• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿ ಚಂದ್ರು

Any Mind by Any Mind
July 22, 2023
in ಕರ್ನಾಟಕ, ರಾಜಕೀಯ
0
ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿ ಚಂದ್ರು
Share on WhatsAppShare on FacebookShare on Telegram

ಬೆಂಗಳೂರು ; ಇಂದು ನಗರದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ” ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ. ರಾಷ್ಟ್ರದ ಸಾಲ 175 ಲಕ್ಷ ಕೋಟಿ ರೂಪಾಯಿಗಳಾಗಿದ್ದು , ರಾಜ್ಯದ ಸಾಲ 5.5 ಲಕ್ಷ ಕೋಟಿ ಮುಟ್ಟಿದೆ. 35 ಸಾವಿರ ಕೋಟಿ ರೂಪಾಯಿಗಳಷ್ಟು ಯನ್ನು ಕಟ್ಟಬೇಕಾಗಿದೆ. ಹೀಗಿರುವಾಗ ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು? ” ಎಂದು ಪ್ರಶ್ನಿಸಿದರು.

ADVERTISEMENT

” ದೆಹಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಉಚಿತ ವಿದ್ಯುತ್, ಉಳಿಯುವ ನೀರು, ಶಿಕ್ಷಣ, ಆರೋಗ್ಯ, ಸಾರಿಗೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದ್ದರೂ ಸಹ ಸಾಲರಹಿತ ಬಜೆಟ್ ಮಂಡಿಸುತ್ತಿರುವುದು ಆಮ್ ಆದ್ಮಿ ಪಕ್ಷದ ವಿಶೇಷತೆ ” ಎಂದು ಬಣ್ಣಿಸಿದರು.

ಕೌಟಿಲ್ಯನ ಅರ್ಥಶಾಸ್ತ್ರ ದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ” ಗಳಿಕೆ- ಉಳಿಕೆ – ಬಳಕೆ ” ಬಜೆಟ್ ನ ಮೂಲ ಸ್ವರೂಪ. ದೇಶದಲ್ಲಿ ಗಳಿಕೆ ತೆರಿಗೆ ರೂಪದಲ್ಲಿ ಅತಿ ಹೆಚ್ಚಾಗಿದ್ದರೂ ಭ್ರಷ್ಟರ ಅಕ್ರಮ, ದುರಾಡಳಿತಗಳಿಂದಾಗಿ ಅವರುಗಳ ಸ್ವಾರ್ಥ ಗಳಿಕೆ ಹೆಚ್ಚಾಗಿದ್ದು , ಉಳಿಕೆ ಶೂನ್ಯಕ್ಕೆ ತಲುಪುತ್ತಿರುವುದು ದುರಂತ ” ಎಂದರು.

” ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಗ್ಯಾರೆಂಟಿಗಳನ್ನು ಕಾಪಿ ಮಾಡಿಲ್ಲ , ನೀಚತನದಿಂದ ಕದ್ದಿದೆ. ಇವರುಗಳ ಬಣ್ಣ ಆರು ತಿಂಗಳಲ್ಲಿ ಬಟಾ ಬಯಲಾಗಲಿದೆ. ರಾಜ್ಯದ ರೈತರಿಗೆ 24 ಗಂಟೆ ಉಚಿತ ವಿದ್ಯುತ್, ಸೂಕ್ತ ಬೆಂಬಲ ಬೆಲೆ, ಯುವಕರಿಗೆ ಉದ್ಯೋಗ, ಸಾಮಾನ್ಯ ಮಕ್ಕಳ ಭವಿಷ್ಯಗಾಗಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ನೀಡಬೇಕೆ ಹೊರತು ಒಂದು ದಿವಸದ ಗ್ಯಾರಂಟಿಗಳಲ್ಲ ” ಎಂದು ಟೀಕಿಸಿದರು.

ಮಣಿಪುರ ಘಟನೆ ಯ ಬಗ್ಗೆ ಆತಂಕ ವ್ಯಕ್ತಪಡಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ” ಪ್ರಧಾನಿ ಮೋದಿ ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಕೇಳಬೇಕು. ಸದಾ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಮಹಾ ಮೈತ್ರಿಯಲ್ಲಿ ಜೋಡಣೆಯಾಗಿದ್ದೇವೆ. ಕರ್ನಾಟಕ ರಾಜ್ಯವನ್ನು ಭ್ರಷ್ಟರ ಕೈಯಿಂದ ಕಿತ್ತುಕೊಳ್ಳುವುದೇ ನಮ್ಮ ಹೆಗ್ಗುರಿ. ಮುಂಬರುವ ರಾಜ್ಯದ ಜಿಲ್ಲಾ – ತಾಲೂಕು ಪಂಚಾಯಿತಿ, ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡಲಿದ್ದೇವೆ. ಪಕ್ಷದ ಕಾರ್ಯಕರ್ತರುಗಳು ಹಾಗೂ ನಾಯಕರುಗಳು ಹಗಲಿರುಳು ದುಡಿಯಬೇಕು ” ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ , ನೂತನವಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಬಿ.ಟಿ. ನಾಗಣ್ಣ , ಅರ್ಜುನ ಪರಪ್ಪ ಹಲಗಿ ಗೌಡರ ಸೇರಿದಂತೆ ನೂತನವಾಗಿ ಆಯ್ಕೆಗೊಂಡಿರುವ ಉಪಾಧ್ಯಕ್ಷರುಗಳು ಸಹ ಭಾಗವಹಿಸಿದ್ದರು.

Tags: Aam Aadmi PartyAAPAravind Kejriwalbengalurumukyamantri chandru
Previous Post

ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ; ಸಿಎಂ ಸಿದ್ದರಾಮಯ್ಯ

Next Post

ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಜನರ ಜೀವನ ದುಸ್ತರವಾಗಿದೆ: ಬಸವರಾಜ ಬೊಮ್ಮಾಯಿ

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
Next Post
ಭಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್ ದೇಶಬಿಟ್ಟು ಹೋಗಬೇಕಾಗುತ್ತೆ: ಸಿಎಂ ಬಸವರಾಜ ಬೊಮ್ಮಾಯಿ

ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಜನರ ಜೀವನ ದುಸ್ತರವಾಗಿದೆ: ಬಸವರಾಜ ಬೊಮ್ಮಾಯಿ

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada