
ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ ಮಾಡಿದ್ದಾರೆ. ಬಾಗಿನಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯಗೆ ಗೌರವ ವಂದನೆ ಸಲ್ಲಿಸಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಜಮೀರ್ ಅಹಮ್ಮದ್, ಶಿವರಾಜ್ ತಂಗಡಗಿ, ಎನ್.ಎಸ್ ಭೋಸರಾಜ್, ಶರಣಪ್ರಕಾಶ್ ಪಾಟೀಲ್, ಬಳ್ಳಾರಿ ಸಂಸದ ತುಕಾರಾಂ, ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ಸೇರಿ ನಾಲ್ಕು ಜಿಲ್ಲೆಯ ಜನಪ್ರತಿನಿಧಿಗಳು ಬಾಗಿನ ಅರ್ಪಣೆಯಲ್ಲಿ ಭಾಗಿಯಾಗಿದ್ದರು.

ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ತುಂಗಾಭದ್ರಾ 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದಾಗ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಿದ ಸಿಬ್ಬಂದಿಗೆ ಸನ್ಮಾನ ಮಾಡಿದ್ದಾರೆ. ಕೊಪ್ಪಳದ ಮುನಿರಾಬಾದ್ನ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹ್ಮದ್ ಖಾನ್, ಶರಣಪ್ರಕಾಶ್ ಪಾಟೀಲ್, ಎನ್.ಎಸ್ ಭೋಸರಾಜ್, ಬಸವರಾಜ ರಾಯರೆಡ್ಡಿ, ಸಂಸದ ರಾಜಶೇಖರ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್ ಭಾಗಿಯಾಗಿದ್ದರು.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಕ್ರಸ್ಟ್ ಗೇಟ್ ಕಿತ್ತು ಹೋದಾಗ ನಮಗೆ ಆತಂಕ ಎದುರಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ನಮಗೆ ಧೈರ್ಯ ತುಂಬಿದ್ರು. ಆದರೆ ವಿರೋಧ ಪಕ್ಷದ ನಾಯಕರು ಇಲ್ಲಸಲ್ಲದ ಆರೋಪ ಮಾಡಿದ್ರು. ನಾವು ಒಂದೇ ವಾರದಲ್ಲಿ ಕ್ರಸ್ಟ್ ಗೇಟ್ ಆಳವಡಿಸಿ ವಿಪ್ಷಗಳಿಗೆ ಉತ್ತರ ಕೊಟ್ಟಿದ್ದೇವೆ. ಕನ್ನಯ್ಯ ನಾಯ್ಡು ನೇತೃತ್ವದ ತಂಡ ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ್ರು. ಗೇಟ್ ತಯಾರಿಸಿದ ಕಂಪನಿಗಳಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ ಅಂದ್ರು.

ತುಂಗಭದ್ರಾ ಡ್ಯಾಂ ಗೇಟ್ಗೆ ಆಯುಷ್ಯ ಬಹಳ ಕಡಿಮೆ ಇತ್ತು. 50 ವರ್ಷ ಮಾತ್ರ ಗೇಟ್ ಇರುತ್ತೆ ಅಂತಾ ತಜ್ಞರು ಈ ಮೊದಲೇ ಹೇಳಿದ್ದಾರೆ. ತಜ್ಞರ ಸಲಹೆಯಂತೆ ಎಲ್ಲಾ ಗೇಟ್ಗಳನ್ನು ಒಂದು ವರ್ಷದ ಒಳಗೆ ಬದಲಾವಣೆ ಮಾಡುತ್ತೇವೆ. ನೀರು ಕಡಿಮೆ ಆದ ಕೂಡಲೇ ಗೇಟ್ ಬದಲಾವಣೆ ಕಾರ್ಯ ನಡೆಯಲಿದೆ, ರೈತರನ್ನು ಉಳಿಸುವ ಕೆಲಸ ಮಾಡುತ್ತೇವೆ ಅಂತಾ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನವಲಿ ಬಳಿಕ ಸಮಾನಾಂತರ ಜಲಾಶಯಕ್ಕೆ 13 ಸಾವಿರ ಎಕರೆ ಭೂಮಿ ಬೇಕು. ಡಿಪಿಎಆರ್ ಮಾಡುತ್ತಿದ್ದೇವೆ. ಶೀಘ್ರವೇ ಎರಡು ರಾಜ್ಯಗಳ ಸಿಎಂ ಭೇಟಿ ಮಾಡಿ ಚರ್ಚೆ ನಡೆಸಲಾಗುತ್ತದೆ. 33 ಟಿಎಂಸಿ ನೀರು ಉಳಿಸಿಕೊಳ್ಳಲು ಕೆಲಸ ಮಾಡ್ತೀವಿ ಅಂತಾನು ತಿಳಿಸಿದ್ದಾರೆ.










