• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah Cabinet : ಸಚಿವ ಸಂಪುಟದಲ್ಲಿ ಪ್ರಾದೇಶಿಕ, ಸಾಮಾಜಿಕ ನ್ಯಾಯ ಎತ್ತಿ ಹಿಡಿದ CM ಸಿದ್ದರಾಮಯ್ಯ

Any Mind by Any Mind
May 27, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
CM Siddaramaiah Cabinet : ಸಚಿವ ಸಂಪುಟದಲ್ಲಿ ಪ್ರಾದೇಶಿಕ, ಸಾಮಾಜಿಕ ನ್ಯಾಯ ಎತ್ತಿ ಹಿಡಿದ CM ಸಿದ್ದರಾಮಯ್ಯ
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಳೆದು-ತೂಗಿ ಸಚಿವ ಸ್ಥಾನಗಳನ್ನ ಪ್ರದೇಶವಾರು ಮತ್ತು ಸಮುದಾಯದ ಆಧಾರದಲ್ಲಿ ಹಂಚಿಕೆ ಮಾಡಿದ್ದಾರೆ. ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಸಚಿವ ಸ್ಥಾನಗಳನ್ನ ಹಂಚಿಕೆ ಮಾಡಿದ್ದಾರೆ. ಉತ್ತರ ಕರ್ನಾಟಕ, ಹಳೇ ಮೈಸೂರು ಭಾಗ ಮತ್ತು ಬೆಂಗಳೂರು ಸೇರಿದಂತೆ ಪ್ರದೇಶವಾರು ಸಚಿವ ಸ್ಥಾನ ಹಂಚಿಕೆ ಮಾಡಿದ್ದಾರೆ.

ADVERTISEMENT

ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.

ಒಕ್ಕಲಿಗರಲ್ಲಿ ಗಂಗಟಕಾರ್ ಒಕ್ಕಲಿಗರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ ಅವರುಗಳು ಇದ್ದಾರೆ. ಪಿರಿಯಾಪಟ್ಟಣ ವೆಂಕಟೇಶ್ ಕುಂಚಟಿಗರು, ದಾಸ ಒಕ್ಕಲಿಗರಲ್ಲಿ ಕೃಷ್ಣ ಬೈರೇಗೌಡ ಸೇರಿ ನಾಲ್ಕು ಮಂದಿಗೆ ಪ್ರಾತಿನಿಧ್ಯ ನೀಡಿದ್ದಾರೆ.

ಇನ್ನು ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದೆ. ಕೆ.ಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಪ್ರಕಾಶ್ ರಾಥೋಡ್ ಕೂಡ ಬಂಜಾರ ಸಮುದಾಯದವರು.

ಲಿಂಗಾಯತ ಸಮುದಾಯಕ್ಕೆ ಒಟ್ಟು ಏಳು ಸಚಿವ ಸ್ಥಾನ ನೀಡಲಾಗಿದೆ. ಲಿಂಗಾಯತ ಸಮುದಾಯದ ಬಹುತೇಕ ಎಲ್ಲಾ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಬಣಜಿಗರಲ್ಲಿ ಈಶ್ವರ್ ಖಂಡ್ರೆ, ಪಂಚಮಸಾಲಿಗಳಲ್ಲಿ ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಕುರು ಒಕ್ಕಲಿಗರಲ್ಲಿ ಎಂ.ಬಿ.ಪಾಟೀಲ್, ಸಾದ ಲಿಂಗಾಯತರಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್, ಆದಿ ಬಣಜಿಗರಲ್ಲಿ ಶರಣ ಪ್ರಕಾಶ ಪಾಟೀಲ್ ರೆಡ್ಡಿಲಿಂಗಾಯತರಲ್ಲಿ ದರ್ಶನಾಪುರ ಮತ್ತು ವೈಷ್ಣವ ರೆಡ್ಡಿಯ ಪ್ರತಿನಿಧಿಯಾಗಿ ಹೆಚ್.ಕೆ.ಪಾಟೀಲ್ ಅವರಿಗೆ ಪ್ರಾತಿನಿಧ್ಯ ನೀಡಿದ್ದಾರೆ..

ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ , ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.

ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ಬಿಲ್ಲವ ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆತಿದೆ. ಮಲೆನಾಡು, ಕರಾವಳಿ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಿಕ್ಕಿರುವ ಪ್ರಾತಿನಿಧ್ಯ ಜಾತಿವಾರು ಲೆಕ್ಕಾಚಾರಗಳನ್ನೂ ಸರಿದೂಗಿಸಿದೆ.

ಹೀಗೆ ಜಾತಿ, ಉಪ ಜಾತಿಗಳನ್ನೂ ವೈಜ್ಞಾನಿಕವಾಗಿ ಪರಿಗಣಿಸಲಾಗಿದೆ. ಸಚಿವರ ಆಯ್ಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುವಾಗ ಪ್ರಾದೇಶಿಕ ನ್ಯಾಯ ಸಮತೋಲನ ತಪ್ಪದಂತೆಯೂ ಎಚ್ಚರ ವಹಿಸಿರುವುದು ಸಿಎಂ ಸಿದ್ದರಾಮಯ್ಯ ಅವರ ಆಯ್ಕೆ ಸಮತೂಕದಲ್ಲಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ.

ಹಿಂದಿನ ಬಿಜೆಪಿ ಅವಧಿಯಲ್ಲಿ ಬಿಜೆಪಿ ಜಾತಿವಾರು ಪ್ರಾತಿನಿಧ್ಯವನ್ನು ಕಡೆಗಣಿಸಿದ್ದ ಅಸಮಾಧಾನ ಹಲವು ಸಮುದಾಯಗಳಲ್ಲಿ ಹೆಪ್ಪುಗಟ್ಟಿತ್ತು. ಹಾಲಿ ಸಿದ್ದರಾಮಯ್ಯ ಅವರ ಆಯ್ಕೆ ಜಾತಿ ಲೆಕ್ಕಾಚಾರ ಮತ್ತು ಚುನಾಯಿತ ಶಾಸಕರ ಲೆಕ್ಕದಲ್ಲೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಂಡಿದೆ.

Tags: BJPbsbommaibyvijayendracabinet expansioncmsiddaramiahCongress PartydcmDKShivakumarKPCC presidentModiPMModisiddu cabinetಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

New Parliament building : ಹೊಸ ಸಂಸತ್‌ ಭವನದ ವಿಡಿಯೋ ಶೇರ್‌ ಮಾಡಿದ ಪ್ರಧಾನಿ ಮೋದಿ..!

Next Post

ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!

ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada