X ಪೋಸ್ಟ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದೂರು ದಾಖಲು ಮಾಡಿದ್ದಾರೆ. ಸಿಎಂ ವಿರುದ್ಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಪಾಂಡು ಎಂಬುವರ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಕೆ ಮಾಡಿದೆ.
ಚಿಕ್ಕಮಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿರುವ ಕಾಂಗ್ರೆಸ್, ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ವೋಟು ನಮಗೆ ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂ ಓಲೈಕೆ ಕುರಿತು ಬಿಜೆಪಿಗರ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ. ಮುಸ್ಲಿಂಮರ ಪರ ಸಿಎಂ ಹೇಳಿಕೆ ನೀಡಿರುವಂತೆ ಅಪಪ್ರಚಾರ ಮಾಡಲಾಗಿದೆ. ನಕಲಿ ಪತ್ರಿಕೆಯ ಸುದ್ದಿಯನ್ನು ಟ್ವಿಟರ್ಗೆ ಹಾಕಿ ಅಪಪ್ರಚಾರ ಮಾಡಿದ ಆರೋಪ ಕೇಳಿ ಬಂದಿದೆ.
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದಿಂದ ದೂರು ಸಲ್ಲಿಕೆಯಾಗಿದೆ. ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಮಾಡಲಾಗಿದೆ. ಸುಳ್ಳು ಸುದ್ದಿ ಹಡಿಸುತ್ತಿರುವವರ ವಿರುದ್ಧ ಕ್ರಮ ಆಗಬೇಕು ಎಂದು ದೂರು ಸಲ್ಲಿಸಲಾಗಿದೆ.
ಇತ್ತ ಸಿಎಂ ಸಿದ್ದರಾಮಯ್ಯ ವಿರುದ್ದ ಫೇಕ್ ನ್ಯೂಸನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡ್ತಿದ್ದವರ ವಿರುದ್ದ ಪಶ್ಚಿಮ ವಿಭಾಗ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಪತ್ರಿಕೆಯಲ್ಲಿ ಪ್ರಕಟವಾದಂತೆ ಬಿಂಬಿಸಿ ನಕಲಿ ಪೋಸ್ಟ್ ಕ್ರಿಯೇಟ್ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದ ಆರೋಪಿಗಳ ವಿರುದ್ಧ ಬೆಂಗಳೂರಲ್ಲೂ ದೂರು ದಾಖಲಾಗಿದೆ.
ಹಿಂದುಗಳ ಅಗತ್ಯ ನಮಗೆ ಬೇಡ, ಮುಸ್ಲಿಂರ ಓಟು ನಮಗೆ ಸಾಕು, ಮುಂದಿನ ಜನ್ಮದಲ್ಲಿ ಮುಸ್ಲಿಂರಾಗಿ ಹುಟ್ಟುತ್ತೇವೆ, ಬಿಜೆಪಿ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಪೋಸ್ಟ್ ಹಾಕಿದ್ದು ವಾಟ್ಸ್ ಅಪ್ ಗ್ರೂಪ್ಗಳಲ್ಲಿ ಹಾಗೂ ಕೆಲ ಬಿಜೆಪಿ ಗ್ರೂಪ್ಗಳಲ್ಲಿ ಹರಿದಾಡ್ತಿದ್ದನ್ನ ಗಮನಿಸಿದ ಹರೀಶ್ ನಾಗರಾಜು ಎಂಬುವರು ದೂರು ದಾಖಲಿಸಿದ್ದಾರೆ. ಏಳು ಮಂದಿ ವಿರುದ್ಧ ದೂರು ಸಲ್ಲಿಸಿದ್ದಾರೆ.