ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಆಗಸ್ಟ್ 21) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.
![ಮುಖ್ಯಮಂತ್ರಿ ಸಿದ್ದರಾಮಯ್ಯ](https://pratidhvani.com/wp-content/uploads/2023/08/ಮಚಮ-ಪತ್ರ-712x1024.jpeg)
ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ಹಿನ್ನೆಲೆ 15ನೇ ಹಣಕಾಸು ಆಯೋಗವು 2020-21 ವರದಿಯಲ್ಲಿ ಕರ್ನಾಟಕಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಆದರೆ ಇದುವರೆಗೆ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ಬಿಡುಗಡೆ ಆಗಿಲ್ಲ. ಆದ್ದರಿಂದ ಆರ್ಥಿಕ ಸಂಕಷ್ಟ ನೀಗಲು ಹಣಕಾಸು ಆಯೋಗ ಶಿಫಾರಸು ಮಾಡಿದ ವಿಶೇಷ ಅನುದಾನ ಮತ್ತು ರಾಜ್ಯ ವಿಶೇಷ ಅನುದಾನವನ್ನು ಆದ್ಯತೆಯ ಮೇಲೆ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.