ನಂಜನಗೂಡು: ನಾಡ ಕಚೇರಿಯ ಉಪ ತಹಶೀಲ್ದಾರ್ ಕಿರುಕುಳದಿಂದ ಬೇಸತ್ತು ಕಂಪ್ಯೂಟರ್ ಆಪರೇಟರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ನಾಡ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಹರತಲೆ ಗ್ರಾಮದ ಹೆಚ್ ಎಸ್ ಪರಮೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಪರಮೇಶ್, ಭಾನುವಾರ ನಾಡಕಚೇರಿಗೆ ತೆರಳಿ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಇವರನ್ನು ಕೂಡಲೇ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನೆ ಮಾಡುತ್ತಿದ್ದ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಮೃತ ಪರಮೇಶ್ “ನನಗೆ ಕಳೆದ ಏಪ್ರಿಲ್ ತಿಂಗಳಿನಿಂದ ಸಂಬಳ ಆಗದೇ ಇರುವುದು ಅತ್ಯಂತ ಬೇಸರವಾಗಿ ಜೀವನ ನಡೆಸುವುದು ಒಂದು ಸಮಸ್ಯೆಯಾಗಿದೆ. ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉಪ ತಹಶೀಲ್ದಾರ್ ಎನ್ ಪಿ ಶಿವಕುಮಾರ್ ಅವರು ನನಗೆ ಮಾನಸಿಕ ಹಿಂಸೆ ಹಾಗೂ ವೈಯಕ್ತಿಕ ದ್ವೇಷದಿಂದ ಮನನೊಂದು ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನಾನು ಅಂಗವಿಕಲ ಎಂದು ಗೊತ್ತಿದ್ದರೂ ಅವರು ನನ್ನ ಮೇಲೆ ದ್ವೇಷ ಸಾಧಿಸುತ್ತಾ ನನಗೆ ಮಾನಸಿಕ ಹಿಂಸೆ ಕೊಟ್ಟು, ನನ್ನನ್ನು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದ್ದಾರೆ. ನನ್ನ ಸಾವಿಗೆ ಹುಲ್ಲಹಳ್ಳಿ ನಾಡಕಚೇರಿಯ ಉಪ ತಹಶೀಲ್ದಾರ್ ಎನ್.ಪಿ. ಶಿವಕುಮಾರ್ ಅವರೇ ನೇರ ಕಾರಣವಾಗಿದ್ದಾರೆ” ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್
ಚನ್ನಪಟ್ಟಣ:“ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು....
Read more