• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಭಾರತದ ಗಡಿಯೊಳಗೆ ಹಳ್ಳಿಯನ್ನೇ ನಿರ್ಮಿಸಿದ ಚೀನಾ..!

by
April 3, 2021
in ವಿದೇಶ
0
ಭಾರತದ ಗಡಿಯೊಳಗೆ ಹಳ್ಳಿಯನ್ನೇ ನಿರ್ಮಿಸಿದ ಚೀನಾ..!
Share on WhatsAppShare on FacebookShare on Telegram

ಚೀನಾ ಮತ್ತು ಭಾರತದ ನಡುವಿನ ಗಡಿ ಸಂಘರ್ಷ ಇನ್ನೂ ತಣ್ಣಗಾಗಿಲ್ಲ ಎಂಬುದಕ್ಕೆ ಪುರಾವೆ ಲಭಿಸಿದೆ. ಚೀನಾ ಭಾರತದ ಗಡಿಯೊಳಗೆ ನುಸುಳಿಲ್ಲ, ಭಾರತದ ಒಂದಿಂಚು ಭೂಮಿಯನ್ನೂ ಚೀನಾಕ್ಕೆ ಬಿಟ್ಟುಕೊಡಲ್ಲ ಎಂಬ ಭಾರತದ ವಾದದ ನಡುವೆಯೇ, ಚೀನಾ ಸೇನೆಯು 101 ಮನೆಗಳಿರುವ ಒಂದು ಹಳ್ಳಿಯನ್ನು ಭಾರತದ ಗಡಿಯೊಳಗೆ ಸೃಷ್ಟಿಸಿಕೊಂಡಿದೆ. NDTVಯು ಇದನ್ನು ಪುರಾವೆಗಳ ಸಮೇತ ಬಹಿರಂಗಪಡಿಸಿದೆ.

ADVERTISEMENT

ಕಳೆದ ನವೆಂಬರ್‌ 1ರಂದು ಪಡೆದ ಉಪಗ್ರಹ ಆಧಾರಿತ ಚಿತ್ರಗಳನ್ನು ಎನ್‌ಡಿಟಿವಿಯು ತಜ್ಞರಿಗೆ ತೋರಿಸಿದಾಗ, ಚೀನಾವು ಭಾರತದ ಸರಹದ್ದಿನೊಳಗೆ ಸುಮಾರು 4.5 ಕಿಲೋಮೀಟರ್‌ನಷ್ಟು ನುಸುಳಿದೆ ಎಂಬುದು ಸ್ಪಷ್ಟವಾಗಿದೆ. ಅರುಣಾಚಲ ಪ್ರದೇಶದ ತ್ಸಾರಿ ಚು ನದಿಯ ದಡದಲ್ಲಿರುವ ವಿವಾದಿತ ಗಡಿ ಪ್ರದೇಶದಲ್ಲಿ ಈ ಹಳ್ಳಿಯನ್ನು ನಿರ್ಮಿಸಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ ನಡೆದ ಚೀನಾ-ಭಾರತ ನಡುವಿನ ಗಾಲ್ವಾನ್‌ ಗಡಿ ಸಂಘರ್ಷದಲ್ಲಿ ಭಾರತದ 20 ಜನ ಸೈನಿಕರು ಹುತಾತ್ಮರಾಗಿದ್ದರು. ಹೀಗಾಗಿ, ಲಡಾಖ್‌ನ ಗಡಿ ಭಾಗದಲ್ಲಿ ಎರಡೂ ದೇಶಗಳು ಸೇನೆ ಜಮಾವಣೆಯಲ್ಲಿ ತೊಡಗಿಕೊಂಡಿದ್ದವು. ಆದರೆ, ಈ ಪ್ರದೇಶದಿಂದ ಸಾವಿರಾರು ಕಿಲೋಮೀಟರ್‌ ದೂರ ಇರುವ ಅರುಣಾಚಲ ಪ್ರದೇಶದ ಗಡಿ ಬಳಿ ಈಗ ಚೀನಾ ಹಳ್ಳಿಯನ್ನು ನಿರ್ಮಿಸಿದೆ.

ಆಗಸ್ಟ್‌ 2019ರ ಉಪಗ್ರಹ ಆಧಾರಿತ ಚಿತ್ರ ಹಾಗೂ ನವೆಂಬರ್‌ 2020ರ ಉಪಗ್ರಹ ಆಧಾರಿತ ಚಿತ್ರಗಳು ಚೀನಾ ಗಡಿಯೊಳಗೆ ನುಸುಳಿದ್ದನ್ನು ಸ್ಪಷ್ಟಪಡಿಸುತ್ತವೆ. ಕೇವಲ ಕಾಡು ಪ್ರದೇಶವಾಗಿದ್ದ ಸ್ಥಳದಲ್ಲಿ ದುತ್ತನೆ ಹಳ್ಳಿಯೊಂದು ತಲೆ ಎತ್ತಿದೆ.

ಈ ಕುರಿತಾಗಿ NDTV ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯವು, ಚೀನಾ ಈ ರೀತಿ ಕಳೆದ ವರ್ಷಗಳಿಂದ ಗಡಿ ಪ್ರದೇಶದಲ್ಲಿ ನಿರ್ಮಾಣ ಕಾರ್ಯವನ್ನು ಕೈಗೊಂಡಿದೆ. ಭಾರತವು ತನ್ನ ಮೂಲಭೂತ ಸೌಕರ್ಯ ಅಭಿವೃದ್ದಿ ಕಾರ್ಯವನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸುತ್ತದೆ, ಎಂದು ಹೇಳಿದೆ.

ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ, ನವೆಂಬರ್‌ನಲ್ಲಿ ನಡೆದ ಸಂಸತ್‌ ಅಧಿವೇಶನದಲ್ಲಿ ಅರುಣಾಚಲ ಪ್ರದೇಶದ ಸಂಸದ ತಾಪಿರ್‌ ಗಾವ್‌ ಅವರು, ಅರುಣಾಚಲ ಪ್ರದೇಶದಲ್ಲಿ ಹೆಚ್ಚುತ್ತಿರುವ ಚೀನಾ ಅತಿಕ್ರಮಣದ ಬಗ್ಗೆ ಸರ್ಕಾರವನ್ನು ಎಚ್ಚರಿಸಿದ್ದರು. ಮುಖ್ಯವಾಗಿ ಈಗ ಚೀನಾವು ಹಳ್ಳಿ ನಿರ್ಮಿಸಿರುವ ಸುಬಾನ್‌ಸಿರಿ ಜಿಲ್ಲೆಯಲ್ಲಿ ಚೀನಾದ ಚಟುವಟಿಕೆಗಳು ಹೆಚ್ಚಾಗಿ ಕಾಣುತ್ತಿವೆ ಎಂದು ಹೇಳಿದ್ದರು.

Previous Post

ಯುರೋಪಿನಲ್ಲಿ ಇಲ್ಲದ ವಾಟ್ಸಪ್ ಹೊಸ ನೀತಿ ಭಾರತದಲ್ಲಿ ಜಾರಿಗೆ ಕಾರಣವೇನು?

Next Post

ಒಡೆಯನ ತಪ್ಪು ಮುಚ್ಚಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ರಿಪಬ್ಲಿಕ್ ಟಿವಿ

Related Posts

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
0

ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿವಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಈ...

Read moreDetails
US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

January 11, 2026
ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

January 10, 2026
ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

January 7, 2026

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

January 6, 2026
Next Post
ಒಡೆಯನ ತಪ್ಪು ಮುಚ್ಚಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ರಿಪಬ್ಲಿಕ್ ಟಿವಿ

ಒಡೆಯನ ತಪ್ಪು ಮುಚ್ಚಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ರಿಪಬ್ಲಿಕ್ ಟಿವಿ

Please login to join discussion

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada