ಪಠ್ಯಪುಸ್ತಕ ಪರಿಷ್ಕರಣೆಯ ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪಠ್ಯಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿದಂತೆ, ಈಗಾಗಲೇ ಪಠ್ಯದಲ್ಲಿರುವ ಪಾಠಗಳನ್ನು ತೆಗೆಯುವಂತೆ ಕೆಲ ಸಾಹಿತಿಗಳು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಸಮಗ್ರ ವರದಿಯನ್ನು ಕೇಳಲಾಗಿದೆ. ಸ್ವಾಮೀಜಿಗಳು ಹಾಗೂ ಇತರರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ಈ ಎಲ್ಲ ವಿಚಾರಗಳ ಬಗ್ಗೆ ಸಮಗ್ರ ವರದಿ ಹಾಗೂ ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ವರದಿ ಪಡೆದು, ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ನಾಳೆ ವರದಿ ದೊರೆಯಲಿದ್ದು, ಪಠ್ಯಗಳನ್ನು ವಾಪಸ್ಸು ಪಡೆಯುತ್ತೇವೆ ಎನ್ನುವ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.

ಎಸಿಬಿ ಈಗಾಗಲೇ ಬಲವರ್ಧನೆಯಾಗಿದೆ. ಲೋಕಾಯುಕ್ತ ಇದ್ದರೂ , ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಎಸಿಬಿ ಆ ಅಧಿಕಾರವಿದೆ ಎಂದು ತಿಳಿಸಿದ್ದಾರೆ.
ಲವ್ ಜಿಹಾದ್ ಕರಾವಳಿ ಭಾಗದಲ್ಲಿ ಮತ್ತೊಮ್ಮೆ ಸದ್ದುಮಾಡುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಇದಕ್ಕಾಗಿ ಕಾನೂನು ರೂಪಿಸಲಾಗಿದ್ದು, ಯಾರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದು ಎಚ್ಚರಿಸಿದ್ದಾರೆ.