ನು ಸಂರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
“ಸ್ಮಾರಕಕ್ಕಾಗಿ ಟ್ರಸ್ಟ್ ರಚನೆ ಮತ್ತು ಜಾಗದ ಹಂಚಿಕೆಯನ್ನು ಅಂತಿಮಗೊಳಿಸಿರುವುದರಿಂದ, ಅಂತ್ಯಕ್ರಿಯೆ ಮತ್ತು ಔಪಚಾರಿಕತೆಗಳು ಈ ಮಧ್ಯೆ ಮುಂದುವರಿಯಬಹುದು” ಎಂದು ಗೃಹ ಸಚಿವಾಲಯ ಹೇಳಿದೆ.

ಶನಿವಾರ ಬೆಳಗ್ಗೆ 11:45ಕ್ಕೆ ನಿಗದಿಯಾಗಿದ್ದ ಡಾ. ಸಿಂಗ್ ಅವರ ಅಂತಿಮ ಸಂಸ್ಕಾರಕ್ಕೆ ದೆಹಲಿಯ ನಿಗಮಬೋಧ್ ಘಾಟ್ ಅನ್ನು ನಿಯೋಜಿಸುವ ಸರ್ಕಾರದ ನಿರ್ಧಾರದ ಬಗ್ಗೆ ಕಾಂಗ್ರೆಸ್ ಅತೃಪ್ತಿ ವ್ಯಕ್ತಪಡಿಸಿದೆ ಎಂಬ ವರದಿಗಳ ನಡುವೆ ಸರ್ಕಾರ ಈ ನಿರ್ಧಾರ ಮಾಡಿದೆ.
ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಡಿಸೆಂಬರ್ 26 ರಂದು ಡಾ. ಮನಮೋಹನ್ ಸಿಂಗ್ ನಿಧನರಾದರು.
ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆಯ ಹಿಂಭಾಗದಲ್ಲಿ ಮನಮೋಹನ್ ಸಿಂಗ್ರ ಅಂತ್ಯಕ್ರಿಯೆ ನಡೆಯುವ ನಿಗಮಬೋಧ್ ರುದ್ರಭೂಮಿ ಇದೆ. ಯಮುನಾ ನದಿಯ ತಟದಲ್ಲಿ ಇರುವ ಈ ರುದ್ರ ಭೂಮಿಯನ್ನು ಪಾಂಡವರಲ್ಲಿ ಹಿರಿಯನಾಗಿರುವ ಯುದ್ಧಿಷ್ಠಿರ ಈ ರುದ್ರ ಭೂಮಿಯನ್ನು ನಿರ್ಮಿಸಿದ ಎಂದು ಪುರಾಣಗಳಲ್ಲಿ ಉಲ್ಲೇಖೀಸಲಾಗಿದೆ. ದೇಶದ ವಿವಿಧ ಭಾಗಗಳಿಂದ ನೂರಾರು ಮಂದಿ ಅಲ್ಲಿಗೆ ಆಗಮಿಸಿ ಅಸುನೀಗಿದ ತಮ್ಮವರ ಅಂತ್ಯಕ್ರಿಯೆ ನಡೆಸುತ್ತಾರೆ. ಪ್ರತಿ ದಿನ ಈ ಸ್ಥಳದಲ್ಲಿ 50ರಿಂದ 60 ಶವಗಳ ಸಂಸ್ಕಾರ ನಡೆಯುತ್ತದೆ.







