• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಮೇಲೆ ವಿಶ್ವಾಸವನ್ನು ಇಡುತ್ತಾರೆ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 13, 2024
in Uncategorized
0
Share on WhatsAppShare on FacebookShare on Telegram

ಮೈಸೂರು:”ಚನ್ನಪಟ್ಟದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲಾಗುತ್ತಿದೆ.ನಾವು ಕ್ಷೇತ್ರದಲ್ಲಿ ಮಾಡುತ್ತಿರುವ ಕೆಲಸದ ಮೇಲೆ ಜನರು ವಿಶ್ವಾಸವನ್ನು ಇಡುತ್ತಾರೆ ಎನ್ನುವ ನಂಬಿಕೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ADVERTISEMENT

ಮೈಸೂರಿನಲ್ಲಿ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದ ಅವರು, “ಚನ್ನಪಟ್ಟಣದ ಉಪಚುನಾವಣೆಗೆ ನಾವು ವೇದಿಕೆಯನ್ನು ಸಿದ್ಧಪಡಿಸುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತ ಬಂದಿತ್ತು. ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತ ಬಂದಿತ್ತು” ಎಂದರು.

ವ್ಯಕ್ತಿ ಬಿಟ್ಟು ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ನಡೆಸುತ್ತೇವೆ:

ಈ ಮೊದಲು ನೀವು ನಿಖಿಲ್ ಪರ ಪ್ರಚಾರ ಮಾಡಿದ್ದೀರಿ, ಚನ್ನಪಟ್ಟಣಕ್ಕೆ ಈಗ ಅವರೇ ಅಭ್ಯರ್ಥಿ ಎನ್ನಲಾಗುತ್ತಿದೆ ಎಂದಾಗ “ಜೆಡಿಎಸ್ ತನ್ನ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನಾದರೂ ನಿಲ್ಲಿಸಿಕೊಳ್ಳಲಿ. ಅದು ಅವರ ಪಕ್ಷದ ಆಂತರಿಕ ವಿಚಾರ. ಚನ್ನಪಟ್ಟಣದಲ್ಲಿ ವ್ಯಕ್ತಿಯ ಮೇಲೆ ಚುನಾವಣೆ ನಡೆಯುವುದು ಬಿಟ್ಟು, ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ನಡೆಯಬೇಕು ಎಂದು ನಾನು ಕೆಲಸ ಮಾಡುತ್ತಿದ್ದೇನೆ. ಎನ್ ಡಿಎ, ದಳ, ಬಿಜೆಪಿ ಯಾವ ಅಭ್ಯರ್ಥಿಯನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳಲಿ, ನಾನು ಅವರ ವಿಚಾರಕ್ಕೆ ತಲೆ ಹಾಕುವುದಿಲ್ಲ. ಈಗ ನಮ್ಮ ಮನೆಯನ್ನು ನಾವು ರಿಪೇರಿ ಮಾಡಿಕೊಂಡರೆ ಸಾಕು” ಎಂದರು.

ಕುಟುಂಬಸ್ಥರು ಚುನಾವಣೆಗೆ ನಿಲ್ಲುವುದಿಲ್ಲ:ಚನ್ನಪಟ್ಟಣದಲ್ಲಿ ಡಿ.ಕೆ.ಶಿವಕುಮಾರ್ ಕುಟುಂಬಸ್ಥರು ಚುನಾವಣೆ ನಿಲ್ಲುತ್ತಾರೆಯೇ ಎಂದು ಕೇಳಿದಾಗ, “ನನ್ನ ಕುಟುಂಬದವರು ಯಾರೂ ಚುನಾವಣೆಗೆ ನಿಲ್ಲುವುದಿಲ್ಲ. ನಾನೇ ಅಭ್ಯರ್ಥಿ, ನನ್ನ ಹೆಸರಿನಲ್ಲಿಯೇ ಮತ ಕೇಳುವುದು” ಎಂದರು.

ಬಿಜೆಪಿ ಹತ್ತು ವರ್ಷವೂ ವಿರೋಧ ಪಕ್ಷದಲ್ಲಿರುತ್ತದೆ:ದಸರಾ ಒಳಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದು ಬಿಜೆಪಿ ಹೇಳಿತ್ತು. ಈಗ ದಸರಾ ಯಶಸ್ವಿಯಾಗಿದೆ ಎಂದು ಕೇಳಿದಾಗ, “ಬಿಜೆಪಿಯವರು ಮುಂದಿನ ಹತ್ತು ವರ್ಷವೂ ವಿರೋಧ ಪಕ್ಷವಾಗಿ ಇದೇ ಮಾತನ್ನು ಹೇಳುತ್ತಿರುತ್ತಾರೆ” ಎಂದು ವ್ಯಂಗ್ಯವಾಡಿದರು.

ಶಾಸಕ ಸಿದ್ದಿಕಿ ಬಾಬಾ ಹತ್ಯೆ ಖಂಡನೀಯ:ಶಾಸಕ ಸಿದ್ದಿಕಿ ಬಾಬಾ ಹತ್ಯೆ ಬಗ್ಗೆ ಕೇಳಿದಾಗ, “ಮುಂಬೈನಲ್ಲಿ ಸಿದ್ದಿಕಿ ಬಾಬಾ ಅವರ ಹತ್ಯೆ ಖಂಡನೀಯ. ಅವರು ನನಗೆ ಆಪ್ತರಾಗಿದ್ದರು ಹಾಗೂ ಅವರ ಮಗ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ನಿಂದ ಮಂತ್ರಿಯಾಗಿದ್ದ ಅವರು, ಆನಂತರ ಬಂಡಾಯ ಎದ್ದು ಎನ್‌ಸಿಪಿ ಸೇರಿದ್ದರು”ಎಂದರು.

ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ:”ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಮತ್ತೆ ಹದಗೆಟ್ಟಿದೆ ಎನ್ನುವುದಕ್ಕೆ ಇದು ಸಾಕ್ಷಿ. ಮುಂದಕ್ಕೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಇರುವುದರಿಂದ ಶಾಂತಿಯನ್ನು ಕಾಪಾಡಬೇಕಿದೆ” ಎಂದರು.

ಶಾಂತಿ, ಸುವ್ಯವಸ್ಥೆಯಿಂದ ನಡೆದ ದಸರಾ:”ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಮೈಸೂರು ದಸರಾ ನಡೆಯಿತು. ಪಂಜಿನ ಮೆರವಣಿಗೆ ಈ ಬಾರಿಯ ವಿಶೇಷ ಆಕರ್ಷಣೆ. ಲಕ್ಷಾಂತರ ಜನ ಭಾಗವಹಿಸಿದ್ದರೂ, ಶಾಂತಿಯುತವಾಗಿ ದಸರಾ ನಡೆಯಿತು. ಒಂದಷ್ಟು ಸಂಪ್ರದಾಯದ ಕಾರಣಕ್ಕೆ, ರಾಜವಂಶಸ್ಥರು ಅಂಬಾರಿಯನ್ನು ಕೊಡುವುದು ತಡವಾಗಿದ್ದರಿಂದ ಮೆರವಣಿಗೆ ವಿಳಂಬವಾಯಿತು. ನಾವೆಲ್ಲ ಸೇರಿ ವಿಜೃಂಭಣೆಯಿಂದ ದಸರಾ ಆಚರಿಸಿದ್ದೇವೆ. ತಾಯಿ ಚಾಮುಂಡಿ ರಾಜ್ಯದ ಜನರಿಗೆ ಸಮೃದ್ಧಿ ನೀಡಲಿ ಎಂದು ಮತ್ತೊಮ್ಮೆ ಪ್ರಾರ್ಥನೆ ಮಾಡುತ್ತೇವೆ” ಎಂದರು.

Previous Post

ಖಾಶೆಂಪುರ್ (ಪಿ):ಸಾಂಪ್ರದಾಯಿಕ ದಸರಾ ಆಚರಣೆ, ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಭಾಗಿ

Next Post

ಕಿಕ್ಕಿರಿದು ತುಂಬಿದ್ದ ಬಸ್​​ನೊಳಗೆ ರೌಡಿಗಳಂತೆ ಬಡಿದಾಡಿಕೊಂಡ ಖಾಸಗಿ ಬಸ್ ಸಿಬಂದಿ.

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post

ಕಿಕ್ಕಿರಿದು ತುಂಬಿದ್ದ ಬಸ್​​ನೊಳಗೆ ರೌಡಿಗಳಂತೆ ಬಡಿದಾಡಿಕೊಂಡ ಖಾಸಗಿ ಬಸ್ ಸಿಬಂದಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada