ಬೆಂಗಳೂರಿನ (Bengaluru ) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy stadium) ನಲ್ಲಿ ನಡೆದ ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ (Cm siddaramaiah) ಮಾತನಾಡಿದ್ದು ಮತ್ತೊಮ್ಮೆ ಆಘಾತ ಮತ್ತು ಮರುಕ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಬೆಂಗಳೂರಿನ ಬೇರೆ ಕಡೆಗೆ ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.

ಹೌದು ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಬೇರೆಡೆದೆ ಸ್ಥಳಾಂತರಿಸುವ ಬಗ್ಗೆ ಈಗಾಗಲೇ ಪರಿಶೀಲನೆ ನಡೆಸಲಾಗ್ತಿದೆ. ಈ ಕಾಲ್ತುಳಿತದ ದುರಂತಕ್ಕೆ ದೀರ್ಘಕಾಲದ ಪರಿಹಾರ ಕಂಡುಕೊಳ್ಳಲು ಸ್ಟೇಡಿಯಂ ಅನ್ನು ಬೇರೆಡೆದೆ ಸ್ಥಳಾಂತರ ಮಾಡಲಾಗುವುದು ಎಂದಿದ್ದಾರೆ.

ಇನ್ನು ಈ ರೀತಿಯ ಅಹಿತಕರ ಘಟನೆಗಳು ಯಾವುದೇ ಸರ್ಕಾರದ ಅವಧಿಯಲ್ಲಾಗಲೀ ನಡೆಯಬಾರದು. ಈ ಘಟನೆ ವೈಯಕ್ತಿಕವಾಗಿ ನನಗೆ ಹಾಗೂ ನನ್ನ ಸರ್ಕಾರಕ್ಕೆ ಅಪಾರ ನೋವು ತಂದಿದೆ ಎಂದು ಹೇಳಿದ್ದಾರೆ.