89 ವರ್ಷಗಳ ಬಳಿಕ ಮೈದುಂಬಿ ಹರಿಯುತ್ತಿರುವ ವಾಣಿ ವಿಲಾಸ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳವಾರ ಬಾಗೀನ ಅರ್ಪಿಸಿದ್ದಾರೆ.
ಪುಷ್ಪಾರ್ಚನೆ ಮಾಡಿ ಗಂಗೆಗೆ ಹಾಲು-ತುಪ್ಪದಸುರಿದು ಗಂಗಾ ಮಾತೆಗೆ ನಮನ ಸಲ್ಲಿಸಿದ್ದರು. ಮುಖ್ಯಮಂತ್ರಿ ಜೊತೆಗೆ ಜಿಲ್ಲೆಯ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಸಾಥ್ ನೀಡಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಮೈಸೂರು ಅರಸರ ಕಾಲದಲ್ಲಿ ನಿರ್ಮಾಣವಾದ ಜಲಾಶಯವೂ ಮಧ್ಯಕರ್ನಾಟಕ ಭಾಗದ ಜನರಿಗೆ ಉಪಯುಕ್ತವಾಗಿದೆ 89 ವರ್ಷಗಳ ಬಳಿಕ ಜಲಾಶಯ ಭರ್ತಿಯಾಗಿದ್ದು ಇದೇ ಮೊದಲ ಬಾರಿಗೆ ಬಗೀನ ಅರ್ಪಿಸುವ ನನಗೆ ಸಿಕ್ಕಿದ್ದು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ.
ಪಶ್ಚಿಮ ಘಟ್ಟಗಳಿಂದ ಹರಿದು ಬರುವ ನೀರನ್ನು ಸಂಗ್ರಹಿಸುವ ಸಲುವಾಗಿ ಮಹಾರಾಜರು ಆರ್ಥಿಕ ಸಂಕಷ್ಟದ ನಡುವೆಯೂ ಮನೆತನದ ಒಡವೆ ಮಾರಿ ಜಲಾಶಯವನ್ನ ಕಟ್ಟಿಸಿದ್ದಾರೆ. ಈ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುವ ವ್ಯವಸ್ಥೆ ಮಾಡುತ್ತೇವೆ ಬರದ ನಾಡು ಎಂಬ ಹಣೆಪಟ್ಟಿಯನ್ನು ಅಳಿಸಲಾಗುವುದು ಎಂದು ಹೇಳಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹೂಡಿಕೆ ಮಂಡಳಿ ಅನುಮೋದನೆ ನೀಡಿದ್ದು ಶೀಘ್ರವೇ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಲಿದ್ದು 16 ಸಾವಿರ ಕೋಟಿ ಅನುದಾನ ಸಿಗಲಿದೆ ಎಂದು ತಿಳಿಸಿದ್ದಾರೆ.