• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗುತ್ತಿಗೆದಾರರ ಬಾಕಿ ಬಿಲ್ | ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
August 11, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಗುತ್ತಿಗೆದಾರರ ಬಾಕಿ ಬಿಲ್‌ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶುಕ್ರವಾರ (ಆಗಸ್ಟ್‌ 11) ಹೇಳಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. “ನಾವು ಲಂಚದ ಹಿಂದೆ ಬಿದ್ದಿಲ್ಲ. ಲಂಚದ ಹಗೃಣದ ಆರೋಪಿಗಳ ಬೆನ್ನು ಬಿದ್ದಿದ್ದೇವೆ” ಎಂದು ತಿವಿದಿದ್ದಾರೆ.

ಆರೋಪಗಳಿಗೆ ಟ್ವೀಟ್‌ ಮೂಲಕ ವಿವರವಾದ ಹೇಳಿಕೆ ನೀಡಿರುವ ಅವರು ಗುತ್ತಿಗೆದಾರರು ಮಾಡಿರುವ ಮನವಿ ಪತ್ರವನ್ನು ಹಂಚಿಕೊಂಡಿದ್ದಾರೆ.

ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ…

— Siddaramaiah (@siddaramaiah) August 11, 2023

ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು…

— Siddaramaiah (@siddaramaiah) August 11, 2023

ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, @narendramodi…

— Siddaramaiah (@siddaramaiah) August 11, 2023

“ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ಮತದಾರರು ನಮಗೆ ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ಮಾತು ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ ಶೇ 40 ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ , ಅರ್ಧಂಬರ್ದ ಕೆಲಸ ಮಾಡಿದ ಕಾಮಗಾರಿಗಳಿಗೆ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ” ಎಂದು ಗುತ್ತಿಗೆದಾರರಿಗೆ ಹೇಳಿದ್ದಾರೆ.

“ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?”.

“ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ. ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಹೇಳುವುದು ತರವಲ್ಲ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಅಚ್ಚರಿ ಆದರೂ ಸತ್ಯ ! ಕಳವಾದ ಮೊಬೈಲ್‌ಗಳ ಪತ್ತೆಯಲ್ಲಿ ದೇಶದಲ್ಲೇ ಕರ್ನಾಟಕವೇ ಮೊದಲು

“ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, ಪಿಒಡಬ್ಲ್ಯು ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

“ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಮ್ಮದು ಕಮಿಷನ್‌ ಹಿಂದೆ ಬಿದ್ದಿರುವ ಸರ್ಕಾರವಲ್ಲ” ಎಂದು ಸ್ಪಷ್ಟಪಡಿಸಿದರು.

Tags: BJPCM SiddaramaiahContractors due billಕಾಂಗ್ರೆಸ್‌ಬಿಜೆಪಿಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಚಂದ್ರಯಾನ 3 ಹಾರಿದ ವಾರದ ಬಳಿಕ ಚಂದ್ರನತ್ತ ಜಿಗಿದ ರಷ್ಯಾದ ನೌಕೆ

Next Post

ಉತ್ತರ ಪ್ರದೇಶ | ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ ; ವಿಡಿಯೊ

Related Posts

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ
ರಾಜಕೀಯ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

by ಪ್ರತಿಧ್ವನಿ
April 18, 2026
0

ಏಪ್ರಿಲ್ 18ರಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದೇ ಇರುವುದರಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಇದೀಗ ರಾಜ್ಯದಲ್ಲೂ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಉತ್ತರ ಪ್ರದೇಶ

ಉತ್ತರ ಪ್ರದೇಶ | ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ ; ವಿಡಿಯೊ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada