ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE)ಯ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಹಾಗೂ ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ಗೆ ದೆಹಲಿ ಹೈಕೋರ್ಟ್ ಬುಧವಾರ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿ ವಿಚಾರನೆ ನಡೆಸಿದ ನ್ಯಾ. ಸುಧೀರ್ ಕುಮಾರ್ ಜೈನ್ ವಾದ ಪ್ರತಿವಾದಗಳನ್ನು ಸುಧೀರ್ಘವಾಗಿ ಆಲಿಸಿದ ನಂತರ ಇಬ್ಬರು ಮಾಜಿ ಅಧಿಕಾರಿಗಳಿಗೆ ಜಾಮೀನು ಮಂಜೂರು ಮಾಡಿದ್ದಾರೆ.
NSEಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಆರೋಪಿಸ;ಲಾಗಿತ್ತು. ಇದರ ಸಂಬಂಧ 2018ರ ಮೇ ತಿಂಗಳಲ್ಲಿ ಸಿಬಿಐ ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸುತ್ತಿತು.
ಪ್ರಕರಣದ ಸಂಬಂಧ ಇಬ್ಬರು ಮಾಜಿ ಅಧಿಕಾರಿಗಳನ್ನು ಸಿಬಿಐ 2022ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿತ್ತು.