ಹಿರಿಯ ಸಾಹಿತಿ ದಿ. ಪೂರ್ಣಚಂದ್ರ ತೇಜಸ್ವಿಯವರ ಡೇರ್ ಡೆವಿಲ್ ಮುಸ್ತಾಫಾ ಕೃತಿ ಆಧಾರಿತ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ, ಡೇರ್ ಡೆವಿಲ್ ಮುಸ್ತಾಫಾ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿನಿಮಾ ನಿರ್ದೇಶಕ ಶಶಾಂಕ್ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದರು.

ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ತಂಡದ ಮನವಿಯನ್ನು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸಮ್ಮತಿ ಸೂಚಿಸಿದ್ದಾರೆ.
ಡೇರ್ ಡೆವಿಲ್ ಸಿನಿಮಾವನ್ನು ಚಿತ್ರ ವಿಮರ್ಷಕರು ಒಪ್ಪಿಕೊಂಡಿದ್ದರೂ ಸಹ ತೆರೆಯಲ್ಲಿ ಅಂತಹದೊಡ್ಡಮಟ್ಟದ ಸದ್ದು ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ಮತ್ತಷ್ಟು ಬೆಳೆಯಬೇಕು. ಈ ನಿಟ್ಟಿನಲ್ಲಿ ತೆರಿಗೆ ವಿನಾಯಿತಿ ಪಡೆದರೆ ಸಿನಿಮಾ ಟಿಕೆಟ್ ದರ ಕಡಿಮೆಯಾಗಿ ಜನರು ಚಿತ್ರರಂಗದತ್ತ ಮರಳುತ್ತಾರೆ. ಉತ್ತಮ ಸಂದೇಶ ಹೊಂದಿರುವ ಸಿನಿಮಾಗಳು ಬೆಳೆಯಲು ಸರ್ಕಾರ ನಮ್ಮ ಜೊತೆ ಕೈ ಜೋಡಿಸಬೇಕು ಅಂತಾ ಸಿಎಂ ಸಿದ್ದರಾಮಯ್ಯ ಬಳಿಯಲ್ಲಿ ಚಿತ್ರತಂಡ ಮನವಿ ಮಾಡಿತ್ತು .
+






