ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದ್ದು, ಈ ಕುರಿತು ಅವರೇ ತಮ್ಮ ಟ್ವೀಟರ್ ಖಾತೆಯಲ್ಲಿ ಕರೋನ ದೃಢವಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದು ʻʻನನ್ನಗೆ ಇಂದು ಕೋವಿಡ್ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡ ಕಾರಣ ಸೋಂಕು ದೃಢಪಟ್ಟಿದೆ. ನನ್ನ ಆರೋಗ್ಯವು ಉತ್ತಮವಾಗಿದೆ ಮತ್ತು ಹೋಮ್ ಐಸೋಲೇಷನ್ನಲ್ಲಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇನೆʼʼ ಎಂದು ಟ್ವೀಟ್ ಮಾಡಿದ್ದಾರೆ.