• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಎಸ್‌ವೈ ಬೆನ್ನಿಗೆ ನಿಂತ ಲಿಂಗಾಯತ ಸಮುದಾಯ; ಬಿಜೆಪಿ ಹೈಕಮಾಂಡಿನಿಂದ ಎಚ್ಚರಿಕೆ ಹೆಜ್ಜೆ?

Shivakumar A by Shivakumar A
July 20, 2021
in ಕರ್ನಾಟಕ, ರಾಜಕೀಯ
0
ಬಿಎಸ್‌ವೈ ಬೆನ್ನಿಗೆ ನಿಂತ ಲಿಂಗಾಯತ ಸಮುದಾಯ; ಬಿಜೆಪಿ ಹೈಕಮಾಂಡಿನಿಂದ ಎಚ್ಚರಿಕೆ ಹೆಜ್ಜೆ?
Share on WhatsAppShare on FacebookShare on Telegram

ಸಿಎಂ ಬಿ.ಎಸ್ ಯಡಿಯೂರಪ್ಪ ಬದಲಾವಣೆ ವಿಚಾರವೀಗ ರೋಚಕ ತಿರುವು ಪಡೆದುಕೊಂಡಿದೆ. ಲಿಂಗಾಯತ ಸಮುದಾಯದ ಪ್ರಬಲ ನಾಯಕರು ಮತ್ತು ಕಾಂಗ್ರೆಸ್‌ನ ಹಿರಿಯ ರಾಜಕಾರಣಿಗಳಾದ ಶಾಮನೂರು ಶಿವಶಂಕರಪ್ಪ, ಎಂ.ಬಿ ಪಾಟೀಲ್ ಯಡಿಯೂರಪ್ಪ ಬೆನ್ನಿಗೆ ನಿಂತ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಶುರುವಾಗಿದೆ.

ADVERTISEMENT

ವೀರಶೈವ ಲಿಂಗಾಯತ ಸಮುದಾಯ ಬಿ.ಎಸ್ ಯಡಿಯೂರಪ್ಪರನ್ನು ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಕೆಳಗಿಳಿಸಬಾರದು. ಅದು ನಮಗೆ ಮಾಡುವ ಅವಮಾನ ಎಂಬ ಸಂದೇಶವನ್ನು ಬಿಜೆಪಿ ಹೈಕಮಾಂಡ್ ಮತ್ತು RSS ನಾಯಕರಿಗೆ ಸಾರಲು ಹೊರಟಿದೆ ಎನ್ನಲಾಗಿದೆ.

ಇತ್ತೀಚೆಗೆ ಪುತ್ರ ವಿಜಯೇಂದ್ರ ಜೊತೆಗೆ ದೆಹಲಿಗೆ ಭೇಟಿ ನೀಡಿದ್ದ ಬಿ.ಎಸ್ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ಏನು ಎದುರಾಡದೆ ವಾಪಸ್ಸಾಗಿದ್ದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ನೇತೃತ್ವದ ಆರ್‌ಎಸ್ಎಸ್ ಬೆಂಬಲಿತ ಶಾಸಕರ ತಂಡ ತನ್ನನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಬೇಕಾದ ಎಲ್ಲಾ ತಂತ್ರಗಳು ರೂಪಿಸಿರುವುದು ಖಾತ್ರಿಯಾಗಿತ್ತು. ಹೀಗಾಗಿ ದೆಹಲಿಯಿಂದ ಸೈಲೆಂಟ್ ಆಗಿ ವಾಪಸ್ಸಾದ ಯಡಿಯೂರಪ್ಪ ತನ್ನ ಆಟ ಶುರು ಮಾಡಿದ್ದಾರೆ. ಇಡೀ ಲಿಂಗಾಯತ ಸಮುದಾಯವನ್ನು ಬಿಜೆಪಿ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ.

Also Read:ಯಡಿಯೂರಪ್ಪರನ್ನು ಪದಚ್ಯುತಗೊಳಿಸಿದರೆ ಲಿಂಗಾಯತರ ಅಸಮಾಧಾನಕ್ಕೆ ಕಾರಣವಾಗುತ್ತದೆ- ಎಂಬಿ ಪಾಟೀಲ್

ತನ್ನನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಲಿಂಗಾಯತ ಸಮುದಾಯದ ಯಾರಾದರೂ ಒಬ್ಬ ಪ್ರಬಲ ನಾಯಕರನ್ನು ಮುಖ್ಯಮಂತ್ರಿ ಮಾಡಲೇಬೇಕು ಎಂದು ಯಡಿಯೂರಪ್ಪ ಬೇಡಿಕೆ ಇಟ್ಟಿದ್ದಾರೆ. ಯಡಿಯೂರಪ್ಪರ ಈ ಬೇಡಿಕೆ ಹಿಂದೆ ಸಮುದಾಯದ ಮಠಾಧೀಶರು, ವಿವಿಧ ಪಕ್ಷಗಳಲ್ಲಿ ಇರುವ ಪ್ರಮುಖ ಲಿಂಗಾಯತ ನಾಯಕರು, ಉದ್ಯಮಿಗಳು ಇದ್ದಾರೆ ಎನ್ನಲಾಗಿದೆ.

76ನೇ ವಯಸ್ಸಿನಲ್ಲೂ ಯಡಿಯೂರಪ್ಪ 2019 ರಲ್ಲಿ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವರು. ತನ್ನ ಇಡೀ ಜೀವನವನ್ನು ಬಿಜೆಪಿಗಾಗಿ ಸವೆಸಿದರು. ಹೀಗಾಗಿ ಇವರನ್ನು ಈ ಅವಧಿ ಮುಗಿಯುವತ ನಕ ಸಿಎಂ ಸ್ಥಾನದಲ್ಲೇ ಇರಲು ಅವಕಾಶ ಮಾಡಿಕೊಡಬೇಕು. ಇಲ್ಲದೇ ಹೋದರೆ ಯಡಿಯೂರಪ್ಪನ ಸ್ಥಾನಮಾನಕ್ಕೆ ಸರಿಹೊಂದುವ ಯಾವುದಾದರೂ ಲಿಂಗಾಯತ ಸಮುದಾಯದ ನಾಯಕರನ್ನೇ ತಂದು ಕೂರಿಸಬೇಕು ಎಂಬ ಬೇಡಿಕೆ ಈಗ ಬಿಜೆಪಿ ಹೈಕಮಾಂಡಿಗೆ ತಲೆನೋವಾಗಿ ಪರಿಣಮಿಸಿದೆ.

ತನಗಲ್ಲದೇ ಹೋದರೆ ಸಮುದಾಯದ ನಾಯಕರಾದ ಮುರುಗೇಶ್ ನಿರಾಣಿ, ಬಿ.ವೈ ವಿಜಯೇಂದ್ರ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಸವನಗೌಡ ಯತ್ನಾಳ್, ವಿ. ಸೋಮಣ್ಣ, ಎಂ.ಪಿ ರೇಣುಕಾಚಾರ್ಯ ಇವರಲ್ಲಿ ಯಾರಿಗಾದ್ರೂ ಸಿಎಂ ಸ್ಥಾನ ನೀಡಿ ಎಂದು ಯಡಿಯೂರಪ್ಪ ಹೈಕಮಾಂಡಿಗೆ ಸಂದೇಶ ರವಾನಿಸಿದ್ದಾರೆ. ಹೀಗಾಗಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ವೀರಶೈವ- ಲಿಂಗಾಯತ ಸಮುದಾಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಸಮಾಜದ ಮಠಾಧಿಪತಿಗಳು, ಮುಖಂಡರು ಬಿಎಸ್‌ವೈ ನಾಯಕತ್ವ ಬೆಂಬಲಿಸಿ ಹೇಳಿಕೆ ನೀಡುತ್ತಿದ್ದಾರೆ. ಜತೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಕೂಡ ಬೆಂಬಲ ಘೋಷಿಸಿದೆ. ಮಾಜಿ ಸಚಿವ ಎಂ.ಬಿ ಪಾಟೀಲ್‌, ಬಿಎಸ್‌ವೈ ಪರ ವಹಿಸಿ ಟ್ವೀಟ್‌ ಮಾಡಿದ್ದರು. ಇದರ ಮಧ್ಯೆ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮಾತುಕತೆ ನಡೆಸಿದರು.

Also Read: ಮುಖ್ಯಮಂತ್ರಿ ಬದಲಾವಣೆಗೆ ಕೈ ಹಾಕಿದರೆ ಬಿಜೆಪಿ ಇತಿಹಾಸ ಮುಗಿಯತ್ತೆ: ಶಾಮನೂರು ಶಿವಶಂಕರಪ್ಪ ಎಚ್ಚರಿಕೆ

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಯಡಿಯೂರಪ್ಪಗೆ ಮಹಾಸಭಾ ಬೆಂಬಲವಿದೆ. ಅವರನ್ನು ಬದಲಿಸಿದರೆ ಬಿಜೆಪಿ ನಿರ್ನಾಮವಾಗಲಿದೆ ಎಂಬ ಎಚ್ಚರಿಕೆಯನ್ನೂ ನೀಡಿದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌, ಜೆ.ಎಚ್‌ ಪಟೇಲ್‌, ಬೊಮ್ಮಾಯಿ ಅವರನ್ನು ಅಧಿಕಾರದಿಂದ ಇಳಿಸಿದಾಗ ಆದ ಘಟನೆ ನೆನಪಿಸಿ ಕೊಳ್ಳಬೇಕು. ಹಾಗಾಗಿ ಅಂಥದಕ್ಕೆ ಕೈಹಾಕಿದರೆ ನಿರ್ನಾಮವಾಗುತ್ತಾರೆ. ಯಡಿಯೂರಪ್ಪನವರೇ ಮುಂದುವರಿಯಬೇಕು ಎಂಬುದು ನಮ್ಮ ಅಪೇಕ್ಷೆ ಎಂದು ಎಚ್ಚರಿಕೆ ನೀಡಿದ್ದರು.

ಇನ್ನೊಂದೆಡೆ ಬಿಎಸ್‌ವೈ ನಾಯಕತ್ವ ಬದಲಾವಣೆ ಮಾಡಬೇಡಿ, ಬದಲಾವಣೆ ಮಾಡಿದರೆ ಬಿಜೆಪಿಗೆ ಕೆಟ್ಟ ದಿನ ಕಾದಿದೆ. ಬಿಎಸ್‌ವೈ ಸಮರ್ಥ ನಾಯಕ. ಯಡಿಯೂರಪ್ಪ ಬದಲಾವಣೆ ಹಿಂದೆ ದುರುದ್ದೇಶ ಇದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ಇದೊಂದು ಎಚ್ಚರಿಕೆ, ಯಾವುದೇ ಕಾರಣಕ್ಕೂ ಬಿಎಸ್‌ವೈ ಬದಲಾವಣೆ ಬೇಡ ಎಂದಿದ್ದಾರೆ ಸಮುದಾಯದ ಮಠಾಧೀಶರು.

ಹೀಗಿರುವಾಗ ಬಿ.ಎಲ್ ಸಂತೋಷ್ ಮತ್ತು ತಂಡ ಬ್ರಾಹ್ಮಣರಿಗೆ ಸಿಎಂ ಪಟ್ಟ ನೀಡಬೇಕು ಎಂದು ಪಟ್ಟು ಹಿಡಿದಿದೆ. ಹೀಗಾಗಿ ಶಾಸಕ ಸುರೇಶ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಹ್ಲಾದ್ ಜೋಶಿಯವರು ಸಿಎಂ ರೇಸಿನಲ್ಲಿದ್ದಾರೆ. ಇದೇ ವೇಳೆ ಒಕ್ಕಲಿಗ ಸಮುದಾಯದ ಡಿಸಿಎಂ ಅಶ್ವಥ್ ನಾರಾಯಣ್, ಆರ್. ಅಶೋಕ್, ಡಿ.ವಿ ಸದಾನಂದ ಗೌಡ ತಮ್ಮ ಜಾತಿಯಡಿ ಸಿಎಂ ಗಾದಿ ಕೇಳುತ್ತಿದ್ದಾರೆ. ಇದು ಬಿಜೆಪಿಯೊಳಗಡೆ ಒಂದು ಸಂಚಲನವನ್ನೇ ಸೃಷ್ಟಿ ಮಾಡಿದೆ.

ಸಿಎಂ ವಿಚಾರ ಹೀಗೆ ಚರ್ಚೆಯಾಗುತ್ತಿದ್ದರೆ ಸಿಪಿ ಯೋಗೇಶ್ವರ್ ಹೊರತುಪಡಿಸಿ ಉಳಿದ ಎಲ್ಲಾ ವಲಸಿಗ ಸಚಿವರು ಯಡಿಯೂರಪ್ಪ ಪರ ನಿಂತಿದ್ದಾರೆ. ಯಾವುದೇ ಸಂದರ್ಭ ಬಂದರೂ ನಾವೇ ಬಿಎಸ್‌ವೈ ಪರ ಎಂದು ಘೋಷಿಸಿದ್ದಾರೆ. ಒಂದು ವೇಳೆ ಯಡಿಯೂರಪ್ಪ ಬದಲಾದರೆ ನಮ್ಮ ರಾಜಕೀಯ ಭವಿಷ್ಯ ಅತಂತ್ರ ಸ್ಥಿತಿಗೆ ಬರುತ್ತದೆ ಎಂಬ ಅರಿವು ಈಗಾಗಲೇ ಇವರಿಗೆ ಬಂದಾಗಿದೆ.

ಹೈಕಮಾಂಡ್ ಅಂದುಕೊಂಡಂತೆ ನಡೆದರೆ ಸಿಎಂ ಯಡಿಯೂರಪ್ಪ ಆಂಧ್ರದ ರಾಜ್ಯಪಾಲರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದರೂ, ಯಡಿಯೂರಪ್ಪನವರೇ ಸಿಎಂ ಆಗಿ ಇನ್ನಷ್ಟು ಮುಂದುವರಿಯುವ ಸಾಧ್ಯತೆಯನ್ನು ಸಂಪೂರ್ಣವಾಗಿ ಅಲ್ಲಗೆಳೆಯಲಾಗುತ್ತಿಲ್ಲ. ಯಾಕೆಂದರೆ, ಯಡಿಯೂರಪ್ಪ ಅವರ ಬದಲಾವಣೆ ಚರ್ಚೆಗೆ ದೀರ್ಘ ಹಿನ್ನೆಲೆ ಇರುವುದರಿಂದ ಹಾಗೂ, ಇನ್ನೇನು ಬದಲಾವಣೆ ಆಗಿಯೇ ಬಿಡುತ್ತಾರೆಂಬಂತಹ ಸನ್ನಿವೇಶ ಎದುರಾದಗಲೂ ಯಡಿಯೂರಪ್ಪ ಯಾವುದೋ ಒಂದು ರೀತಿ ತಮ್ಮ ಖುರ್ಚಿ ಉಳಿಸಿಕೊಂಡು ಬಂದಿದ್ದಾರೆ.

ಅದಾಗ್ಯೂ,  ಒಂದು ವೇಳೆ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿದರೆ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್ ಜೋಶಿ ಅಥವಾ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯಮಂತ್ರಿಯಾಗೋದು ಬಹುತೇಕ ಪಕ್ಕಾ.  ಇದರಿಂದ ಬಿಜೆಪಿ ಒಡೆದು ಹೋಗಿ ಮಧ್ಯಂತರ ಚುನಾವಣೆಯೂ ನಡೆಯಬಹುದು. ಇದು ರಾಜ್ಯಪಾಲ ಆಳ್ವಿಕೆಯ ಸಾಧ್ಯತೆಗೂ ಕಾರಣವಾಗಬುದು.

Previous Post

80% ಹೊಸ ಪ್ರಕರಣಗಳಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿ ಪತ್ತೆ – ಡಾ. NK ಅರೋರಾ

Next Post

ಪೆಗಾಸಸ್ ಸ್ಪೈವೇರ್ ; ʼನನ್ನ ಮೊಬೈಲ್ ಟ್ಯಾಪ್ ಮಾಡಿದ್ದರೂ ನಾನು ತಲೆಕೆಡಿಸಲ್ಲʼ – ಹೆಚ್ ಡಿ ಕುಮಾರಸ್ವಾಮಿ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಪೆಗಾಸಸ್ ಸ್ಪೈವೇರ್ ; ʼನನ್ನ ಮೊಬೈಲ್ ಟ್ಯಾಪ್ ಮಾಡಿದ್ದರೂ ನಾನು ತಲೆಕೆಡಿಸಲ್ಲʼ – ಹೆಚ್ ಡಿ ಕುಮಾರಸ್ವಾಮಿ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada