
ಬೆಳಗಾವಿ:ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಅವರ ಪತ್ನಿ ವಿರುದ್ಧ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು (Lokayukta) ಎಫ್ಐಆರ್ (FIR) ದಾಖಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಎ-1 ಆರೋಪಿಯಾಗಿದ್ದು, ಅವರ ಪತ್ನಿ ಪಾರ್ವತಿ ಅವರನ್ನು ಎ-2 ಮಾಡಲಾಗಿದೆ.

ಸದ್ಯ ತನಿಖೆ ಚುರುಕುಗೊಳಿಸಿರುವ ಲೋಕಾಯುಕ್ತ ಸಾಕ್ಷ್ಯಗಳನ್ನು ಕಲೆ ಹಾಕಲು ಮುಂದಾಗಿದೆ.ಈ ನಡುವೆ ಸಿಎಂ ಸಿದ್ದರಾಮಯ್ಯ ದೇವರ ಮೊರೆ ಹೋಗಿದ್ದಾರೆ.
ಸವದತ್ತಿ ಯಲ್ಮಮ್ಮನ ಮೊರೆಹೋದ ಸಿಎಂ!.

ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿಯಲ್ಲಿರೋ ಪ್ರಸಿದ್ಧ ತೀರ್ಥ ಕ್ಷೇತ್ರ ಸವದತ್ತಿ ಯಲ್ಲಮ್ಮನ ದೇಗುಲಕ್ಕೆ ಭೇಟಿ ನೀಡಿದ್ದರು.ಈ ವೇಳೆ ದೇಗುಲದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಸಿಎಂ ವಿಶೇಷ ಪೂಜೆ ಸಲ್ಲಿಸಿದ್ರು.

ಪತ್ನಿ ಪಾರ್ವತಿ ಹೆಸರಲ್ಲೂ ಸಿದ್ದರಾಮಯ್ಯ ಪೂಜೆ!.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಲ್ಲೂ ದೇವಿಗೆ ಪೂಜೆ ಸಲ್ಲಿಸಿದ್ರು. ತಮ್ಮ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅರ್ಚನೆ ಮಾಡಿಸಿದ್ದಾರೆ. ಸಿಎಂ ಪತ್ನಿ ಪಾರ್ವತಿಯವರ ಹೆಸರಿನಲ್ಲಿ ಧನಿಷ್ಠಾ ನಕ್ಷತ್ರ ನಾಮಧೇಯ ಪಾರ್ವತಿ ಎಂದು ಅರ್ಚಕರಿಗೆ ತಿಳಿಸಿ, ಪತ್ನಿ ಪರವಾಗಿ ವಿಶೇಷ ಪೂಜೆ ಸಲ್ಲಿಸಿದ್ರು.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರು ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದುಕೊಂಡರು. ಸಿಎಂ ಬರ್ತಿದ್ದಂತೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಲ್ಲಮ್ಮ ದೇವಿಗೆ ಆರತಿ ಆಗುವವರೆಗೂ ದೇವ ಸನ್ನಿಧಾನದಲ್ಲಿಯೇ ನಿಂತು ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯನವರು ತಾವೇ ಕುಂಕುಮ ಹಚ್ಚಿಕೊಂಡಿದ್ದಾರೆ. ಬಳಿಕ ಆರತಿ ತಟ್ಟೆಗೆ 500 ರೂಪಾಯಿ ಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯನವರಿಗೆ ನಾಗಮುದ್ರಿಕೆ ಇಟ್ಟು ಅರ್ಚಕರು ಆಶೀರ್ವಾದ ಮಾಡಿದ್ದಾರೆ. ಇನ್ನೂ ಸಿಎಂ ಜೊತೆಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕ ವಿಶ್ವಾಸ್ ವೈದ್ಯ ಅವರು ಸಿಎಂ ಹಾಗೂ ಡಿಸಿಎಂಗೆ ಹಾರ ಹಾಕಿ ಶಾಲು ಹೊದಿಸಿ ಸನ್ಮಾನಿಸಿದರು.