ಮೈಸೂರು: ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಜುಗರ ಉಂಟು ಮಾಡಿ, ಕರ್ತವ್ಯಲೋಪವೆಸಗಿದ ಕಾರಣಕ್ಕೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರನ್ನು ಅಮಾನತುಗೊಳಿಸಲಾಗಿದೆ.
ಸೆಸ್ಕ್ ಮೈಸೂರು ಗ್ರಾಮಾಂತರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ.ಎನ್.ಶ್ರೀಧರ್ ಅಮಾನತುಗೊಂಡ ಕೆಎಎಸ್ ಅಧಿಕಾರಿಯಾಗಿದ್ದಾರೆ. ಕರ್ತವ್ಯಲೋಪ ಕಾರಣ ಹಿನ್ನೆಲೆಯಲ್ಲಿ ಶ್ರೀಧರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
![](https://pratidhvani.com/wp-content/uploads/2024/01/Screenshot_20240124_232433_Drive-487x1024.webp)
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಲುವಾಗಿ ಸಿಎಂ ಹಾಗೂ ಡಿಸಿಎಂ ಬಟನ್ ಒತ್ತಿದರೂ ಯಂತ್ರೋಪಕರಣ ಆನ್ ಆಗಲಿಲ್ಲ.
ಆದರೆ ಈ ಘಟನೆ ಸಾರ್ವಜನಿಕರು, ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದರು. ಹೀಗಾಗಿ ಘಟನೆ ನಡೆದ ಸ್ಥಳದಲ್ಲೇ ಇದ್ದರೂ ಸಮಸ್ಯೆ ಬಗೆಹರಿಸಲು ವಿಫಲವಾದ ಹಿನ್ನೆಲೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರನ್ನು ಅಮಾನತು ಮಾಡಲಾಗಿದೆ.
![](https://pratidhvani.com/wp-content/uploads/2024/01/20240124_234302-jpg.webp)