• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ:ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 7, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದೆಹಲಿ:“ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು.

Actress Ramya Came to Court: ಕೋರ್ಟ್​ ವಿಚಾರಣೆಗೆ ಬಂದ ನಟಿ ರಮ್ಯಾ, ಮಾಧ್ಯಮಗಳನ್ನ ಕಂಡು ಶಾಕ್ #pratidhvani

“ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿಯಿಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ” ಎಂದು ಹೇಳಿದರು.

“ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಕಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು. ವಿಧಾನಸಬೆ ಚಳಿಗಾಲದ ಅಧಿವೇಶನವಿದ್ದ ಕಾರಣಕ್ಕೆ ನಮ್ಮಿಂದ ವಿಳಂಬವಾಯಿತು. ನಾವು ದಿನಾಂಕ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದೇವೆ” ಎಂದರು.

“ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ಮಾತುಕತೆ ನಡೆಸಬೇಕಿರುವ ಕಾರಣಕ್ಕೆ ಶೀಘ್ರದಲ್ಲೇ ಸಭೆಗೆ ಒಂದು ದಿನಾಂಕವನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ. ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿದೆ” ಎಂದರು.

“ಈ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಲ್ಲದೇ ಕೋಲಾರದ ನೀರಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಅರಿವಿದೆ.ಕೋಲಾರದ ಕೆರೆಗಳಿಗೆ ವೃಷಭಾವತಿ ಸೇರಿದಂತೆ ಕೆ.ಸಿ ವ್ಯಾಲಿ ಯೋಜನೆಯಿಂದ ಬಳಕೆಯಾದ ನೀರನ್ನು ಶುದ್ದೀಕರಿಸಿ ತುಂಬಿಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರವೂ ಮೆಚ್ಚುಗೆ ವ್ಯಕ್ತಪಡಿಸಿತ್ತು” ಎಂದರು.

“ಪೆನ್ನಾರ್ ನದಿ ನೀರಿನ ವಿವಾದ ಕುರಿತು ಟ್ರಿಬ್ಯೂನಲ್ ಮೂಲಕ ಹೋದರೆ ತಡವಾಗುತ್ತದೆ ಹಾಗೂ ಕೋರ್ಟ್ ಮತ್ತು ವಕೀಲರ ವೆಚ್ಚ ದುಬಾರಿಯಾಗುತ್ತದೆ. ಆದ ಕಾರಣಕ್ಕೆ ಸರ್ಕಾರದ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಾವು ನೋಡುತ್ತಿದ್ದೇವೆ. ಈಗಾಗಲೇ ಅರಣ್ಯ ಇಲಾಖೆಯವರು ಅನುಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಲು ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಬೇಕಿತ್ತು. ಅವರು ಲಭ್ಯವಿಲ್ಲ.ಇದರ ನಡುವೆ ಇತರೇ ಸಚಿವರನ್ನು ಇನ್ನೊಮ್ಮೆ ಬಂದು ಭೇಟಿಯಾಗುವೆ.ಇಲಾಖೆಯ ಬಜೆಟ್ ಕೆಲಸವಿರುವ ಕಾರಣಕ್ಕೆ ಕೇಂದ್ರ ಜಲಶಕ್ತಿ ಸಚಿವರೂ ಭೇಟಿಗೆ ಸಿಗಲಿಲ್ಲ” ಎಂದು ಹೇಳಿದರು.

“ಕರ್ನಾಟಕಕ್ಕೆ ಸಂಬಂಧಿಸಿದ ನೀರಾವರಿ ಕೆಲಸಗಳು ಹಾಗೂ ಕಡತಗಳು ಸಚಿವರಾದ ವಿ.ಸೋಮಣ್ಣ ಅವರ ಗಮನಕ್ಕೆ ತರಬೇಕು ಎನ್ನುವ ನಿರ್ದೇಶನವಿರುವ ಕಾರಣಕ್ಕೆ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಕೆಲಸಗಳ ಬಗ್ಗೆ ವಿವರಣೆ ನೀಡಿದೆ” ಎಂದು ತಿಳಿಸಿದರು.

ಸುಮಾರು 5-6 ಸಾವಿರ ಉಳಿತಾಯ

ದೆಹಲಿಯಲ್ಲಿ ಘೋಷಣೆ ಮಾಡಿರುವ ಪ್ಯಾರಿ ದೀದಿ ಯೋಜನೆ ಮೂಲಕ ಮಹಿಳೆಯರಿಗೆ 2,500 ನೀಡಲಾಗುವುದು ಎಂದು ಹೇಳಲಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಕೇವಲ 2 ಸಾವಿರ ನೀಡಲಾಗುತ್ತಿದೆ ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ, “2 ಸಾವಿರ ಎನ್ನವುದು ಕೇವಲವೇ? ದೆಹಲಿ ಹಾಗೂ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಬೇರೆ, ಬೇರೆಯಿರುತ್ತದೆ. ದೆಹಲಿಯಲ್ಲಿ ಖರ್ಚು ಹೆಚ್ಚು, ಕರ್ನಾಟಕದಲ್ಲಿ ಕಡಿಮೆಯಿದೆ. ಅಲ್ಲದೇ ಕರ್ನಾಟಕದಲ್ಲಿ ಐದು ಗ್ಯಾರಂಟಿಗಳ ಮೂಲಕ ಸುಮಾರು 5-6 ಸಾವಿರ ಉಳಿತಾಯ ಪ್ರತಿ ಕುಟುಂಬಕ್ಕೆ ಆಗುತ್ತಿದೆ” ಎಂದರು.

ಕುಮಾರಸ್ವಾಮಿ ಭಂಡಾರದಲ್ಲಿ ಏನೇನಿದೆ.60 ಪರ್ಸೆಂಟ್ ಸರ್ಕಾರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಭಂಡಾರದಲ್ಲಿ ಏನೇನಿದೆ ಎನ್ನುವ ಬಗ್ಗೆ ಆನಂತರ ಮಾತನಾಡೋಣ. ಈಗ ಚರ್ಚೆ ಮಾಡುವುದು ಬೇಡ” ಎಂದರು.

ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ನನ್ನ ಹೆಸರನ್ನು ತಳುಕು ಹಾಕಿಸಿರುವುದರ ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದಿದೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಯಾವ ಐಶ್ವರ್ಯ ಗೌಡನೂ ಗೊತ್ತಿಲ್ಲ. ನನಗೆ ಸಂಬಂಧವಿಲ್ಲದ್ದು ಹಾಗೂ ಗೊತ್ತಿಲ್ಲದೇ ಇರುವ ಬಗ್ಗೆ ಮಾತನಾಡುವುದಿಲ್ಲ. ನನ್ನ ತಮ್ಮ ಡಿ.ಕೆ.ಸುರೇಶ್ ಅವರನ್ನು ಕೂಡ ಭೇಟಿಯಾಗಿಲ್ಲ. ಇದರ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ನೋಡಿದ್ದೇನೆ.ನನ್ನ ತಮ್ಮ ಇದರ ಬಗ್ಗೆ ನಿರ್ಲಕ್ಷ್ಯವಹಿಸಬೇಕಾಗಿತ್ತು.ಆತ ಕೂಡ ವಿದೇಶಕ್ಕೆ ಹೋಗಿದ್ದ ಕಾರಣಕ್ಕೆ ನಾನು ಮಾತನಾಡಲು ಸಾಧ್ಯವಾಗಿಲ್ಲ” ಎಂದರು.

Tags: 5300crores of funds.a tributary.Bhadra Upper Bank ProjectBJPCongress PartyDCM DK ShivakumarDiscussion on Pennar river water disputeirrigation projectskolar water.Markandeya riverSaving around 5-6 thousandTamil NaduUnion minister V Somanna
Previous Post

ಸಿಎಂ ಗೆ 30%.. ಡಿಸಿಎಂ ಗೆ 30%..ಒಟ್ಟು 60% – ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ 60% ಆರೋಪ ! 

Next Post

ತ್ವಚೆಗೆ ಆಲಿವ್ ಆಯಿಲ್ ಬಳಸುವುದರಿಂದ ಏನೆಲ್ಲಾ ಬೆನಿಫಿಟ್ಸ್ ಇದೆ ಗೊತ್ತಾ.!

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
ತ್ವಚೆಗೆ ಆಲಿವ್ ಆಯಿಲ್ ಬಳಸುವುದರಿಂದ ಏನೆಲ್ಲಾ ಬೆನಿಫಿಟ್ಸ್ ಇದೆ ಗೊತ್ತಾ.!

ತ್ವಚೆಗೆ ಆಲಿವ್ ಆಯಿಲ್ ಬಳಸುವುದರಿಂದ ಏನೆಲ್ಲಾ ಬೆನಿಫಿಟ್ಸ್ ಇದೆ ಗೊತ್ತಾ.!

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada