• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ ಉಪಚುನಾವಣೆ; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ:ಡಿ.ಕೆ.ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
October 20, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:”ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದೆ. ಎಐಸಿಸಿ ಅಧ್ಯಕ್ಷರ ಹಾಗೂ ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು.

ADVERTISEMENT

ಸದಾಶಿವನಗರ ತಮ್ಮ ನಿವಾಸದಲ್ಲಿ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು “ನಾನು ಅಭ್ಯರ್ಥಿಗಿಂತ ಕಾರ್ಯಕರ್ತನಾಗಿ ಕೆಲಸ ಮಾಡುವುದರಲ್ಲಿ ಹೆಚ್ಚು ಖುಷಿ ಕಾಣುತ್ತೇನೆ. ಪಕ್ಷವು ಎರಡು, ಮೂರು ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ವರಿಷ್ಠರೆಲ್ಲ ಬದ್ಧವಾಗಿದ್ದೇವೆ” ಎಂದು ಹೇಳಿದರು.

“ಚನ್ನಪಟ್ಟಣ ತಾಲೂಕು ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿಯೂ ಉಪಚುನಾವಣೆ ಅಭ್ಯರ್ಥಿಯ ವಿಚಾರವಾಗಿ ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇವೆ ಎನ್ನುವ ಮಾತು ಕೇಳಿ ಬಂದಿದೆ” ಎಂದರು.

ಅಧಿಕಾರಕ್ಕೋಸ್ಕರ ಚುನಾವಣೆಗೆ ನಿಲ್ಲುವುದಿಲ್ಲ.

ಕಾಂಗ್ರೆಸ್ ಹೈಕಮಾಂಡ್ ನಿಮ್ಮನ್ನು ಅಭ್ಯರ್ಥಿ ಎಂದು ಸೂಚಿಸಿದರೆ ಎಂದು ಕೇಳಿದಾಗ “ನಾನು ಪಕ್ಷದ ಶಿಸ್ತಿನ ಸಿಪಾಯಿ. ನನ್ನ ಆಚಾರ ವಿಚಾರಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ. ನಾನು ಅಧಿಕಾರಕ್ಕೋಸ್ಕರ ಅದು ಚುನಾವಣೆಗೆ ನಿಲ್ಲಬೇಕು ಎನ್ನುವ ಉದ್ದೇಶ ಹೊಂದಿರುವವನಲ್ಲ.ಈ ಬಗ್ಗೆ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡುತ್ತೇನೆ” ಎಂದು ಹೇಳಿದರು.

“ಚನ್ನಪಟ್ಟಣ ಅಭ್ಯರ್ಥಿಯ ಬಗ್ಗೆ ಇಂದು ಅಥವಾ ಸೋಮವಾರ ಮುಖ್ಯಮಂತ್ರಿಗಳು ಅಥವಾ ಎಐಸಿಸಿ ಅಧ್ಯಕ್ಷರು ಸಿಕ್ಕರೆ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ.” ಎಂದು ಹೇಳಿದರು.

ನನಗೆ ಪಕ್ಷ ಅನಿವಾರ್ಯ.

ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಅನಿವಾರ್ಯತೆ ಇದೆಯೇ ಎನ್ನುವ ಬಗ್ಗೆ ಕೇಳಿದಾಗ ” ಪಕ್ಷಕ್ಕೆ ನಾನು ಅನಿವಾರ್ಯವಲ್ಲ. ನನಗೆ ಪಕ್ಷ ಅನಿವಾರ್ಯ” ಎಂದು ಹೇಳಿದರು.ಕಾರ್ಯಕರ್ತರು ಪಕ್ಷಕ್ಕೆ ನೀವೇ ಅನಿವಾರ್ಯ ಎಂದು ಹೇಳುತ್ತಿರುವ ಬಗ್ಗೆ ಕೇಳಿದಾಗ “ಕಾರ್ಯಕರ್ತರ ಅಭಿಪ್ರಾಯಗಳಿಗೆ ಗೌರವವಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ, ನನಗಾಗಿ ಹಗಲು ರಾತ್ರಿ ದುಡಿದಿದ್ದಾರೆ. ಈ ವೇಳೆ ನಾನು ನಿಮ್ಮ ಜೊತೆ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ಮಾತು ಕೊಟ್ಟಿದ್ದೇನೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆ ಹಗಲು ರಾತ್ರಿ ದುಡಿಯುತ್ತೇನೆ ಎಂದು ಭರವಸೆ ಕೊಟ್ಟಿದ್ದೇನೆ” ಎಂದರು.

ತೀರ್ಮಾನಕ್ಕೆ ಶುಕ್ರವಾರದ ತನಕ ಸಮಯವಿದೆ.

“ನಮ್ಮ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಿದ್ದಾರೆ. ಶುಕ್ರವಾರದ ತನಕ ಸಮಯವಿದೆ. ಇನ್ನೂ ಐದು ದಿನಗಳು ಸಮಯವಿದ್ದು ನಮ್ಮ ತೀರ್ಮಾನವನ್ನು ತಿಳಿಸುತ್ತೇವೆ. ಬಿಜೆಪಿ, ಜೆಡಿಎಸ್ ಅವರು ಅವರ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕು. ಅಲ್ಲಿಯವರೆಗೂ ಕಾಯೋಣ. ಪಕ್ಷವನ್ನು ಬೇರು ಮಟ್ಟದಿಂದ ಕಟ್ಟುವ ಕೆಲಸ ಮಾಡುತ್ತೇವೆ” ಎಂದರು.

ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿನ್ನು ಘೋಷಣೆ ಮಾಡಿ ಚನ್ನಪಟ್ಟಣವನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ ಎನ್ನುವ ಬಗ್ಗೆ ಕೇಳಿದಾಗ ” ಬಿಜೆಪಿಯವರು ಒಂದು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಅವರೇ ತಿಳಿಸಬೇಕು. ಇದು ಆಯಾಯ ಪಕ್ಷದ ತೀರ್ಮಾನಕ್ಕೆ ಬಿಟ್ಟಿದ್ದು” ಎಂದರು.

ಜೆಡಿಎಸ್ ಚಿನ್ಹೆ ಅಡಿ ಯೋಗೇಶ್ವರ್ ಅವರು ಸ್ಪರ್ಧಿಸಲು ಒಪ್ಪುತ್ತಿಲ್ಲ ಎನ್ನುವ ಬಗ್ಗೆ ಕೇಳಿದಾಗ ” ಇದರ ಬಗ್ಗೆ ನನಗೆ ಮಾಹಿತಿ ಇಲ್ಲ ಅವರನ್ನೇ ಕೇಳಬೇಕು. ಇದು ಅವರ ಆಂತರಿಕ ವಿಚಾರ” ಎಂದರು.”ಸಂಡೂರು ಹಾಗೂ ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಮೈತ್ರಿ ಧರ್ಮದ ಪ್ರಕಾರ ಚನ್ನಪಟ್ಟಣವನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟಿರಬಹುದು ಎನ್ನುವುದು ನನ್ನ ಅನಿಸಿಕೆ. ಅಂತಿಮ ತೀರ್ಮಾನ ಅವರಿಗೆ ಸಂಬಂಧಪಟ್ಟಿದ್ದೆ ಹೊರತು ನಮಗಲ್ಲ” ಎಂದರು.

“ಸಂಡೂರು ಹಾಗೂ ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಮೈತ್ರಿ ಧರ್ಮದ ಪ್ರಕಾರ ಚನ್ನಪಟ್ಟಣವನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟಿರಬಹುದು ಎನ್ನುವುದು ನನ್ನ ಅನಿಸಿಕೆ. ಅಂತಿಮ ತೀರ್ಮಾನ ಅವರಿಗೆ ಸಂಬಂಧಪಟ್ಟಿದ್ದೆ ಹೊರತು ನಮಗಲ್ಲ” ಎಂದರು.

ಎದುರಾಳಿ ಯಾರೇ ಆದರೂ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆಯೇ ಎಂದು ಕೇಳಿದಾಗ “ನಮ್ಮ ಪಕ್ಷ ಮುಕ್ತ ಮನಸ್ಸಿನಿಂದ ಕೆಲಸ ಮಾಡಿದೆ. ಅನೇಕರು ಜೆಡಿಎಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ.ಈಗಲೂ ಪಕ್ಷಕ್ಕೆ ಬರುವವರಿಗೆ ಮಾಧ್ಯಮದ ಮುಖಾಂತರ ಮುಕ್ತ ಆಹ್ವಾನವನ್ನು ನೀಡುತ್ತೇವೆ” ಎಂದರು.

ಕುಮಾರಸ್ವಾಮಿ ಅವರದ್ದು ಮನರಂಜನೆಯುತ ಮಾತುಗಳು.

ನಿಖಿಲ್ ಅವರನ್ನು ಕಣಕ್ಕೆ ಇಳಿಸಲು ಕುಮಾರಸ್ವಾಮಿ ಅವರು ಹಿಂದೇಟು ಹಾಕಿದ್ದಾರೆಯೇ ಎಂದು ಪ್ರಶ್ನಿಸಿದಾಗ “ಅವರ ಪಕ್ಷದ ತೀರ್ಮಾನವನ್ನು ಅವರಿಗೆ ಕೇಳಬೇಕು. ಕುಮಾರಸ್ವಾಮಿಯವರು ಬೆಳಿಗ್ಗೆಯೊಂದು, ಸಂಜೆಯೊಂದು ಮಾತನಾಡುತ್ತಿರುತ್ತಾರೆ. ಇವರ ಮಾತುಗಳನ್ನು ಜನರು ಮನರಂಜನೆ ಅಂತ ತಿಳಿದುಕೊಂಡಿದ್ದಾರೆ. ಕುಮಾರಸ್ವಾಮಿ ಅವರ ಮಾತುಗಳು ಎಂದೂ ಗಂಭೀರವಲ್ಲ. ಡಿ.ಕೆ.ಶಿವಕುಮಾರ್ ಅವರನ್ನು ಬಯ್ಯುವಾಗ ಮಾತ್ರ ಗಂಭೀರವಾಗಿರುತ್ತಾರೆ” ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದಿಲ್ಲ ಎನ್ನುವ ಕುಮಾರಸ್ವಾಮಿಯವರ ಹೇಳಿಕೆ ಬಗ್ಗೆ ಕೇಳಿದಾಗ ” ಅವರು ಸಹ 5 ವರ್ಷ ಕೇಂದ್ರ ಮಂತ್ರಿಯಾಗಿ ಮುಂದುವರಿಯುವುದಿಲ್ಲ. 6 ತಿಂಗಳು ಅಥವಾ 1 ವರ್ಷಕ್ಕೆ ಮನೆಗೆ ಹೋಗುತ್ತಾರೆ” ಎಂದಾಗ ಯಾವ ಕಾರಣಕ್ಕೆ ಎಂದು ಮರು ಪ್ರಶ್ನಿಸಿದಾಗ ” ಅವರು ಯಾವ ಕಾರಣದಲ್ಲಿ ಹೀಗೆ ಹೇಳಿದರು ಎಂದು ಅವರನ್ನೇ ಕೇಳಿ. ನಮ್ಮ ಸರ್ಕಾರ ಇರುವುದಿಲ್ಲ ಎಂದ ಮೇಲೆ ಅವರ ಸರ್ಕಾರವು ಇರುವುದಿಲ್ಲ, ಅವರೂ ಇರುವುದಿಲ್ಲ” ಎಂದರು.

ಡಿ.ಕೆ.ಸುರೇಶ್ ಹೆಸರು ಮುನ್ನಲೆಗೆ ಬಂದ ತಕ್ಷಣ ಕುಮಾರಸ್ವಾಮಿ ಅವರು ಹಿಂದೇಟು ಹಾಕಿದ್ದಾರೆ ಎಂದಾಗ “ಕಾದು ನೋಡೋಣ” ಎಂದು ಚುಟುಕಾಗಿ ಉತ್ತರಿಸಿದರು.

ಸುದೀಪ್ ಅವರ ಮಾತೃ ವಿಯೋಗಕ್ಕೆ ಸಂತಾಪ “ಸುದೀಪ್ ಅವರು ಭಾರತೀಯ ಚಿತ್ರರಂಗದಲ್ಲಿ ಹೆಜ್ಜೆ ಗುರುತನ್ನು ಮೂಡಿಸಲು ಅವರ ತಾಯಿಯವರ ಪ್ರೀತಿ-ವಿಶ್ವಾಸ ಪ್ರೋತ್ಸಾಹವೇ ಕಾರಣ. ಅವರ ತಾಯಿಯವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಭಗವಂತ ಕುಟುಂಬಕ್ಕೆ ಹಾಗೂ ಸುದೀಪ್ ಅವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದರು.

Tags: By electionCongress PartyDCM DK Shivakumardk sureshEntertaining Words by KumaraswamyFormer CM HD KumaraswamyMandyaಜೆಡಿಎಸ್ಬಿಜೆಪಿ
Previous Post

ನಮ್ಮಲಿ ಒಡಕು ಮೂಡಿಸಲು ಕಾಂಗ್ರೆಸ್ ಭಕ ಪಕ್ಷಿಗಳಂತೆ ಕೆಲವರು ಕಾಯುತ್ತಿದ್ದಾರೆ:HD ಕುಮಾರಸ್ವಾಮಿ

Next Post

ಪ್ರಮೋದ್ ಶೆಟ್ಟಿ ಅಭಿನಯದ ಈ ಚಿತ್ರದ ಮೊದಲ ಹಾಡು ಬಿಡುಗಡೆ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post

ಪ್ರಮೋದ್ ಶೆಟ್ಟಿ ಅಭಿನಯದ ಈ ಚಿತ್ರದ ಮೊದಲ ಹಾಡು ಬಿಡುಗಡೆ

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada