ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭವಾದ ದಿನದಿಂದ ಒಂದಲ್ಲ ಒಂದು ವಿಚಾರದಿಂದ ವಿವಾದಕ್ಕೆ ಕಾರಣವಾಗುತ್ತಿದೆ. ಅಲ್ಲದೇ ಸ್ಪರ್ಧಿಗಳ ವಿರುದ್ಧ ದೂರು ದಾಖಲಾಗುತ್ತಿದೆ. ಇದೀಗ ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಿಸಲಾಗಿದೆ.

ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಎನ್ನುವವರು ಬಿಗ್ ಬಾಸ್ ನಿರೂಪಕ ಸುದೀಪ್, ಸ್ಪರ್ಧಿಗಳಾದ ಅಶ್ವಿನಿ ಗೌಡ ಹಾಗೂ ರಿಷಾ ಗೌಡ ವಿರುದ್ಧ ದೂರು ದಾಖಲಿಸಿದ್ದಾರೆ.

ಕಳೆದ ವಾರಾಂತ್ಯ ಸಂಚಿಕೆಯಲ್ಲಿ ಸುದೀಪ್, ರಕ್ಷಿತಾ ಶೆಟ್ಟಿ ವಿರುದ್ಧ ಗರಂ ಆಗಿದ್ದು, ಯಾವುದೋ ಒಂದು ವಿಚಾರದ ಚರ್ಚೆ ಸಮಯದಲ್ಲಿ ಪಿತ್ತ ನೆತ್ತಿಗೆ ಏರುತ್ತದೆ ಎಂದು ಖಡಕ್ ಆಗಿ ಗುಡುಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ದೂರು ದಾಖಲಿಸಿದ್ದು, ಸುದೀಪ್ ಅವರು ಪಿತ್ತ ನೆತ್ತಿಗೇರಲಿದೆ ಎಂಬ ಪದ ಬಳಕೆ ಮಾಡಿದ್ದು ಎಷ್ಟು ಸರಿ? ಇಂತಹ ಪದವನ್ನು ಬಳಕೆ ಮಾಡಿದ್ದು ಸರಿನಾ? ಎಂದು ಪ್ರಶ್ನಿಸಿದ್ದಾರೆ.







