• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಡಿತರ ವಿತರಣೆಗೆ ಹಣ ವಸೂಲಿ: ಶಾಸಕ ಪ್ರಭು ಚವ್ಹಾಣ ಗರಂ.

Any Mind by Any Mind
January 3, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಪಡಿತರ ಪಡೆಯಬೇಕೆಂದರೆ ನ್ಯಾಯಬೆಲೆ ಅಂಗಡಿಯಲ್ಲಿ 10 ರುಪಾಯಿ ಕೊಟ್ಟು ಹೆಬ್ಬೆಟ್ಟಿನ ಗುರುತು ನೀಡಬೇಕು. ಇಲ್ಲವಾದರೆ ಪಡಿತರ ಸಿಗುವುದಿಲ್ಲ. ಒಂದು ಕೆ.ಜಿ ಅಕ್ಕಿ ಕಡಿತಗೊಳಿಸುತ್ತಿದ್ದಾರೆ. ತಿಂಗಳು ಪೂರ್ತಿ ಪಡಿತರ ವಿತರಿಸದೇ 2-3 ದಿನ ಮಾತ್ರ ವಿತರಿಸಲಾಗುತ್ತಿದೆ ಎಂದು ಜಕನಾಳ ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡಾಗ ಶಾಸಕ ಪ್ರಭು ಬಿ.ಚವ್ಹಾಣ ಅವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ADVERTISEMENT

ಗ್ರಾಮ ಸಂಚಾರದ ನಿಮಿತ್ತ ಶಾಸಕರು ಜ.3ರಂದು ಔರಾದ(ಬಿ) ತಾಲ್ಲೂಕಿನ ಜಕನಾಳ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಒಬ್ಬೊಬ್ಬರಾಗಿ ಸಮಸ್ಯೆಗಳನ್ನು ಹೇಳಿದರು. ಪಡಿತರ ಪಡೆಯಲು ಬೇರೆ ಊರಿಗೆ ಹೋಗಬೇಕಾಗುತ್ತದೆ. ಒಂದು ದಿನ ಹೆಬ್ಬೆಟ್ಟಿನ ಗುರುತು ನೀಡಲು ಹೋಗಬೇಕು. ಮತ್ತೊಮ್ಮೆ ಪಡಿತರ ಪಡೆಯಲು ಹೋಗಬೇಕು. ತಿಂಗಳಲ್ಲಿ 2-3 ದಿನ ಮಾತ್ರ ಪಡಿತರ ವಿತರಣೆ ಮಾಡುತ್ತಾರೆ. ನಂತರ ಹೋದರೆ ರೇಷನ್ ಸಿಗದೇ ವಾಪಸ್ಸಾಗಬೇಕಾಗುತ್ತದೆ. ಕೂಲಿ-ನಾಲಿ ಮಾಡಿಕೊಂಡು ಬದುಕುವ ನಾವು ಎಲ್ಲ ಕೆಲಸ ಬಿಟ್ಟು ರೇಷನ್‌ಗಾಗಿ ಅಲೆದಾಡಬೇಕಾಗುತ್ತಿದೆ ಎಂದು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು.

YouTube player

ಇಷ್ಟೊಂದು ಸಮಸ್ಯೆಯಿದ್ದರೂ ನೀವು ಕಣ್ಣು ಮುಚ್ಚಿ ಕುಳಿತಿದ್ದೀರಾ ? ಸಂಬAಧಪಟ್ಟವರ ವಿರುದ್ಧ ಇನ್ನೂ ಯಾಕೆ ಕ್ರಮ ಜರುಗಿಸಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡರು. ಇದು ಒಂದು ಊರಿನ ಸಮಸ್ಯೆ ಮಾತ್ರವಲ್ಲ. ಎಲ್ಲ ಗ್ರಾಮಗಳಲ್ಲಿ ಇದೇ ರೀತಿಯ ಪರಿಸ್ಥಿತಿಯಿದೆ. ಬಡವರಿಂದ ಹಣ ವಸೂಲಿ ಮಾಡುವುದು ಮಹಾಪಾಪ. ಆಂಥವರ ವಿರುದ್ಧ ಕೂಡಲೇ ಕಠಿಣ ಕ್ರಮವಾಗಬೇಕು. ಇಲ್ಲವಾದಲ್ಲಿ ತಮ್ಮ ವಿರುದ್ಧವೇ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ನ್ಯಾಯಬೆಲೆ ಅಂಗಡಿ ಎಲ್ಲೇ ಇರಲಿ. ವಿತರಕರು ಪ್ರತಿ ತಿಂಗಳು ಗ್ರಾಮಕ್ಕೆ ಬಂದು ಪಡಿತರ ವಿತರಣೆ ಮಡಬೇಕು. ಹೆಬ್ಬೆಟ್ಟು ಗುರುತು ಪಡೆಯಲು ಎಲ್ಲಿಯೂ ಹಣ ಪಡೆಯುವಂತಿಲ್ಲ. ತಿಂಗಳು ಪೂರ್ತಿ ಪಡಿತರ ವಿತರಣೆ ಮಾಡಬೇಕು ಮತ್ತು ನಿಗದಿತ ಪ್ರಮಾಣದಲ್ಲಿ ರೇಷನ್ ಕೊಡಬೇಕು. ಮುಂದಿನ ದಿನಗಳಲ್ಲಿ ಇಂತಹ ದೂರುಗಳು ಪುನಃ ಕೇಳಿ ಬಂದರೆ ಇಲಾಖೆಯ ಅಧಿಕಾರಿಗಳು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು. ಅಲ್ಲದೇ ಪಡಿತರಕ್ಕಾಗಿ ಯಾರೊಬ್ಬರೂ ಹಣ ಪಾವತಿಸುವ ಅಗತ್ಯವಿಲ್ಲ. ಯಾರಾದರೂ ಹಣ ಕೇಳಿದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಎಂದು ಗ್ರಾಮಸ್ಥರಿಗೆ ಹೇಳಿದರು.

ಸುಂದಾಳ, ನಂದ್ಯಾಳ, ಮಾನೂರ(ಕೆ), ನಾಗಮಾರಪಳ್ಳಿ, ಕರಂಜಿ(ಕೆ), ಕರಂಜಿ(ಬಿ), ರಾಯಪಳ್ಳಿ ಹಾಗೂ ಲಿಂಗದಳ್ಳಿ ಗ್ರಾಮದಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರಲ್ಲದೇ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು. ರಸ್ತೆ, ಚರಂಡಿ, ಹೆಚ್ಚುವರಿ ತರಗತಿ ಕೋಣೆಗಳು, ಸಮುದಾಯ ಭವನ ಹೀಗೆ ಅವಶ್ಯಕ ಕೆಲಸಗಳನ್ನು ಆದ್ಯತೆಗೆ ಅನುಗುಣ ಮಾಡಿಕೊಡಲಾಗುವುದೆಂದು ಭರವಸೆ ನೀಡಿದರು. ಗ್ರಾಮದಲ್ಲಿನ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ದೀಪದಂತಹ ಸಮಸ್ಯೆಗಳನ್ನು ಪರಿಹರಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಔರಾದ(ಬಿ) ಎಪಿಎಂಸಿ ಅಧ್ಯಕ್ಷರಾದ ಧೊಂಡಿಬಾ ನರೋಟೆ, ತಹಸೀಲ್ದಾರರಾದ ಮಲಶೆಟ್ಟಿ ಚಿದ್ರೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಭಾಷ, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾರಾಣಿ, ಜೆಸ್ಕಾಂ ಎಇಇ ರವಿ ಕಾರಬಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಕೃಷಿ ಇಲಾಖೆಯ ಧೂಳಪ್ಪ, ಪಂಚಾಯತ್ ರಾಜ್ ಇಂಜಿನೀಯರಿoಗ್ ಇಲಾಖೆಯ ವೆಂಕಟರಾವ ಶಿಂಧೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ.

ಫಾಹೀಮ್ ಖುರೇಶಿ, ಸಿಡಿಪಿಓ ಎಮಲಪ್ಪಾ, ಮುಖಂಡರಾದ ವಸಂತ ಬಿರಾದಾರ, ಸಚಿನ ರಾಠೋಡ್, ಕೇರಬಾ ಪವಾರ, ಬಸವರಾಜ ಪಾಟೀಲ ಕಮಲನಗರ, ಶಿವರಾಜ ಅಲ್ಮಾಜೆ, ಖಂಡೋಬಾ ಕಂಗಟೆ, sಸುಜಿತ ರಾಠೋಡ್, ಪ್ರದೀಪ ಪವಾರ, ರವೀಂದ್ರ ರೆಡ್ಡಿ, ಖಾಜಾಮಿಯ್ಯಾ, ಸಂಜು ವಡೆಯರ್, ರಾಮರೆಡ್ಡಿ ಪಾಟೀಲ, ರಾವಸಾಬ ಪಾಟೀಲ, ಶರಣಪ್ಪ ಇಟಗ್ಯಾಳ, ಜಗದೀಶ ಪಾಟೀಲ, ಅನೀಲ ಬಿರಾದಾರ, ಬಾಬು ರಾಠೋಡ್, ದೇವಿದಾಸ ಪವಾರ್, ವಾಸುದೇವ ರಾಠೋಡ್, ಹರಿದಾಸ ರಾಠೋಡ್ ಸೇರಿದಂತೆ ಇತರರಿದ್ದರು.

4ರಂದು ಪ್ರವಾಸ:ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಜನವರಿ 4ರಂದು ಇಟಗ್ಯಾಳ, ನಾಗನಪಲ್ಲಿ ಚಿಂತಾಕಿ, ಬೆಲ್ದಾಳ, ಗುಡಪಳ್ಳಿ, ಮೆಡಪಳ್ಳಿ, ಸುಂಕನಾಳ, ಉಜನಿ ಹಾಗೂ ಚಿಕ್ಲಿ(ಜೆ) ನಲ್ಲಿ ಗ್ರಾಮ ಸಂಚಾರ ನಡೆಸುವರು.

Tags: Food and Civil Supplies Department.If you want to get rationJakanala complainedKaranji (B)Karanji (K)Manoor (K)MLA Prabhu B. Chavan lashed.NagamarapallyNandyalapay 10 rupees at the fair price shopRayapally and Lingadalli villagesvisited schools and Anganwadi
Previous Post

ಇದು ನವಿರಾದ ಪ್ರೇಮ ಕಥೆಯೋ ಅಥವಾ ಘನಘೋರ ದುರಂತವೋ…?! ಬಿಬೇಕ್ ಪಂಗೇನಿ & ಸೃಜನ ಪ್ರೇಮ ಕೃತಿ ಅಂತ್ಯ !

Next Post

ಅಂಬ್ಯುಲೆನ್ಸ್‌ ಸಿಬ್ಬಂದಿಗಳ ಸಮಸ್ಯೆಗಳ ಬಗ್ಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ..

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post

ಅಂಬ್ಯುಲೆನ್ಸ್‌ ಸಿಬ್ಬಂದಿಗಳ ಸಮಸ್ಯೆಗಳ ಬಗ್ಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada