ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ್ದರಿಂದ ನಮ್ಮ ಬಲ ಹೆಚ್ಚಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಈ ಕುರಿತು ಬೆಂಗಳೂರಿನ ಅವರ ನಿವಾಸದಲ್ಲಿ ಮಾತನಾಡಿದ ಅವರು, ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಿರುವುದು ಬಿಜೆಪಿಗೆ ಶಕ್ತಿ ತುಂಬಿದೆ. ಯಡಿಯೂರಪ್ಪ ನವರಿಗೆ ಅತ್ಯಂತ ಉನ್ನತ ಮಟ್ಟದ ನಿರ್ಣಯ ಮಾಡುವ ಸ್ಥಾನ ನೀಡಲಾಗಿದೆ. ಚುನಾವಣೆಯ ಸಮಿತಿಗೂ ಆಯ್ಕೆ ಮಾಡುವ ಮೂಲಕ ಯಡಿಯೂರಪ್ಪ ಅವರ ರಾಜಕೀಯ ಅನುಭವಕ್ಕೆ ವರಿಷ್ಠರು ಮಾನ್ಯತೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಹಾಗೂ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇದೊಂದು ರಾಜಕೀಯವಾಗಿ ಮಹತ್ವದ ಹಾಗೂ ದೂರದೃಷ್ಟಿಯ ನಿರ್ಣಯ. ಬಿಜೆಪಿಯ ನಾಯಕರು ಹಾಗೂ ಕಾರ್ಯಕರ್ತರಿಗೆ ಯಡಿಯೂರಪ್ಪ ಜೊತೆ ಭಾವನಾತ್ಮಕ ಸಂಬಂಧ ಇದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೂ ಯಡಿಯೂರಪ್ಪ ಸಕ್ರಿಯವಾಗಿದ್ದರು ಎಂದು ಹೇಳಿದ್ದಾರೆ.
2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ದ. ವಿರೋಧ ಪಕ್ಷಗಳ ಸರ್ವೇ ಯಾವ ರೀತಿ ಇದೆ ಎಂದು ಗೊತ್ತಿದೆ ಎಂದು ಹೇಳಿದ್ದಾರೆ.