• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್‌ ಡಿಕೆ ಸೇರಿ ಗಣ್ಯರಿಂದ ಸಂತಾಪ..

Any Mind by Any Mind
March 23, 2023
in Top Story, ಇದೀಗ, ರಾಜಕೀಯ
0
ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ  ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್‌ ಡಿಕೆ ಸೇರಿ ಗಣ್ಯರಿಂದ ಸಂತಾಪ..
Share on WhatsAppShare on FacebookShare on Telegram

ADVERTISEMENT

ಬೆಂಗಳೂರು :ಮಾ.23: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀಗಳ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ. ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಚಿಕಿತ್ಸೆ ಫಲಿಸದ ಕಾರಣದಿಂದ ದೇಹತ್ಯಾಗ ಮಾಡಿದ್ದಾರೆ.

ಸ್ವಸ್ಥಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನ ಭಟ್ಟಾರಕ ಶ್ರೀಗಳಿಗೆ ಭಾರತ ಮಾತ್ರವಲ್ಲದೆ ವಿಶ್ವದ ನಾನಾ ದೇಶಗಳಲ್ಲಿ ಭಕ್ತರಿದ್ದಾರೆ. ಇಡೀ ಭಕ್ತ ಸಮೂಹಕ್ಕೆ ಶ್ರೀಗಳ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಮನುಕುಲದ ಅಂತರಂಗ ಶುದ್ಧಿ ಮತ್ತು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡುತ್ತಿದ್ದ ಶ್ರೀಗಳು ಸ್ವತಃ ಬೆಂಗಳೂರು ಮತ್ತು ಮೈಸೂರು ವಿಶ್ವ ವಿದ್ಯಾಲಯದಲ್ಲಿ ಕ್ರಮವಾಗಿ ತತ್ವಶಾಸ್ತ್ರ ಮತ್ತು ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಪ್ರಾಕೃತ, ಸಂಸ್ಕೃತ ಮತ್ತು ಕನ್ನಡದಲ್ಲಿ ಅಪಾರ ಪಾಂಡಿತ್ಯ ಮತ್ತು ಪರಿಣತಿ ಹೊಂದಿದ್ದ ಇವರು ಪ್ರಾಕೃತ ವಿಶ್ವ ವಿದ್ಯಾಲಯವನ್ನೂ ಸ್ಥಾಪಿಸಿದ್ದರು. ಪಾಲಿಟೆಕ್ಷಿಕ್, ಎಂಜಿನಿಯರಿAಗ್, ನರ್ಸಿಂಗ್ ಕಾಲೇಜುಗಳನ್ನೂ ಸ್ಥಾಪಿಸಿ ಸಾವಿರಾರು ಮಕ್ಕಳಿಗೆ ಶಿಕ್ಷಣ ದೊರಕಿಸಿದ್ದಾರೆ.

ಶ್ರವಣಬೆಳಗೊಳದ ಶ್ರೀ ಜೈನಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರು ಅಗಲಿದ ವಿಷಯ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಶ್ರೀ ಭಗವಾನ್ ಬಾಹುಬಲಿ ಅವರ ಶಾಂತಿ, ಅಹಿಂಸೆ, ಸಹನೆ ತತ್ವಗಳನ್ನು ಪಸರಿಸುತ್ತಾ ಜನರಲ್ಲಿ ಅರಿವಿನ ಬೆಳಕು ಮೂಡಿಸಿದ್ದ ಪರಮಪೂಜ್ಯರು ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದರು.1/2 pic.twitter.com/dyBg4PfF8U

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 23, 2023

ನಾನು ಹಲವು ಬಾರಿ ಶ್ರೀಗಳ ದರ್ಶನ ಮತ್ತು ಆಶೀರ್ವಾದ ಪಡೆದಿದ್ದೇನೆ. ಶ್ರೀಗಳು ಜೀವಮಾನದಲ್ಲಿ ಮೊಬೈಲ್ ಸ್ಪರ್ಷಿಸಿಲ್ಲ, ಆಧುನಿಕ ಸವಲತ್ತುಗಳನ್ನು ಆಶಿಸದೆ 12 ವರ್ಷಗಳ ಕಾಲ ವಾಹನ ಸಂಚಾರವನ್ನೇ ಮಾಡದೆ ಗ್ರಂಥ ರಚನೆ ಮಾಡಿದ್ದರು ಎನ್ನುವುದು ಬಹಳ ಉನ್ನತವಾದ ಮೌಲ್ಯ. ಜೈನ ಪರಂಪರೆ ಮತ್ತು ಅಧ್ಯಾತ್ಮದ ಮೌಲ್ಯಗಳನ್ನು ಹೇಳುವ ದವಳ ಮತ್ತು ಜಯದವಳ ಆಗಮ ಗ್ರಂಥಗಳನ್ನು ಶ್ರೀಗಳು ರಚನೆ ಮಾಡಿದ್ದಾರೆ ಎನ್ನುವುದನ್ನು ಕೇಳಿ ತಿಳಿದಿದ್ದೇನೆ.

ಶ್ರವಣಬೆಳಗೊಳದ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು.
ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ.
ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ. pic.twitter.com/AKtNpZrzPx

— Siddaramaiah (@siddaramaiah) March 23, 2023

ಇಂದು ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಓಂ ಶಾಂತಿಃ

— Basavaraj S Bommai (Modi Ka Parivar) (@BSBommai) March 23, 2023

1949ರಲ್ಲಿ ರತ್ನವರ್ಮರಾಗಿ ಕಾರ್ಕಳದ ವರಂಗ ಗ್ರಾಮದಲ್ಲಿ ಜನಿಸಿದ್ದ ಶ್ರೀಗಳು 1970ರಲ್ಲಿ ಶ್ರವಣಬೆಳಗೊಳದ ಪೀಠಾಧಿಪತಿಗಳಾಗಿ ಹೊಯ್ಸಳ ವಂಶದ ಚಾರುಕೀರ್ತಿ ಪಟ್ಟವನ್ನೂ ಪಡೆದರು. ಇವರು ತಮ್ಮ ಅವಧಿಯಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಶ್ರವಣಬೆಳಗೊಳದ ಮಹಾಮಸ್ತಾಭಿಷೇಕವನ್ನು 1981, 1993, 2006 ಮತ್ತು 2018 ರಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿಸಿದ್ದಾರೆ.
ಇವರ ಅಧ್ಯಾತ್ಮದ ಸಾಧನೆ ನಮ್ಮ ನೆಲದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಇವರ ಶಿಕ್ಷಣ ಕ್ಷೇತ್ರದ ಸಾಧನೆಗಳೂ ಹಲವು ತಲೆಮಾರುಗಳವರೆಗೂ ಬೆಳೆಯುತ್ತಲೇ ಇರುತ್ತದೆ. ಶ್ರೀಗಳ ನಿಧನ ಅತೀವ ನೋವು ತಂದಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಕೋರುತ್ತಾ, ಶ್ರದ್ದಾಂಜಲಿ ಸಲ್ಲಿಸುತ್ತೇನೆ ಎಂದಿದ್ದಾರೆ..

Tags: Bengalorebhattakara shreebjpkarnatakachareukeerthi bhattacharya srigalucmbommaihassamHDKHdKumaraswamysantapashravanabelagolasiddaramaiahaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಕಲೆ-ಸಾಹಿತ್ಯ-ಮನುಜ ಸಂವೇದನೆ ಮತ್ತು ಪ್ರಜಾಪ್ರಭುತ್ವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪೋಷಿಸಿ ಬೆಳೆಸಬೇಕಾದ ಜವಾಬ್ದಾರಿ ಸಾಹಿತ್ಯಕ-ಸಾಂಸ್ಕೃತಿಕ ಸಂಸ್ಥೆಗಳ ಮೇಲಿದೆ

Next Post

ಬರ್ತಿದೆ ಲವ್‌ ಮಾಕ್ಟೇಲ್‌ 3..! ಗುಡ್‌ನ್ಯೂಸ್‌ ಕೊಟ್ಟ ಆದಿ-ನಿಧಿಮಾ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಬರ್ತಿದೆ ಲವ್‌ ಮಾಕ್ಟೇಲ್‌ 3..! ಗುಡ್‌ನ್ಯೂಸ್‌ ಕೊಟ್ಟ ಆದಿ-ನಿಧಿಮಾ

ಬರ್ತಿದೆ ಲವ್‌ ಮಾಕ್ಟೇಲ್‌ 3..! ಗುಡ್‌ನ್ಯೂಸ್‌ ಕೊಟ್ಟ ಆದಿ-ನಿಧಿಮಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada