ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹದಿಂದ ಉತ್ತರಾಖಂಡ್ ನ ರಾಯ್ ಪುರ- ಕುಮ್ಡಾಲಾ ಪ್ರದೇಶದಲ್ಲಿ ಸಣ್ಣಪುಟ್ಟ ಸೇತುವೆಗಳನ್ನು ಮುರಿದು ಮುನ್ನುಗ್ಗುತ್ತಿದ್ದು, ಆತಂಕ ಸೃಷ್ಟಿಸಿದೆ.
ಡೆಹ್ರಾಡೂನ್ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ದಿಢೀರನೆ ಮೇಘಸ್ಫೋಟ ಉಂಟಾಗಿದ್ದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಪಾತ್ರದ ಮನೆಗಳು ಜಖಂಗೊಂಡಿದ್ದು ಸುರಕ್ಷಿತ ಪ್ರದೇಶಗಳಿಗೆ ಜನರನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.
ಮುಂಜಾನೆ 2.15ರ ಸುಮಾರಿಗೆ ದಿಢೀರ್ ಪ್ರವಾಹ ಸೃಷ್ಟಿಯಾಗಿದ್ದು, ಸಾಂಗ್ ನದಿ ದಿಢೀರನೆ ಉಕ್ಕಿ ಹರಿಯುತ್ತಿರುವುದರಿಂದ ಸೇತುವೆ ಮುಳುಗಿದೆ ಎಂದು ಹೇಳಲಾಗಿದೆ.