• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕನಕಪುರ | ಬಾಕಿ ವೇತನಕ್ಕೆ ಆಗ್ರಹಿಸಿ ಮೈ ಮೇಲೆ ಮಲ ಸುರಿದುಕೊಂಡು ಪೌರ ಕಾರ್ಮಿಕರ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ಕರ್ನಾಟಕ
0
ಕನಕಪುರ

ಮೈ ಮೇಲೆ ಮಲ ಸುರಿದುಕೊಂಡು ಕನಕಪುರದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ

Share on WhatsAppShare on FacebookShare on Telegram

ಹದಿನಾಲ್ಕು ತಿಂಗಳ ಬಾಕಿ ವೇತನಕ್ಕೆ ಆಗ್ರಹಿಸಿ ಪೌರ ಕಾರ್ಮಿಕರಿಬ್ಬರು ಮೈ ಮೇಲೆ ಮಲ ಸುರಿದುಕೊಂಡು ಪ್ರತಿಭಟಿಸಿರುವ ಘಟನೆ ಮಂಗಳವಾರ (ಆಗಸ್ಟ್ 22) ಕನಕಪುರ ತಾಲೂಕಿನಲ್ಲಿ ನಡೆದಿದೆ.

ADVERTISEMENT

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಸಬಾ ಹೋಬಳಿಯ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು, ಇದಾದ ಒಂದೇ ತಾಸಿನಲ್ಲಿ ಇಬ್ಬರ ವೇತನವನ್ನು ಪಾವತಿಸಲಾಗಿದೆ.

ಪಂಚಾಯಿತಿಯಲ್ಲಿ ಸ್ವಚ್ಛಗಾರರಾಗಿ ಕೆಲಸ ಮಾಡುತ್ತಿದ್ದ ಎನ್. ಸುರೇಶ್ ಮತ್ತು ವಿ. ರಂಗಯ್ಯ ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರು. 2020ರಿಂದ ಕೆಲಸ ಮಾಡುತ್ತಿದ್ದ ಇಬ್ಬರಿಗೂ ಒಂದೂವರೆ ವರ್ಷದ ಹಿಂದಿನ ತಲಾ 31.60 ಲಕ್ಷ ವೇತನ ಬಾಕಿ ಇತ್ತು.

ವೇತನಕ್ಕಾಗಿ ಪಂಚಾಯಿತಿ ಅಧಿಕಾರಿಗಳನ್ನು ಕೇಳಿ ಬೇಸತ್ತ ಕಾರ್ಮಿಕರು, ಮಧ್ಯಾಹ್ನ ಬಿಂದಿಗೆಯಲ್ಲಿ ಮಲ ತೆಗೆದುಕೊಂಡು ಬಂದು ಪಂಚಾಯಿತಿ ಎದುರು ಮೈ ಮೇಲೆ ಸುರಿದುಕೊಂಡಿದ್ದಾರೆ. ಬಳಿಕ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷರು ಇಬ್ಬರ ವೇತನವನ್ನು ಲೆಕ್ಕಾಚಾರ ಮಾಡಿ, ಚೆಕ್ ಮತ್ತು ನಗದು ಮೂಲಕ ಪಾವತಿಸಿದ್ದಾರೆ.

“ಬಾಕಿ ವೇತನ ಕುರಿತು ನನಗೂ ತಿಳಿಸದ ಪೌರ ಕಾರ್ಮಿಕರು, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಕಾರ್ಯಕರ್ತರೊಂದಿಗೆ ಪಂಚಾಯಿತಿಗೆ ಬಂದು ಮಲ ಸುರಿದುಕೊಂಡು ಪ್ರತಿಭಟಿಸಿದ್ದಾರೆ. ನಂತರ. ಇಬ್ಬರಿಗೆ ತಲಾ 71,10,400 ಮೊತ್ತದ ಚೆಕ್ ಮತ್ತು 750 ಸಾವಿರ ಕೊಟ್ಟು ಬಾಕಿ ಸಂಬಳ ಪಾವತಿಸಿದ್ದೇವೆ” ಎಂದು ಕನಕಪುರ ತಾಲೂಕಿನ ಕಲ್ಲಹಳ್ಳಿ ಪಿಡಿಒ ಶ್ರೀನಿವಾಸ್ ತಿಳಿಸಿದ್ದಾರೆ.

ಕನಕಪುರ
ಪೌರ ಕಾರ್ಮಿಕರು ಪ್ರತಿಭಟಿಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳ ಭೇಟಿ

:ಇಬ್ಬರೂ ಕಾರ್ಮಿಕರಿಗೆ 2021ರಿಂದ 14 ತಿಂಗಳ ಸಂಬಳವನ್ನು ಹಿಂದಿನ ಪಿಡಿಒಗಳು ಬಾಕಿ ಉಳಿಸಿದ್ದರು. ನನ್ನ ಅವಧಿಯಲ್ಲಿ ಯಾವುದೇ ಬಾಕಿ ಇರಲಿಲ್ಲ. ಕಾರ್ಮಿಕರಿಗೆ ತಲಾ 15 ಸಾವಿರ ರೂ. ಸಂಬಳ ನೀಡಲಾಗುತ್ತಿತ್ತು. ಎರಡು ತಿಂಗಳಿಂದ ಕೆಲಸಕ್ಕೆ ಹಾಜರಾಗದ ಕಾರ್ಮಿಕರು, ಕನಕಪುರದಲ್ಲಿ ಕೆಲಸ ಮಾಡುತ್ತಿರುವ ಮಾಹಿತಿ ಬಂದಿತ್ತು’ ಎಂದು ಹೇಳಿದರು.

“ಬಾಕಿ ವೇತನಕ್ಕಾಗಿ ಕಾರ್ಮಿಕರು ಮೈ ಮೇಲೆ ಸುರಿದುಕೊಳ್ಳಬಾರದಿತ್ತು. ವಿಷಯವನ್ನು ನನ್ನ ಗಮನಕ್ಕೆ ತಂದಿದ್ದರೆ, ಕೂಡಲೇ ಪಾವತಿಸಲು ಕ್ರಮ ಕೈಗೊಳ್ಳುತ್ತಿದ್ದೆ” ಎಂದು ಕನಕಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ ತಿಳಿಸಿದರು.

ಕಾರ್ಮಿಕರು ಮಲ ಸುರಿದುಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಈಗ ಇದು ವೈರಲ್ ಆಗಿದ್ದು ಹಲವು ಟೀಕೆಗಳು ವ್ಯಕ್ತವಾಗಿವೆ.

Tags: Civilian WorkersfecesKanakapuraಕನಕಪುರಗುತ್ತಿಗೆ ಹಾಗೂ ಹೊರಗುತ್ತಿಗೆ ಪೌರ ಕಾರ್ಮಿಕರುಮಲ
Previous Post

ಹರಿಯಾಣ | ವಿಶ್ವ ಹಿಂದೂ ಪರಿಷತ್‌ ಯಾತ್ರೆಗೆ ನೂಹ್‌ ಜಿಲ್ಲಾಡಳಿತ ಅನುಮತಿ ನಿರಾಕರಣೆ

Next Post

ಜಲ ವಿವಾದ | ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಸರ್ವಪಕ್ಷ ಸಭೆ

ಜಲ ವಿವಾದ | ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada