• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಈ ವರ್ಷ ಆರಂಭ: ಸಿಎಂ ಬೊಮ್ಮಾಯಿ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 24, 2022
in ಕರ್ನಾಟಕ, ಸಿನಿಮಾ
0
ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಈ ವರ್ಷ ಆರಂಭ: ಸಿಎಂ ಬೊಮ್ಮಾಯಿ ಘೋಷಣೆ
Share on WhatsAppShare on FacebookShare on Telegram

ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಇದೇ ವರ್ಷ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.

ADVERTISEMENT

ನಟಸಾರ್ವಭೌಮ ಡಾ ರಾಜಕುಮಾರ್ ಅವರ 94 ನೇ ಜನ್ಮದಿನಾಚರಣೆ ಹಾಗೂ 2017 ನೇ ದಿನದರ್ಶೀ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಈ ಘೋಷಣೆ ಮಾಡಿದರು.

ಯಾರೂ ಮನವಿ ಅಥವಾ ಬೇಡಿಕೆ ಸಲ್ಲಿಸದಿದ್ದರೂ ಪ್ರಸಕ್ತ 2022-23 ನೇ ಸಾಲಿನ ರಾಜ್ಯ  ಆಯವ್ಯಯದಲ್ಲಿ ತಾವು 125 ಕನ್ನಡ ಮತ್ತು ಪ್ರಾದೇಶಿಕ ಚಲನಚಿತ್ರಗಳಿಗೆ ಬದಲಾಗಿ 200 ಚಲನಚಿತ್ರಗಳಿಗೆ ಸಹಾಯಧನ ನೀಡಲು ಅವಕಾಶ ಕಲ್ಪಿಸಿರುವುದಾಗಿ ತಿಳಿಸಿದರು.

ಕಾಡುಗಳ್ಳ ವೀರಪ್ಪನ್ ಅವರಿಂದ ಬಂಧಮುಕ್ತರಾದ ನಂತರ ಡಾ ರಾಜ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಯಾವುದೇ ಕಹಿ ಘಟನೆಗಳನ್ನು ಸ್ಮರಿಸದೆಯೇ ಕೆಟ್ಟ ವಿಚಾರಗಳನ್ನು ಪ್ರಸ್ತಾಪಿಸದ ಡಾ ರಾಜ್ ಕುಮಾರ್ ಅವರ ಉದಾತ್ತ ಮನೋಭಾವವನ್ನು ಕೊಂಡಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೀವಿತಾವಧಿ ಸಾಧನೆಗಾಗಿ ಸುಪ್ರಸಿದ್ಧ ನಟಿ ಲಕ್ಷ್ಮೀ ಅವರಿಗೆ ಡಾ ರಾಜಕುಮಾರ್ ಪ್ರಶಸ್ತಿ ಹಾಗೂ ಹೆಸರಾಂತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ನೀಡಿ  ಗೌರವಿಸಿದರು.

ಇದೇ ಸಂದರ್ಭದಲ್ಲಿ ಡಾ ರಾಜ್ ಕುಮಾರ್ ಅವರ ಹೆಸರಿನ ಪ್ರಶಸ್ತಿ ತಮಗೆ ಲಭಿಸುತ್ತಿರುವುದು ರಾಜ್ ಅವರ ಆಶೀರ್ವಾದ ಲಭಿಸಿದಂತೆ ಎಂದು ನಟಿ ಲಕ್ಷ್ಮೀ ಅವರು ಭಾವುಕರಾಗಿ ನುಡಿದರು.

ಕೆಲಸ ಕಲಿಯಲು ಪುಟ್ಟಣ್ಣ ಕಣಗಾಲ್ ಅವರಲ್ಲಿ ತಾವು ಅವಕಾಶ ಕೋರಿದ ದಿನಗಳನ್ನು ಸ್ಮರಿಸಿದ ನಟ-ನಿರ್ದೇಶಕ ಎಸ್ ನಾರಾಯಣ್ ಅವರು ಪುಟ್ಟಣ್ಣ ಅವರ ಹೆಸರಿನ ಪ್ರಶಸ್ತಿ ತಮಗೆ ದೊರೆತಿರುವುದು ತಮ್ಮ ಸೌಭಾಗ್ಯ ಹಾಗೂ ಈ ದಿನ ತಮ್ಮ ಪಾಲಿನ ಸುದಿನ ಎಂದು ಬಣ್ಣಿಸಿದರು.

ಕನ್ನಡ ಚಲನಚಿತ್ರ ರಂಗಕ್ಕೆ ಹಲವು  ಸದಭಿರುಚಿಯ ಚಿತ್ರಗಳ ಕೊಡುಗೆ ನೀಡಿದ ನಿರ್ಮಾಪಕ ಹಾಗೂ ವಿಷ್ಣುವರ್ಧನ್ ಪ್ರಶಸ್ತಿಗೆ ಭಾಜನರಾಗಿದ್ದ ಜಿ ಎನ್ ಲಕ್ಷ್ಮೀಪತಿ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀಪತಿ ಅವರ ಪುತ್ರ ರಾಮಪ್ರಸಾದ್ ಅವರು ತಮ್ಮ ತಂದೆಯ ಪರವಾಗಿ ಮುಖ್ಯಮಂತ್ರಿಯವರಿಂದ ವಿಷ್ಣುವರ್ಧನ್ ಪ್ರಶಸ್ತಿ ಸ್ವೀಕರಿಸಿದರು.

ಡಾ ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ವಿಷ್ಣುವರ್ಧನ್ ಪ್ರಶಸ್ತಿ ವಿಜೇತರಿಗೆ ತಲಾ ಐದು ಲಕ್ಷ ರೂಪಾಯಿ ನಗದು, ಐವತ್ತು ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕ, ಸ್ಮರಣಿಕೆ ಮತ್ತು ಫಲ ತಾಂಬೂಲ ನೀಡಿ ಮುಖ್ಯಮಂತ್ರಿ ಗೌರವಿಸಿದ್ದು ಗಮನಾರ್ಹ.

ಉತ್ತಮ ನಟ, ಉತ್ತಮ ನಟಿ ಮೊದಲ, ಎರಡನೇ ಮತ್ತು ಮೂರನೇ ಅತ್ಯುತ್ತಮ ಚಿತ್ರಗಳ ಹಾಗೂ ಇತರೆ ತಾಂತ್ರಿಕ ವರ್ಗದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Tags: Basavaraja BommaiBJPchitranagariKarnatakaMysorepratidvanisandalwood
Previous Post

ರಾಹುಲ್ 2ನೇ ಶತಕ: ಮುಂಬೈಗೆ 169 ರನ್ ಗುರಿ!

Next Post

ದಲಿತರು ಸತ್ತಾಗ ಪ್ರಾಣಿ ದಯಾ ಸಂಘವೂ ಬರಲ್ಲ, ಹಿಂದುತ್ವವಾದಿಗಳೂ ದನಿಯೆತ್ತಲ್ಲ: ಹೆಚ್‌ ಸಿ ಮಹದೇವಪ್ಪ ಆಕ್ರೋಶ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ದಲಿತರು ಸತ್ತಾಗ ಪ್ರಾಣಿ ದಯಾ ಸಂಘವೂ ಬರಲ್ಲ, ಹಿಂದುತ್ವವಾದಿಗಳೂ ದನಿಯೆತ್ತಲ್ಲ: ಹೆಚ್‌ ಸಿ ಮಹದೇವಪ್ಪ ಆಕ್ರೋಶ

ದಲಿತರು ಸತ್ತಾಗ ಪ್ರಾಣಿ ದಯಾ ಸಂಘವೂ ಬರಲ್ಲ, ಹಿಂದುತ್ವವಾದಿಗಳೂ ದನಿಯೆತ್ತಲ್ಲ: ಹೆಚ್‌ ಸಿ ಮಹದೇವಪ್ಪ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada