• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಸಿಎಂ ಬಿಟ್ಟ ಅಸ್ತ್ರಕ್ಕೆ ಸಿಎಂ ಬ್ರಹ್ಮಾಸ್ತ್ರ ಬಳಕೆ.. ಕಾಂಗ್ರೆಸ್​ ಸುಟ್ಟು ಬಿಡುವ ಭೀತಿ..

ಪ್ರತಿಧ್ವನಿ by ಪ್ರತಿಧ್ವನಿ
September 21, 2023
in Top Story, ಕರ್ನಾಟಕ, ರಾಜಕೀಯ
0
ಡಿಸಿಎಂ ಬಿಟ್ಟ ಅಸ್ತ್ರಕ್ಕೆ ಸಿಎಂ ಬ್ರಹ್ಮಾಸ್ತ್ರ ಬಳಕೆ.. ಕಾಂಗ್ರೆಸ್​ ಸುಟ್ಟು ಬಿಡುವ ಭೀತಿ..
Share on WhatsAppShare on FacebookShare on Telegram

ಕಾಂಗ್ರೆಸ್​ ಸರ್ಕಾರ ಭರ್ಜರಿಯಾಗಿ ಜಯ ದಾಖಲಿಸಿಕೊಂಡು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್​ ಸರ್ಕಾರವನ್ನು ಆಪರೇಷನ್​​ ಕಮಲ ಸೇರಿದಂತೆ ಅನ್ಯ ಮಾರ್ಗಗಳಿಂದ ಸೋಲಿಸುವುದು ಕಷ್ಟ ಸಾಧ್ಯ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಕಾಂಗ್ರೆಸ್​ ದಿನದಿಂದ ದಿನಕ್ಕೆ ತನ್ನದೇ ತುಂಬಿದ ಮಡಿಕೆಗೆ ಕಲ್ಲು ಒಡೆಯುವ ಕೆಲಸ ಶುರು ಮಾಡಿದೆ. ಒಂದು ಕಡೆ ಡಿಸಿಎಂ ಡಿ.ಕೆ ಶಿವಕುಮಾರ್​ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಮತ್ತೊಂದು ಕಡೆಯಿಂದ ಸಿದ್ದರಾಮಯ್ಯ ಅವರ ಯಶಸ್ಸನ್ನು ತಡೆಯುವ ಪ್ರಯತ್ನಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ಇದೀಗ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಭೀರುವ ಆತಂಕವೂ ಮನೆ ಮಾಡಿದೆ.

ADVERTISEMENT

ಬಿ.ಕೆ ಹರಿಪ್ರಸಾದ್​ ಮುಂದೆ ಬಿಟ್ಟು ಆಟವಾಡಿದ್ದ ಡಿಸಿಎಂ..?

ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬಿ.ಕೆ ಹರಿಪ್ರಸಾದ್​ ಸೇರಿದಂತೆ ಕೆಲವೊಂದಿಷ್ಟು ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ಸಮರ ನಡೆಸುವ ಕೆಲಸ ಮಾಡುತ್ತಿದ್ದಾರೆ. ಇದನ್ನೇ ಬಾಣವಾಗಿಸಿಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್​ ಸಿಎಂ ಸಿದ್ದರಾಮಯ್ಯ ಅವರ ಯಶಸ್ಸನ್ನು ಹಣಿಯಲು ಹರಿಪ್ರಸಾದ್​ಗೆ ಪ್ರೇರೇಪಿಸಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿಸಿದ್ದರು. ಸಿದ್ದರಾಮಯ್ಯ ಹೆಸರು ಹೇಳದೆ ಸಮಾಜವಾದಿ ಅಲ್ಲ ಮಜವಾದಿ, ಡಿ ದೇವರಾಜ ಅರಸು ಅವರ ಕಾರಿನಲ್ಲಿ ಓಡಾಡಿದ ಮಾತ್ರಕ್ಕೆ ಅರಸು ಆಗಲ್ಲ, ದುಬಾರಿ ಹ್ಯೋಬ್ಲೋಟ್​ ವಾಚ್​ ಕಟ್ಟಿಕೊಂಡು ಓಡಾಡುವ ನಾಯಕ ಸಮಾಜವಾದಿ ಆಗಲು ಹೇಗೆ ಸಾಧ್ಯ.? ಪಂಚೆ ಒಳಗೆ ಖಾಕಿ ಚೆಡ್ಡಿ ಹಾಕಿದ್ದಾರೆ ಎಂದೆಲ್ಲಾ ವಾಗ್ಬಾಣ ಹರಿಸಿದ್ದರು. ಇದೀಗ ಡಿ.ಕೆ ಶಿವಕುಮಾರ್​ ಪ್ರಯೋಗಿಸಿದ ಅಸ್ತ್ರವೇ ಮುಳುವಾಗುವ ಎಲ್ಲಾ ಲಕ್ಷಣ ಕಾಣಿಸಿದೆ.

ಮೂವರು ಡಿಸಿಎಂ ಹುದ್ದೆ ಸೃಷ್ಟಿಸಲು ಬೇಡಿಕೆಯಿಟ್ಟ ರಾಜಣ್ಣ..!

ಆರಂಭದಿಂದಲೂ ಸಿದ್ದರಾಮಯ್ಯ ಬಣದಲ್ಲಿ ಗುರ್ತಿಸಿಕೊಂಡಿರುವ ಮಧುಗಿರಿಯ ಕೆ.ಎನ್​ ರಾಜಣ್ಣ, ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್​ ಮಾಡುತ್ತಿದ್ದಾರೆ. ಇದೀಗ ಬಿ.ಕೆ ಹರಿಪ್ರಸಾದ್​ ಅಸ್ತ್ರಕ್ಕೆ ಸಿದ್ದರಾಮಯ್ಯ ಪ್ರತ್ಯಾಸ್ತ್ರ ಪ್ರಯೋಗ ಮಾಡಿದ್ದು, ಮೂವರು ಡಿಸಿಎಂ ಹುದ್ದೆ ಕೇಳುವ ಮೂಲಕ ಡಿಸಿಎಂ ಆಗಿರುವ ಡಿ.ಕೆ ಶಿವಕುಮಾರ್​ ಪ್ರಾಮುಖ್ಯತೆಯನ್ನೇ ಮುಗಿಸಲು ಯೋಜನೆ ರೂಪಿಸಲಾಗಿದೆ. ಈ ಬೇಡಿಕೆ ಕೇವಲ ಬಾಯಿ ಮಾತಿಗೆ ಸೀಮಿತ ಆಗದೆ, ಹೈಕಮಾಂಡ್​ ಅಂಗಳಕ್ಕೂ ಪ್ರವೇಶ ಪಡೆದಿದೆ. ಇದೀಗ ಡಿ.ಕೆ ಶಿವಕುಮಾರ್​ ಹಾಗು ಸಿದ್ದರಾಮಯ್ಯ ನಡುವಿನ ಪರೋಕ್ಷ ಯುದ್ಧ ಹೈಕಮಾಂಡ್​ಗೆ ಸಂಕಷ್ಟ ತಂದಿಟ್ಟಿದೆ. ಯಾವುದೇ ನಿರ್ಧಾರ ಮಾಡಿದರೂ ಪರಿಣಾಮ ಮಾತ್ರ ಕೆಟ್ಟದಾಗುವ ಸಾಧ್ಯತೆಗಳಿವೆ.

ರಾಜಣ್ಣ ಕೇಳಿರುವ ಬೇಡಿಕೆ ಸರಿಯಿದೆ – ಆದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ..

ಡಿಸಿಎಂ ಡಿ.ಕೆ ಶಿವಕುಮಾರ್​ ಸರ್ಕಾರ ರಚನೆ ವೇಳೆಯಲ್ಲಿ ಒಂದೇ ಡಿಸಿಎಂ ಹುದ್ದೆ ಇರಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿತ್ತು. ಇದೀಗ ಮತ್ತೆ ಮೂವರು ಡಿಸಿಎಂ ಹುದ್ದೆಗಳನ್ನು ಸೃಷ್ಟಿ ಮಾಡಿದರೆ ಡಿ.ಕೆ ಶಿವಕುಮಾರ್​ ಪ್ರಾಮುಖ್ಯತೆ ಕಳೆದುಕೊಳ್ಳಲಿದ್ದಾರೆ. ಆಗ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್​ ಈಗಿನ ಉತ್ಸಾಹದಲ್ಲಿ ಪಕ್ಷವನ್ನು ಸಂಘಟಿಸದೆ ಹೋದರೆ ಚುನಾವಣೆಯಲ್ಲಿ ಸೋಲುವುದು ಶತಸಿದ್ಧ. ಇನ್ನೊಂದು ಕಡೆ ಸಮುದಾಯವಾರು ಡಿಸಿಎಂ ಹುದ್ದೆಯನ್ನು ಕೇಳಲಾಗಿದೆ. ಎಸ್​ಸಿ, ಎಸ್​ಟಿ ಸಮುದಾಯ ಸೇರಿದಂತೆ ಹಿಂದುಳಿದ ಸಮುದಾಯಗಳ ನಾಯಕರನ್ನು ಡಿಸಿಎಂ ಮಾಡಬೇಕು, ಆ ಮೂಲಕ ಆ ಸಮುದಾಯಗಳ ಮತಗಳನ್ನು ಸೆಳೆಯಬೇಕು ಎನ್ನುವುದು ಬೇಡಿಕೆ. ಒಂದು ವೇಳೆ ಕಾಂಗ್ರೆಸ್​ ಪಕ್ಷದ ಹೈಕಮಾಂಡ್​ ಒಪ್ಪಿಗೆ ನೀಡದಿದ್ದರೆ ಆ ಪಕ್ಷಗಳ ಮತಗಳ ಪ್ರಮಾಣ ಕಾಂಗ್ರೆಸ್​ಗೆ ಕಡಿಮೆ ಆಗುವ ಸಂಭವವೂ ಇದೆ. ಒಟ್ಟಾರೆ ಡಿ.ಕೆ ಶಿವಕುಮಾರ್​ ಅಸ್ತ್ರಕ್ಕೆ ಬ್ರಹ್ಮಾಸ್ತ್ರ ಬಿಟ್ಟಿರುವ ಸಿದ್ದರಾಮಯ್ಯ, ಮುಟ್ಟಿದರೂ ಕಷ್ಟ.. ಮುಟ್ಟದಿದ್ದರೂ ಕಷ್ಟ ಎನ್ನುವ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ.

ಕೃಷ್ಣಮಣಿ

Tags: BK HariprasadCM SiddaramaiahDCM DK ShivakumarPolitics
Previous Post

ಮುಖ್ಯಮಂತ್ರಿ ಆಕಾಂಕ್ಷಿ ನಾಯಕರಿಗೆ ಇಷ್ಟೊಂದು ಕಠಿಣ ಭಾಷೆ ಅವಶ್ಯವೇ..?

Next Post

ಕಾರ್ಯಾಚರಣೆಯ ಕಾರಣಗಳಿಂದ ಕೆನಡಾದಲ್ಲಿನ ವೀಸಾ ಸೇವೆಗಳು ಸ್ಥಗಿತ

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಕಾರ್ಯಾಚರಣೆಯ ಕಾರಣಗಳಿಂದ ಕೆನಡಾದಲ್ಲಿನ ವೀಸಾ ಸೇವೆಗಳು ಸ್ಥಗಿತ

ಕಾರ್ಯಾಚರಣೆಯ ಕಾರಣಗಳಿಂದ ಕೆನಡಾದಲ್ಲಿನ ವೀಸಾ ಸೇವೆಗಳು ಸ್ಥಗಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada