ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡೋದಿಲ್ಲ ಅಂತಾ ಸಂಪುಟ ಸಭೆಯಲ್ಲಿ (cabinet meeting) ಸಿಎಂ ಸಿದ್ದರಾಮಯ್ಯ (cm siddaramaiah) ಕಡ್ಡಿ ಮುರಿದಂತೆ ಹೇಳಿದ್ದಾರೆ. ಸಚಿವರ ಹೇಳಿಕೆಗಳು, ರಹಸ್ಯ ಸಭೆಗಳ ಬೆನ್ನಲ್ಲೆ ಸಿಎಂ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಸೃಷ್ಟಿಯಾಗಿತ್ತು.
ಈ ರೀತಿಯ ವದಂತಿ ಹರಿದಾಡ್ತಿರುವ ಹಿನ್ನೆಲೆ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಈ ಬಗ್ಗೆ ಕೊಟ್ಟಿದ್ದಾರೆ. ಯಾವುದೇ ಸಂದರ್ಭದಲ್ಲೂ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಇಲ್ಲಸಲ್ಲದ ಸುದ್ದಿಗಳನ್ನ ಹಬ್ಬಿಸಲಾಗುತ್ತಿದೆ. ಆದರೆ, ನಾನು ರಾಜೀನಾಮೆ ನೀಡುವ ಯೋಚನೆ ಕೂಡ ಮಾಡಿಲ್ಲ ಎಂದು ಹೇಳಿದ್ದಾರೆ.
ಈ ಮೂಲಕ ವಿರೋಧ ಪಕ್ಷಗಳಿಗೆ ಮಾತ್ರವಲ್ಲದೆ, ಸ್ವಪಕ್ಷೀಯರಿಗೂ ಸಿದ್ದರಾಮಯ್ಯ ಪರೋಕ್ಷವಾಗಿ ಸಂದೇಶ ರವಾನೆ ಮಾಡಿದ್ದಾರೆ. ಕಾಂಗ್ರೆಸ್ ನ congress) ಒಳಗೆ ಈ ಬಗ್ಗೆ ಹೆಚ್ಚು ಬೆಳವಣಿಗೆಗಳು ಕಂಡುಬಂದ ಹಿನ್ನಲೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಸಿಎಂ ಇದನ್ನು ಸ್ಪಷ್ಟಪಡಿಸಿದ್ದಾರೆ