
ರಾಜ್ಯದಲ್ಲಿ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟ ಹಿನ್ನಲೆಯಲ್ಲಿ ಪರೀಕ್ಷೆಯಲ್ಲಿ ಅನುತ್ತಿರ್ಣ ಆಗಿದ್ದಕ್ಕೆ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಕುಡಿನೀರುಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೃಪಾ ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಚಂದ್ರಶೇಖರಪ್ಪ, ವೀಣಾ ದಂಪತಿಯ ಒಬ್ಬಳೇ ಮಗಳು ಕೃಪಾ. ದಾವಣಗೆರೆಯ ಪುಷ್ಪಾ ಮಹಲಿಂಗಪ್ಪ ಕಾಲೇಜಲ್ಲಿ ಓದಿದ್ದ ಕೃಪಾ. ವಿಜ್ಞಾನ ವಿಭಾಗದಲ್ಲಿ ಎರಡು ವಿಷಗಳಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ. ಮಗಳ ಸಾವಿನಿಂದ ಮುಗಿಲು ಮುಟ್ಟಿದ ಪೋಷಕರ ಆಕ್ರಂದನ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹಾವೇರಿಯಲ್ಲಿ ಪರೀಕ್ಷೆಯಲ್ಲಿ ಪೈಲ್ ಆಗಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆ ಹೀರೆಕೆರೂರ ತಾಲೂಕಿನ ಚಿನ್ನಮುಳುಗುಂದ ಗ್ರಾಮದ ಕಾವ್ಯ ಬಸಪ್ಪ ಲಮಾಣಿ (18) ಆತ್ಮಹತ್ಯೆ ಒಳಗಾದ ವಿದ್ಯಾರ್ಥಿನಿ. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ ಕಾವ್ಯ. ಭೌತಶಾಸ್ತ್ರ, ರಸಾಯನಿಕ ಶಾಸ್ತ್ರ, ಜೀವಶಾಸ್ತ್ರ, ಗಣಿತದಲ್ಲಿ ಫೇಲ್ ಆಗಿದ್ದ ಕಾವ್ಯ. ಇದೇ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯ ಹಾಲ್ನಲ್ಲಿದ್ದ ಕಬ್ಬಿಣ ಹುಕ್ಕಿಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..

ಈ ಬಾರಿ ಫೇಲಾದವರು ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ.. ಅನುತ್ತೀರ್ಣ ಆದವರ ಜೊತೆಗೆ ಕಡಿಮೆ ಅಂಕ ಬಂದಿದೆ ಎನ್ನುವ ಆತಂಕದಲ್ಲಿ ಇರುವ ವಿದ್ಯಾರ್ಥಿಗಳಿಗೆ ಮುಂದೆ ಇನ್ನೂ ಎರಡು ಬಾರಿ ಪರೀಕ್ಷೆ ಬರೆಯಲು ಅವಕಾಶವಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಉತ್ತೇಜಿಸುವ ಉದ್ದೇಶದಿಂದಲೇ ಈ ವರುಷ ಪರೀಕ್ಷಾ ಶುಲ್ಕ ರದ್ದು ಮಾಡಲಾಗಿದೆ. ಪರೀಕ್ಷೆಯಲ್ಲಿ ಫೇಲಾದವರಿಗೆ ಮತ್ತೆರಡು ಪರೀಕ್ಷೆ ಬರೆಯಲು ಅವಕಾಶವಿದೆ. ಭಯಬೇಡ ಎಂದಿದ್ದಾರೆ ಶಿಕ್ಷಣ ಸಚಿವರು.

ದ್ವಿತೀಯ ಪಿಯುಸಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೊಸ್ಟ್ ಮಾಡಿರುವ ಅವರು, ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣು ಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದಿದ್ದಾರೆ. ಇನ್ನು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ ಅಂತ ಪೊಸ್ಟ್ ಮಾಡಿದ್ದಾರೆ.
