ರಾಜ್ಯ ಹಾಗು ರಾಷ್ಟ್ರದ್ಲಲಿ ತೀವ್ರ ಭುಗಿಲೆಬ್ಬಿಸಿರುವ ಪಠ್ಯ ಪರಿಷ್ಕರಣೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯಾವುದೇ ಕಾರಣಕ್ಕು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕರಾದ ಕೇಶವ್ ಬಲಿರಾಮ್ ಹೆಡಗೇವಾರ್ ಪಾಠವನ್ನ ಪಠ್ಯದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಪಠ್ಯಪುಸ್ತಕ ಸಮಿತಿಯನ್ನು ವಿಸರ್ಜಿಲಾಗಿದೆ ಹಾಗೆಂದ ಮಾತ್ರಕ್ಕೆ ಪಠ್ಯವನ್ನು ವಿಸರ್ಜಿಸಬೇಕೆಂದು ಇಲ್ಲವಲ್ಲ ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು, ನಾನು ಪರಿಷ್ಕೃತ ಪಠ್ಯವನ್ನು ನೋಡಿರಲಿಲ್ಲ ಶುಕ್ರವಾರ ಪರಿಶೀಲಿಸಿದೆ. ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿ ಹಾಗು ಈ ಸಮಿತಿ ಪರಿಷ್ಕರಿಸಿರುವ ಪಠ್ಯದಲ್ಲಿ ಒಂದು ವಾಕ್ಯದ ವ್ಯತ್ಯಾಸವಿದೆ ಈ ವಿಚಾರವನ್ನ ಸಾಣೇಹಳ್ಳಿಯ ಸ್ವಾಮೀಜಿಗಳಿಗು ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದರು.
ನಾನು ಈ ಹಿಂದೆ ಹೇಳಿದಂತೆ ನಮ್ಮದು ಬಸವ ಪಥದ ಸರ್ಕಾರ. ಬಸವಣ್ಣರವರ ಹಲವು ವಚನಗಳನ್ನು ಪಠ್ಯದಲ್ಲಿ ಅಳವಡಿಸಲಾಗಿದೆ.ಅ ನಾಡಿನ ಸ್ವಾಮೀಜಿಗಳ ಅಭಿಪ್ರಾಯ ಪಡೆದು ಬಸವಣ್ಣನ ನಿಜ ಇತಿಹಾಸವನ್ನ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಹೇಳಿದ್ದಾರೆ.