• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಾನೂನು ಶಿಕ್ಷಣ & ನ್ಯಾಯಾಲಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯಕ್ಕಾಗಿ ಆಗ್ರಹಿಸಿದ ಸಿಜೆಐ

Any Mind by Any Mind
March 12, 2022
in ದೇಶ
0
ಕಾನೂನು ಶಿಕ್ಷಣ & ನ್ಯಾಯಾಲಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯಕ್ಕಾಗಿ ಆಗ್ರಹಿಸಿದ ಸಿಜೆಐ
Share on WhatsAppShare on FacebookShare on Telegram

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದ ಒಟ್ಟು 37 ಮಹಿಳಾ ಅಭ್ಯರ್ಥಿಗಳ ಪೈಕಿ 17 ಮಂದಿಯನ್ನು ಮಾತ್ರ ಈವರೆಗೆ ನೇಮಕ ಮಾಡಲಾಗಿದ್ದು, ಉಳಿದ ಹೆಸರುಗಳು ಕೇಂದ್ರ ಸರ್ಕಾರದ ಬಳಿ ಇನ್ನೂ ಬಾಕಿ ಇವೆ ಎಂದು ಎನ್‌ವಿ ರಮಣ ಹೇಳಿದ್ದಾರೆ.  ಮಾತ್ರವಲ್ಲದೆ ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ನೀಡಬೇಕು ಎಂದು ಸಿಜೆಐ ಕರೆ ನೀಡಿದ್ದಾರೆ.

ADVERTISEMENT

 “ಉನ್ನತ ನ್ಯಾಯಾಲಯಗಳಿಗೆ ನಾವು ಇದುವರೆಗೆ 192 ಅಭ್ಯರ್ಥಿಗಳನ್ನು ಶಿಫಾರಸು ಮಾಡಿದ್ದೇವೆ.  ಇವರಲ್ಲಿ 37 ಅಭ್ಯರ್ಥಿಗಳು ಅಂದರೆ ಶೇ.19 ರಷ್ಟು ಮಹಿಳೆಯರು.  ಇದು ನಿಸ್ಸಂಶಯವಾಗಿ ಉಚ್ಚ ನ್ಯಾಯಾಲಯಗಳಲ್ಲಿ ಈಗಿರುವ ಮಹಿಳಾ ನ್ಯಾಯಾಧೀಶರ ಶೇಕಡಾ 11.8 ಕ್ಕಿಂತ ಹೆಚ್ಚು.  ಆದರೆ ದುರದೃಷ್ಟವಶಾತ್, ಹೈಕೋರ್ಟಿಗೆ ಶಿಫಾರಸು ಮಾಡಲಾದ 37 ಮಹಿಳೆಯರಲ್ಲಿ 17 ಮಂದಿಯನ್ನು ಮಾತ್ರ ನೇಮಕ ಮಾಡಲಾಗಿದೆ ”ಎಂದು ಸಿಜೆಐ ಮೊದಲ ಬಾರಿ ಆಚರಿಸಲಾಗುತ್ತಿರುವ ‘ಮಹಿಳಾ ನ್ಯಾಯಾಧೀಶರ ಅಂತರರಾಷ್ಟ್ರೀಯ ದಿನ’ದ ಆನ್‌ಲೈನ್ ಈವೆಂಟ್‌ನ ತಮ್ಮ ಭಾಷಣದಲ್ಲಿ ಹೇಳಿದ್ದಾರೆ

ವೃತ್ತಿಯಲ್ಲಿ ಹೆಚ್ಚಿನ ಮಹಿಳಾ ಪ್ರಾತಿನಿಧ್ಯದ ಅಗತ್ಯವನ್ನು ಒತ್ತಿ ಹೇಳಿದ ಸಿಜೆಐ, ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ನೀಡಬೇಕೆಂದು ಕರೆ ನೀಡಿದರು. “ನಾನು ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಮೀಸಲಾತಿಯನ್ನು ಬಲವಾಗಿ ಪ್ರಸ್ತಾಪಿಸುತ್ತೇನೆ.  ಅಂತಹ ಪ್ರಯತ್ನಗಳು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಮಹಿಳಾ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸುವಲ್ಲಿ ಉತ್ತೇಜಕ ಫಲಿತಾಂಶಗಳನ್ನು ನೀಡಿದೆ ಎಂದು ಡೇಟಾ ಸಾಬೀತುಪಡಿಸುತ್ತದೆ” ಎಂದೂ ಅವರು ಹೇಳಿದ್ದಾರೆ.

ಕಳೆದ ವರ್ಷ ಏಪ್ರಿಲ್ 28 ರಂದು ಸಭೆ ಸೇರಿದ್ದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಪ್ರತಿ ವರ್ಷ ಮಾರ್ಚ್ 10 ಅನ್ನು ಮಹಿಳಾ ನ್ಯಾಯಾಧೀಶರ ಅಂತರರಾಷ್ಟ್ರೀಯ ದಿನವನ್ನಾಗಿ ಆಚರಿಸಲು ನಿರ್ಧರಿಸಿತ್ತು. ಕತಾರ್ ಮಂಡಿಸಿದ ಈ ನಿರ್ಣಯವನ್ನು ಬೆಂಬಲಿಸಿದ ರಾಷ್ಟ್ರಗಳಲ್ಲಿ ಭಾರತವೂ ಒಂದು.

ನ್ಯಾಯಮೂರ್ತಿ ರಮಣ ಅವರು, “ವಕೀಲ ವೃತ್ತಿಯು ಇನ್ನೂ ಪುರುಷ ಪ್ರಾಬಲ್ಯವನ್ನು ಹೊಂದಿದೆ, ಮಹಿಳೆಯರ  ಪ್ರಾತಿನಿಧ್ಯ ತೀವ್ರ ಕಡಿಮೆ‌ ಇದೆ”  ಎಂದ ಅವರು “ಮಾರ್ಚ್ 10 ಅನ್ನು ಅಂತರರಾಷ್ಟ್ರೀಯ ಮಹಿಳಾ ನ್ಯಾಯಾಧೀಶರ ದಿನವೆಂದು ಗುರುತಿಸುವುದು ‘ಜಾಗೃತಿ ಮೂಡಿಸಲು ಮತ್ತು ರಾಜಕೀಯ ಇಚ್ಛಾಶಕ್ತಿಯನ್ನು ಸಜ್ಜುಗೊಳಿಸಲು’ ಒಂದು ಪ್ರಮುಖ ಹೆಜ್ಜೆಯಾಗಿದೆ” ಎಂದಿದ್ದಾರೆ.

ಸಿಜೆಐ ಅವರು “ಮಹಿಳೆಯರು ವಿಶೇಷವಾಗಿ ಭಾರತೀಯ ಸಮಾಜದಲ್ಲಿ ಎದುರಿಸುತ್ತಿರುವ ವ್ಯವಸ್ಥಿತ ಪೂರ್ವಾಗ್ರಹಗಳ ಬಗ್ಗೆ ಸಂಪೂರ್ಣ ಅರಿವು ನನಗಿದೆ. ಸಾಕಷ್ಟು ಕೌಶಲ್ಯ ಮತ್ತು ಜ್ಞಾನವನ್ನು ಗಳಿಸಿದರೂ ಮಹಿಳೆಯರಿಗೆ  ಪ್ರಾತಿನಿಧ್ಯದ ಕೊರತೆ ಇದೆ” ಎಂದು ಹೇಳಿದ್ದಾರೆ.  “ನ್ಯಾಯಾಧೀಶರು ಮತ್ತು ವಕೀಲರಾಗಿ ಮಹಿಳೆಯರ ಉಪಸ್ಥಿತಿಯು ನ್ಯಾಯ ವಿತರಣಾ ವ್ಯವಸ್ಥೆಯನ್ನು ಗಣನೀಯವಾಗಿ ಸುಧಾರಿಸುತ್ತದೆ.  ಬೆಂಚ್ ಮತ್ತು ಬಾರ್‌ನಲ್ಲಿ ಮಹಿಳೆಯರ ಉಪಸ್ಥಿತಿಯು ಸಾಂಕೇತಿಕ ಪ್ರಾಮುಖ್ಯತೆಗಿಂತ ಹೆಚ್ಚಿನದನ್ನು ಹೊಂದಿದೆ.  ಅವರು ಕಾನೂನಿಗೆ ವಿಭಿನ್ನ ದೃಷ್ಟಿಕೋನವನ್ನು ತರುತ್ತಾರೆ, ಅದು ಅವರ ಅನುಭವದ ಮೇಲೆ ನಿರ್ಮಿಸಲ್ಪಟ್ಟಿರುತ್ತದೆ.  ಕೆಲವು ಕಾನೂನುಗಳು ಪುರುಷರು ಮತ್ತು ಮಹಿಳೆಯರ ಮೇಲೆ ಬೀರಬಹುದಾದ ವಿಭಿನ್ನ ಪರಿಣಾಮಗಳ ಬಗ್ಗೆ ಅವರು ಹೆಚ್ಚು ಸೂಕ್ಷ್ಮವಾದ ತಿಳುವಳಿಕೆಯನ್ನು ಹೊಂದಿದ್ದಾರೆ” ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Tags: BJPCongress PartyCovid 19ಕರೋನಾಕಾನೂನು ಶಿಕ್ಷಣಕೋವಿಡ್-19ನರೇಂದ್ರ ಮೋದಿನ್ಯಾಯಾಲಯ ಕ್ಷೇತ್ರಬಿಜೆಪಿಮಹಿಳೆಯರುಸಿಜೆಐ
Previous Post

ಕೋವಿಡ್‌ ಸಮಯದಲ್ಲಿ ಅತಿ ಹೆಚ್ಚು ಮರಣಗಳು ಸಂಭವಿಸಿದ ದೇಶ ಭಾರತ : ಲ್ಯಾನ್ಸೆಟ್ ವರದಿ

Next Post

ಪಂಚರಾಜ್ಯ ಚುನಾವಣೆ: ಗಾಂಧಿ ಪರಿವಾರದ ವೈಫಲ್ಯತೆಯೇ ಬಿಜೆಪಿಗೆ ಶ್ರೀರಕ್ಷೆ

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಪಂಚರಾಜ್ಯ ಚುನಾವಣೆ: ಗಾಂಧಿ ಪರಿವಾರದ ವೈಫಲ್ಯತೆಯೇ ಬಿಜೆಪಿಗೆ ಶ್ರೀರಕ್ಷೆ

ಪಂಚರಾಜ್ಯ ಚುನಾವಣೆ: ಗಾಂಧಿ ಪರಿವಾರದ ವೈಫಲ್ಯತೆಯೇ ಬಿಜೆಪಿಗೆ ಶ್ರೀರಕ್ಷೆ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada