• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಾಕ್‌ಡೌನ್‌ ಉಲ್ಲಂಘಣೆ ಆರೋಪ: ಯುವಕನಿಗೆ ಹಲ್ಲೆ ಮಾಡಿದ ಜಿಲ್ಲಾಧಿಕಾರಿ ವಿರುದ್ಧ ಛತ್ತೀಸ್‌ಗಢ ಸರ್ಕಾರ ಕ್ರಮ

Any Mind by Any Mind
May 23, 2021
in ದೇಶ
0
ಲಾಕ್‌ಡೌನ್‌ ಉಲ್ಲಂಘಣೆ ಆರೋಪ: ಯುವಕನಿಗೆ ಹಲ್ಲೆ ಮಾಡಿದ ಜಿಲ್ಲಾಧಿಕಾರಿ ವಿರುದ್ಧ ಛತ್ತೀಸ್‌ಗಢ ಸರ್ಕಾರ ಕ್ರಮ
Share on WhatsAppShare on FacebookShare on Telegram

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಯುವಕನೋರ್ವನಿಗೆ ಸೂರಜ್‌ಪುರ ಕಲೆಕ್ಟರ್ ರಣಬೀರ್ ಶರ್ಮಾ ಅವರು ಕಪಾಳಮೋಕ್ಷ ಮಾಡುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಹಲ್ಲೆ ನಡೆಸಿದ ಜಿಲ್ಲಾಧಿಕಾರಿಯನ್ನು ಸ್ಥಾನದಿಂದ ತೆಗೆದುಹಾಕುವಂತೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಆದೇಶಿಸಿದ್ದಾರೆ. ಈ ಕೃತ್ಯವನ್ನು ಖಂಡಿಸಿದ ಬಾಗೆಲ್, ಈ ಘಟನೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ ಹಾಗೂ ಐಎಎಸ್ ಅಧಿಕಾರಿಯನ್ನು ಹುದ್ದೆಯಿಂದ ತೆಗೆದುಹಾಕಲು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಸಿಎಂ ನಿರ್ದೇಶನದ ಬೆನ್ನಲ್ಲೇ ರಾಜ್ಯ ಸರ್ಕಾರ ಶರ್ಮಾ ಅವರನ್ನು ನವ ರಾಯಪುರದ ಮಂತ್ರಾಲಯಕ್ಕೆ ಜಂಟಿ ಕಾರ್ಯದರ್ಶಿಯಾಗಿ ವರ್ಗಾಯಿಸಿದೆ. ರಾಯ್‌ಪುರ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗೌರವ್ ಕುಮಾರ್ ಸಿಂಗ್ ಅವರನ್ನು ಸೂರಜ್‌ಪುರದ ಹೊಸ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಲಾಕ್‌ಡೌನ್‌ ಉಲ್ಲಂಘಣೆ ಆರೋಪ: ಯುವಕನಿಗೆ ಜಿಲ್ಲಾಧಿಕಾರಿಯಿಂದ ಹಲ್ಲೆ  #Chattisgharh #ranbirsharma #surajpur

“ಸೂರಜ್‌ಪುರ ಕಲೆಕ್ಟರ್ ರಣಬೀರ್ ಶರ್ಮಾ ಅವರು ಅಧಿಕಾರ ದುರುಪಯೋಗಪಡಿಸಿಕೊಂಡ ಪ್ರಕರಣ ಸೋಷಿಯಲ್ ಮೀಡಿಯಾದ ಮೂಲಕ ನನ್ನ ಗಮನಕ್ಕೆ ಬಂದಿದೆ. ಇದು ತುಂಬಾ ದುಃಖಕರ ಮತ್ತು ಖಂಡನೀಯ. ಛತ್ತೀಸ್‌ಗಢದಲ್ಲಿ, ಅಂತಹ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ. ಕಲೆಕ್ಟರ್ ರಣಬೀರ್ ಶರ್ಮಾ ಅವರನ್ನು ತಕ್ಷಣ ಕರ್ತವ್ಯದಿಂದ ತೆಗೆದುಹಾಕಲು ಸೂಚನೆ ನೀಡಲಾಗಿದೆ ”ಎಂದು ಛತ್ತೀಸ್‌ಗಢ  ಮುಖ್ಯಮಂತ್ರಿ ಭಾನುವಾರ ಟ್ವೀಟ್ ಮಾಡಿದ್ದಾರೆ. “ಯಾವುದೇ ಅಧಿಕಾರಿಯ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ. ಈ ಘಟನೆಯಿಂದ ನಾನು ಅಸಮಾಧಾನಗೊಂಡಿದ್ದೇನೆ. ನಾನು ಯುವಕ ಮತ್ತು ಅವರ ಕುಟುಂಬಕ್ಕೆ ಕ್ಷಮೆಯಾಚಿಸುತ್ತೇನೆ ”ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

सोशल मीडिया के माध्यम से सूरजपुर कलेक्टर रणबीर शर्मा द्वारा एक नवयुवक से दुर्व्यवहार का मामला मेरे संज्ञान में आया है।

यह बेहद दुखद और निंदनीय है। छत्तीसगढ़ में इस तरह का कोई कृत्य कतई बर्दाश्त नहीं किया जाएगा।

कलेक्टर रणबीर शर्मा को तत्काल प्रभाव से हटाने के निर्देश दिए हैं।

— Bhupesh Baghel (@bhupeshbaghel) May 23, 2021

ಯುವಕನೋರ್ವನಿಗೆ ಥಳಿಸುವ ಹಾಗೂ ಆತನ ಮೊಬೈಲ್‌ ಫೋನ್‌ ನೆಲಕ್ಕೆ ಎಸೆದು ವಿಕೃತಿ ಮೆರೆಯುವ ಜಿಲ್ಲಾಧಿಕಾರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ಸಾಕಷ್ಟು ವಿವಾದವನ್ನು ಸೃಷ್ಟಿಸಿತ್ತು. ಜಿಲ್ಲಾಧಿಕಾರಿ ಹೊಡೆದ ಬಳಿಕ ರಕ್ಷಣಾ ಸಿಬ್ಬಂದಿಯೂ ಯುವಕನ ಮೇಲೆ ಹಲ್ಲೆ ನಡೆಸುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಸಾರ್ವಜನಿಕರು ಮಾತ್ರವಲ್ಲದೆ, ಐಎಎಸ್ ಸಂಘವು ಕೂಡಾ ಜಿಲ್ಲಾಧಿಕಾರಿಯ ಈ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದೆ, ಇದು ಸೇವೆ ಮತ್ತು ನಾಗರಿಕತೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಸಂಘಟನೆಯು ಹೇಳಿದೆ. “ಸೂರಜ್‌ಪುರ ಜಿಲ್ಲಾಧಿಕಾರಿಯ ನಡವಳಿಕೆಯನ್ನು ಐಎಎಸ್ ಅಸೋಸಿಯೇಷನ್ ​​ಬಲವಾಗಿ ಖಂಡಿಸುತ್ತದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಸೇವೆ ಮತ್ತು ನಾಗರಿಕತೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಸಾರ್ವಜನಿಕ ಸೇವೆಯಲ್ಲಿರುವವರು ಪರಾನುಭೂತಿ ಹೊಂದಿರಬೇಕು ಮತ್ತು ಎಲ್ಲಾ ಸಮಯದಲ್ಲೂ ಸಮಾಜಕ್ಕೆ ಗುಣಪಡಿಸುವ ಸ್ಪರ್ಶವನ್ನು ನೀಡಬೇಕು, ಅದರಲ್ಲೂ ಈ ಕಠಿಣ ಸಂಧರ್ಭದಲ್ಲಿ” ಎಂದು ಐಎಎಸ್ (ಕೇಂದ್ರ) ಸಂಘವು ಟ್ವೀಟ್ ಮಾಡಿದೆ.

The IAS Association strongly condemns the behaviour of Collector Surajpur, Chhattisgarh.
It is unacceptable & against the basic tenets of the service & civility.
Civil servants must have empathy & provide a healing touch to society at all times, more so in these difficult times.

— IAS Association (@IASassociation) May 23, 2021

ಐಎಎಸ್ ಅಸೋಸಿಯೇಷನ್‌ನ ಹೇಳಿಕೆಯ ನಂತರ, ಜಿಲ್ಲಾಧಿಕಾರಿ ಸ್ಪಷ್ಟೀಕರಣ ನೀಡಿದ್ದು, ಹಲವರು ಆರೋಪಿಸಿದಂತೆ ತಾನು ಹೊಡೆದ ವ್ಯಕ್ತಿ ಅಪ್ರಾಪ್ತನಲ್ಲ ಹೇಳಿಕೊಂಡಿದ್ದಾರೆ. ಯುವಕ ಅಧಿಕಾರಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಶನಿವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಲೆಕ್ಟರ್ ರಣಬೀರ್ ಶರ್ಮಾ, “ಇಂದು ಒಂದು ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ, ಇದರಲ್ಲಿ ಲಾಕ್ ಡೌನ್ ಸಮಯದಲ್ಲಿ ಹೊರಗಿದ್ದ ವ್ಯಕ್ತಿಯನ್ನು ಕಪಾಳಮೋಕ್ಷ ಮಾಡಿರುವುದನ್ನು ತೋರಿಸಲಾಗಿದೆ. ಇಂದಿನ ವರ್ತನೆಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನನಗೆ ಎಂದಿಗೂ ವೀಡಿಯೊದಲ್ಲಿರುವ ವ್ಯಕ್ತಿಗೆ ಅಗೌರವ ತೋರಬೇಕೆಂದು ಇರಲಿಲ್ಲ” ಎಂದು ಹೇಳಿದ್ದಾರೆ.

“ಈ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ಜಿಲ್ಲೆಯ ಸೂರಜ್‌ಪುರ ಮತ್ತು ಇಡೀ ಛತ್ತೀಸ್‌ಗಢ ರಾಜ್ಯವು ಸರಿಪಡಿಸಲಾಗದ ಸಂಕಷ್ಟ ಎದುರಿಸುತ್ತಿದೆ. ರಾಜ್ಯ ಸರ್ಕಾರದ ನೌಕರರೆಲ್ಲರೂ ಈ ಸಮಸ್ಯೆಯನ್ನು ನಿಭಾಯಿಸಲು ಶ್ರಮಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. ಈ ವ್ಯಕ್ತಿ ಅತಿಯಾದ ವೇಗದಲ್ಲಿ ಬೈಕು ಸವಾರಿ ಮಾಡುತ್ತಿದ್ದು, ಅಧಿಕಾರಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾನೆ” ಎಂದು ರಣಬೀರ್‌ ಶರ್ಮಾ ಹೇಳಿದ್ದಾರೆ.  

Previous Post

ಗದಗ: ರೆಮಿಡಿಸಿವರ್ ಅಕ್ರಮ ಮಾರಾಟ – ನಾಲ್ಕು ಜನ ಆರೋಪಿಗಳು ಬಂಧನ

Next Post

“ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ” ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್

Related Posts

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ
ದೇಶ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

by ಪ್ರತಿಧ್ವನಿ
January 17, 2026
0

ಮುಂಬೈ: ಬಾಲಿವುಡ್‌ನಲ್ಲಿ ನನಗೆ ಅವಕಾಶ ಕಡಿಮೆ ಆಗಲು ಕೋಮುವಾದವೂ ಕಾರಣವಿರಬಹುದು ಎಂದು ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. https://youtu.be/vrO2tps8tdk?si=7do471XFGkWSf4ZC ಬಿಬಿಸಿ ಏಷಿಯನ್...

Read moreDetails
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಚುನಾವಣೆಗೆ ಮೂಹರ್ತ ಫಿಕ್ಸ್‌

BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಚುನಾವಣೆಗೆ ಮೂಹರ್ತ ಫಿಕ್ಸ್‌

January 16, 2026
Next Post
“ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ” ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್

"ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ" ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್

Please login to join discussion

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada