Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ತೆರೆ; ಮೈದಾನ ಸರ್ಕಾರದ ಸ್ವತ್ತು ಎಂದು‌ ಘೋಷಣೆ

ಪ್ರತಿಧ್ವನಿ

ಪ್ರತಿಧ್ವನಿ

August 6, 2022
Share on FacebookShare on Twitter

ಚಾಮರಾಜಪೇಟೆ ಈದ್ಗಾ ಮೈದಾನ ತಮ್ಮದೆಂದು ವಾದಿಸಿ ವರ್ಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾ ಮಾಡಿದೆ. ಚಾಮರಾಜಪೇಟೆ ಆಟದ ಮೈದಾನವನ್ನ ವರ್ಕ್ಫ್ ಬೋರ್ಡ್ ಹೆಸರಿಗೆ ಖಾತ ಮಾಡುವಂತೆ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿ ಯನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆಸ್ತಿಯೆಂದು ನಮೂದಿಸಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ

ಈ ಸರ್ಕಾರ ನಡೆಯುತ್ತಿಲ್ಲ, ಚುನಾವಣೆಗೆ ಏಳೆಂಟು ತಿಂಗಳಿದೆ ಅಂತ ಮ್ಯಾನೇಜ್​​ ಮಾಡುತ್ತಿದ್ದೇವೆ : ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

ರಾಜ್ಯದ 1 ಕೋಟಿ 25 ಲಕ್ಷ ಮನೆಗಳಲ್ಲಿ ಧ್ವಜ ಹಾರಾಟ: ಸಿಎಂ ಬೊಮ್ಮಾಯಿ

ಹಲವು ದಿನಗಳಿಂದ ವಿವಾದಕ್ಕೆ ಈಡಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನ ಈ ಮೂಲಕ ತಾರ್ಕಿಕ ಅಂತ್ಯ ಕಂಡಿದೆ. ಈತನ್ಮಧ್ಯೆ ದಾಖಲೆ ನೀಡಲು ಬಿಬಿಎಂಪಿ ನೀಡಿದ್ದ ಸಮಯವಕಾಶ ಕಳೆದ ಮಂಗಳಾವರಕ್ಕೆ ಮುಕ್ತಾಯಗೊಂಡಿತ್ತು. ಈವರೆಗೆ ಈ ವಿವಾದಿತ ಮೈದಾನಕ್ಕೆ ಸಂಬಂಧಿಸಿದಂತೆ ಯಾವುದೇ ಪೂರಕ ದಾಖಲೆ ಪಾಲಿಕೆಗೆ ಸಮರ್ಪಕವಾಗಿ ಸಲ್ಲಿಕೆಯಾಗದ ಹಿನ್ನೆಲೆ ಪಾಲಿಕೆ ಈ ಆಸ್ತಿ ತಮ್ಮದೇ ಅಂತ ಘೋಷಿಸಿಕೊಂಡಿದೆ.

ಈ ಮೊದಲು ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತಡ ಆಗಸ್ಟ್ 3ರ ಒಳಗಾಗಿ ವಕ್ಫ್ ಬೋರ್ಡ್ ಅಥವಾ ಯಾರೇ ಮೈದಾನದ ದಾಖಲೆ ನೀಡಲು ಕಾಲವಕಾಶ ನೀಡಿತ್ತು. ಈ ಮದ್ಯೆ ಈ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಂಡು ಚಾಮರಾಜಪೇಟೆ ನಾಗರೀಕರು ಬಂದ್ ಆಚರಣೆ ಮಾಡುವ ಮಟ್ಟಕ್ಕೆ ಬೆಳೆದಿತ್ತು. ಅಲ್ಲದೆ ಸ್ಥಳೀಯ ಶಾಸಕರು, ಸಂಸದರೇ ಈ ಪ್ರಕರಣದಲ್ಲಿ ಮುಖಾಮುಖಿಯಾಗಿ ವಾಗ್ವಾದಕ್ಕೆ ಇಳಿದಿದ್ದರು. ಇದೀಗ ಚಾಮರಾಜಪೇಟೆ ಈದ್ಗಾ ಮೈದಾನ ಸರ್ಕಾರದ್ದೆ ಎಂದು ಘೋಷಣೆಯಾಗಿದ್ದು, ವಿವಾದ ಬಗೆಹರಿದಿದೆ.

ವಕ್ಫ್ ಬೋರ್ಡ್ ಈವರೆಗೆ ಸುಪ್ರೀಂ ಕೋರ್ಟ್ ತೀರ್ಪಿನ ಪ್ರತಿ ಹಾಗೂ ಹಲವು ವರ್ಷಗಳ ಹಿಂದಿನ ತೆರಿಗೆ ಕಟ್ಟಿರುವ ಬಿಲ್ ಮಾತ್ರ ಹಾಜರುಪಡಿಸಿದೆ.‌ ಇದರ ಹೊರತಾಗಿ ಬೇರೆ ಯಾವುದೇ ದಾಖಲೆ ವಕ್ಫ್ ಬೋರ್ಡ್ ನಿಂದ ಸಲ್ಲಿಕೆಯಾಗಿಲ್ಲ. ಈ ವಿಚಾರವಾಗಿ ಬಿಬಿಎಂಪಿ ಇನ್ ಹೌಸ್ ಪ್ರೊಸೀಡಿಂಗ್ಸ್ ಕೂಡ ನಡೆದಿದ್ದು ಸಮರ್ಪಕ ದಾಖಲೆ ಸಲ್ಲಿಕೆಯಾಗಿಲ್ಲ. ಹೀಗಾಗಿ ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಯದ್ದೇ ಎಂಬುವುದು ಪಾಲಿಕೆಯ ಅಧಿಕಾರಿಗಳ ವಾದ.

ಒಟ್ಟಾರೆ ಹಲವು ತಿಂಗಳುಗಳಿಂದ ಶಾಂತಿಭಂಗಕ್ಕೆ ಕಾರಣವಾಗಿದ್ದ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಹಲವು ತಿರುವುಗಳನ್ನು ಪಡೆದುಕೊಂಡಿದ್ದರೂ ಸಹ, ಪಾಲಿಕೆ ಇದು ತಮ್ಮದೇ ಎಂದು ಘೋಷಿಸಿಕೊಂಡು‌ ಗೊಂದಲಕ್ಕೆ ತೆರೆ ಎಳೆದಿದೆ.

ಇದೇ ವೇಳೆ ಬಿಬಿಎಂಪಿ ವಕ್ಫ್ ಬೋರ್ಡ್ ಮುಂದಕ್ಕೆ ಮೈದಾನದ ದಾಖಲೆ ಇಚ್ಛಿಸುವಲ್ಲಿ ನೇರವಾಗಿ ರಾಜ್ಯ ಕಂದಾಯ ಇಲಾಖೆಯ ಜೊತೆಗೆ ವ್ಯವಹರಿಸಲು ಹಾಗೂ ದಾಖಲೆ ಸಲ್ಲಿಸಲು ಈ ಆದೇಶ ಅಡ್ಡಿಯಾಗುವುದಿಲ್ಲವೆಂದೂ ಇದೇ ವೇಳೆ ಬಿಬಿಎಂಪಿ ಹೇಳಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಕ್ರೀಡಾ ಬದುಕಿನಿಂದ ನಿವೃತ್ತಿಹೊಂದಲು ಸಜ್ಜಾದ ಟೆನಿಸ್‌ ತಾರೆ ಸೆರೆನಾ ವಿಲಿಯಮ್ಸ್
ಕ್ರೀಡೆ

ಕ್ರೀಡಾ ಬದುಕಿನಿಂದ ನಿವೃತ್ತಿಹೊಂದಲು ಸಜ್ಜಾದ ಟೆನಿಸ್‌ ತಾರೆ ಸೆರೆನಾ ವಿಲಿಯಮ್ಸ್

by ಪ್ರತಿಧ್ವನಿ
August 10, 2022
ನಗ್ನ ಚಿತ್ರ ವಿವಾದ; ನಟ ರಣವೀರ್‌ಗೆ ಸಮನ್ಸ್ ಜಾರಿ
ದೇಶ

ನಗ್ನ ಚಿತ್ರ ವಿವಾದ; ನಟ ರಣವೀರ್‌ಗೆ ಸಮನ್ಸ್ ಜಾರಿ

by ಪ್ರತಿಧ್ವನಿ
August 12, 2022
ಡಿ ಬಾಸ್ ಹಾಗೂ ಅಪ್ಪು ಬಗ್ಗೆ ಹೇಳಿದ್ದೇನು ಗೊತ್ತಾ
ವಿಡಿಯೋ

ಡಿ ಬಾಸ್ ಹಾಗೂ ಅಪ್ಪು ಬಗ್ಗೆ ಹೇಳಿದ್ದೇನು ಗೊತ್ತಾ

by ಪ್ರತಿಧ್ವನಿ
August 9, 2022
ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್
ವಿಡಿಯೋ

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

by ಪ್ರತಿಧ್ವನಿ
August 10, 2022
ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ
ಕಲೆ – ಸಾಹಿತ್ಯ

ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

by ಪ್ರತಿಧ್ವನಿ
August 12, 2022
Next Post
ಹಂಚಿಕೆಯಾಗಿದ್ದ ದೋಷಪೂರಿತ ರಾಷ್ಟ್ರ ಧ್ವಜ ವಾಪಸ್ ಪಡೆದ ಬಿಬಿಎಂಪಿ!

ಹಂಚಿಕೆಯಾಗಿದ್ದ ದೋಷಪೂರಿತ ರಾಷ್ಟ್ರ ಧ್ವಜ ವಾಪಸ್ ಪಡೆದ ಬಿಬಿಎಂಪಿ!

ಮೆಟ್ರೋ ಸಂಚಾರದಲ್ಲಿ ಭಾರೀ ಬದಲಾವಣೆ: 15 ನಿಮಷಕ್ಕೊಂದು ರೈಲು!

ಮೆಟ್ರೋ ಸಂಚಾರದಲ್ಲಿ ಭಾರೀ ಬದಲಾವಣೆ: 15 ನಿಮಷಕ್ಕೊಂದು ರೈಲು!

ಸರ್ಕಾರ ಬಿದ್ದರೂ ಪರ್ವಾಗಿಲ್ಲ, ದಾಖಲೆ ಕೊಡಿ ಕ್ರಮ ಜರುಗಿಸುತ್ತೇವೆ : HDKಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು

ಆರಗ ಜ್ಞಾನೇಂದ್ರ ತಲೆದಂಡ? ಆರ್ ಅಶೋಕ್ ಮುಂದಿನ ಗೃಹ ಮಂತ್ರಿ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist