• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೀಜ, ಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
June 2, 2022
in ಕರ್ನಾಟಕ
0
ಬೀಜ, ಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

ಅವರು ಇಂದು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್ ಡಿಎಪಿ ಲಭ್ಯವಿದ್ದು, ಒಟ್ಟಾರೆ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ರಾಜ್ಯದ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ. ಆದರೆ, ವ್ಯವಸ್ಥಿತವಾಗಿ ಅಗತ್ಯ ಆಧರಿಸಿ, ರಸಗೊಬ್ಬರ ಸಕಾಲದಲ್ಲಿ ಪೂರೈಸಲು ಹಿರಿಯ ಅಧಿಕಾರಿಗಳೇ ಮೇಲ್ವಿಚಾರಣೆ ನಡೆಸಿ, ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.

ಅಂತೆಯೇ ಬಿತ್ತನೆ ಬೀಜ ರಾಜ್ಯದಲ್ಲಿ 7.81 ಲಕ್ಷ ಕ್ವಿಂಟಾಲ್‍ ನಷ್ಟು ಲಭ್ಯವಿದ್ದು, ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಲಭ್ಯವಿದೆ. ಆದರೆ ನಕಲಿ ಬೀಜಗಳ ಹಾವಳಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಈ ಕುರಿತು ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು. ನಕಲಿ ಬೀಜ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 114.54 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದರೊಂದಿಗೆ ಕಂದಾಯ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳಿಂದ, ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯ ಮಾಹಿತಿ ಪಡೆದು, ಈ ವರ್ಷ ಕನಿಷ್ಠ ತಲಾ ಒಂದು ಲಕ್ಷ ಹೆಕ್ಟೇರ್‍ ನಷ್ಟು ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯನ್ನು ಕೃಷಿಯೋಗ್ಯವಾಗಿ ಪರಿವರ್ತಿಸುವಂತೆ ಸೂಚಿಸಿದ್ದಾರೆ.

ಸೆಕೆಂಡರಿ ಕೃಷಿ ನಿರ್ದೇಶನಾಲಯವು ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಎಂಎಸ್‍ಎಂಇಗಳು, ಅಗ್ರಿಗೇಟರುಗಳು, ಸ್ವಸಹಾಯ ಸಂಘಗಳು, ಆಂಕರ್‍ ಬ್ಯಾಂಕಿಂಗ್ ಜೊತೆಗೆ ನಿಕಟ ಸಂಪರ್ಕ ಬೆಳೆಸಿ ಕಾರ್ಯ ನಿರ್ವಹಿಸಬೇಕು. ರೈತರಿಂದ ಕೃಷಿ ಉತ್ಪನ್ನ ಖರೀದಿಸುವಂತೆ ಹಲವು ಅಗ್ರಿಗೇಟರುಗಳಿಗೆ ವಿವಿಧ ಸಂದರ್ಭಗಳಲ್ಲಿ ಸಲಹೆ ನೀಡಿದ್ದೇನೆ. ಈ ಕುರಿತು ಸಮನ್ವಯ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬೆಳೆಗಳ ಉತ್ಪಾದಕತೆಯನ್ನು ಸುಸ್ಥಿರ ಅಭಿವೃದ್ಧಿ ಗುರಿಯ ಮಟ್ಟಕ್ಕೆ ಹೆಚ್ಚಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದರು. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಹಂಚಿಕೆ ಮಾಡುವಾಗ ರೈತ ಉತ್ಪಾದಕ ಸಂಘಗಳಿಗೆ ಆದ್ಯತೆ ನೀಡಲು ನಿರ್ದೇಶನ ನೀಡಿದ್ದಾರೆ.

ಕೃಷಿ ಸಿಂಚಾಯಿ ಯೋಜನೆಯಡಿ 57 ತಾಲ್ಲೂಕುಗಳ 2.75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ರಾಜ್ಯದ ಪಾಲಿನ ಅನುದಾನ ಮಂಜೂರು ಮಾಡಲಾಗಿದೆ. ಈ ಯೋಜನೆಯಡಿ ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಿ, ಜಲಾನಯನ ಅಭಿವೃದ್ಧಿ ಕೆಲಸಗಳಿಗೇ ಹೆಚ್ಚಿನ ಒತ್ತು ನೀಡಬೇಕು ಹಾಗೂ ಹಿಂದಿನ ಯೋಜನೆಗಳ ಪರಿಣಾಮದ ಅಧ್ಯಯನ ವರದಿ ಸಲ್ಲಿಸುವಂತೆ ಮುಖ್ಯಂತ್ರಿಗಳು ತಿಳಿಸಿದ್ದಾರೆ.

ಕೃಷಿ ಯಾಂತ್ರೀಕರಣ ಉತ್ತೇಜನಕ್ಕಾಗಿ ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಯನ್ನು ಈ ಮಾಸಾಂತ್ಯದೊಳಗೆ ಜಾರಿಗೊಳಿಸಲು ಸೂಚಿಸಿದ್ದಾರೆ.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾಧ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಫ್ರೆಂಚ್‌ ಓಪನ್:‌ ಬೋಪಣ್ಣ-ಮಿಡಲ್‌ ಕೂಪ್‌ ಜೋಡಿಗೆ ಸೆಮಿಫೈನಲ್‌ ನಲ್ಲಿ ಆಘಾತ

Next Post

ಕನ್ನಡ ಮಾಧ್ಯಮದಲ್ಲಿ ಯುಪಿಎಸ್ ಸಿ ಪರೀಕ್ಷೆ ನಡೆಸಲು ಪ್ರಧಾನಿಗೆ ಮನವಿ

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಕನ್ನಡ ಮಾಧ್ಯಮದಲ್ಲಿ ಯುಪಿಎಸ್ ಸಿ ಪರೀಕ್ಷೆ ನಡೆಸಲು ಪ್ರಧಾನಿಗೆ ಮನವಿ

ಕನ್ನಡ ಮಾಧ್ಯಮದಲ್ಲಿ ಯುಪಿಎಸ್ ಸಿ ಪರೀಕ್ಷೆ ನಡೆಸಲು ಪ್ರಧಾನಿಗೆ ಮನವಿ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada