• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕಾಂಗ್ರೆಸ್​​’ನಲ್ಲಿ ಇನ್ನೂ ಬಗೆಹರಿಯದ ಟಿಕೆಟ್​ ಗೊಂದಲ..! ಇವತ್ತು ಫೈನಲ್​

ಕೃಷ್ಣ ಮಣಿ by ಕೃಷ್ಣ ಮಣಿ
February 12, 2023
in ಅಂಕಣ
0
ಈಗ ಎಚ್ಚೆತ್ತುಕ್ಕೊಳ್ಳದಿದ್ದರೆ ಕಾಂಗ್ರೆಸ್ ರಾಜಸ್ಥಾನವನ್ನೂ ಕಳೆದುಕೊಳ್ಳಲಿದೆ
Share on WhatsAppShare on FacebookShare on Telegram

ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಹಂಚಿಕೆ ವಿಚಾರ ಭುಗಿಲೇಳುವ ಎಲ್ಲಾ ಸಾಧ್ಯತೆಗಳು ಇವೆ. ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ಬಸ್​ ಯಾತ್ರೆಗೂ ಮುನ್ನವೇ ಟಿಕೆಟ್​ ಘೋಷಣೆ ಮಾಡಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರೂ ಇನ್ನೂ ಟಿಕೆಟ್​ ಘೋಷಣೆ ಆಗಿಲ್ಲ. ಆದರೆ ಇವತ್ತು ಟಿಕೆಟ್​ ಹಂಚಿಕೆಯಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಸಭೆ ನಡೆಯುತ್ತಿದೆ.  ಕಾಂಗ್ರೆಸ್​’ನಲ್ಲಿ ಹಲವಾರು ಟೀಂಗಳ ನಡುವೆ ಟೀಂ ರಾಜಕಾರಣ ಶುರುವಾಗಿದ್ದು, ಒಂದೊಂದು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ಬೆಂಬಲಿಗರು ಪ್ರತ್ಯೇಕವಾಗಿ ಅರ್ಜಿ ಹಾಕಿರುವುದು ಟಿಕೆಟ್​ ಹಂಚಿಕೆಗೆ ಅಡ್ಡಗಾಲು ಹಾಕಿದೆ. ಕಾಂಗ್ರೆಸ್​’ನಲ್ಲಿ ಟಿಕೆಟ್ ಜಟಾಪಟಿನ್ನು ನಿವಾರಣೆ ಮಾಡುವ ಉದ್ದೇಶದಿಂದ ಇಂದು 137 ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ತೀರ್ಮಾನ ಆಗುವ ಸಾಧ್ಯತೆಯಿದೆ.

ADVERTISEMENT

137 ಕ್ಷೇತ್ರದ ಟಿಕೆಟ್​ ಫೈನಲ್​ ಆಗಿದ್ರೂ ಗೊಂದಲ..!

ಕಾಂಗ್ರೆಸ್​ನಲ್ಲಿ 137 ಕ್ಷೇತ್ರಗಳ ಟಿಕೆಟ್​ ಹಂಚಿಕೆ ಹೆಚ್ಚೂ ಕಡಿಮೆ ಅಂತಿಮ ಆಗಿದೆ. ಆದರೂ ಕೂಡ ಅಂತಿಮ ಪಟ್ಟಿ ಪ್ರಕಟ ಮಾಡದಂತೆ ತಡೆ ಹಿಡಿಯಲಾಗಿದೆ. ಇದೇ ಕಾರಣಕ್ಕೆ ಇಂದು ರಾಜ್ಯಕ್ಕೆ ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಆಗಮಿಸುತ್ತಿದೆ. AICC ಪ್ರಧಾನ ಕಾರ್ಯದರ್ಶಿ ಮೋಹನ್ ಪ್ರಕಾಶ್ ನೇತೃತ್ವದ ಕಮಿಟಿ ಇಂದಿನಿಂದ ಮೂರು ದಿನಗಳ ಕಾಲ ಕಾಂಗ್ರೆಸ್​ ನಾಯಕರ ಜೊತೆ ಸರಣಿ ಸಭೆ ನಡೆಸಲಿದ್ದು, ಟಿಕೆಟ್ ಹಂಚಿಕೆ ಗೊಂದಲ, ನಾಯಕರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೂ ಸ್ಕ್ರೀನಿಂಗ್​ ಕಮಿಟಿ ಮಹತ್ವದ ಚರ್ಚೆ ನಡೆಸಲಿದೆ. ರಾಜ್ಯ ನಾಯಕರ ಜೊತೆ ಸ್ಕ್ರೀನಿಂಗ್ ಕಮಿಟಿ ಪ್ರತ್ಯೇಕ ಸಭೆ ನಡೆಸಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಎಐಸಿಸಿ ಕಾರ್ಯದರ್ಶಿಗಳು, CWC ಸದಸ್ಯರು, ಪ್ರಚಾರ ಸಮಿತಿ ಜೊತೆಗೂ ಸ್ಕ್ರೀನಿಂಗ್ ಕಮಿಟಿ ಪ್ರತ್ಯೇಕ ಸಭೆ ಮಾಡಲಿದ್ದು, ಅಂತಿಮವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ಜೊತೆ ಪ್ರತ್ಯೇಕ ಸಭೆ ಮಾಡಿ ಅಂತಿಮ ಮಾಡಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್​’ನಲ್ಲಿ ಟಿಕೆಟ್​ ಹಂಚಿಕೆ ಮಾಡೋದು ಹೇಗೆ..!?

ಕಾಂಗ್ರೆಸ್’​ನಲ್ಲಿ ಈಗಾಗಲೇ ಟಿಕೆಟ್​ ಅಂತಿಮ ಘಟ್ಟಕ್ಕೆ ತಲುಪಿದೆ. ಒಂದೇ ಕ್ಷೇತ್ರದಿಂದ ಐದಾರು ಮಂದಿ ಟಿಕೆಟ್’​ಗಾಗಿ ಅರ್ಜಿ ಸಲ್ಲಿಸಿದ್ದು, ಜಿಲ್ಲಾ ಚುನಾವಣಾ ಸಮಿತಿ ಸಭೆ ಬಳಿಕ ಆ ಪಟ್ಟಿಯಲ್ಲಿ ಗೆಲ್ಲ ಬಹುದಾದ ಮೂವರನ್ನು ಅಂತಿಮ ಮಾಡಲಾಗಿದೆ. ಇಂದಿನ ಸ್ಕ್ರೀನಿಂಗ್​ ಕಮಿಟಿಯಲ್ಲಿ ಮೂವರಲ್ಲಿ ಒಬ್ಬರನ್ನು ಕೈಬಿಟ್ಟು ಇಬ್ಬರನ್ನು ಅಂತಿಮ ಸುತ್ತಿಗೆ ಮುಂದುವರಿಸುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್​ ನಾಯಕರಿದ್ದಾರೆ. ಆದರೆ ಆ ಮೂವರಲ್ಲಿ ಒಬ್ಬರನ್ನು ಕೈ ಬಿಡುವ ಮುನ್ನ ಟಿಕೆಟ್​ ಆಕಾಂಕ್ಷಿಗಳ ಜೊತೆಗೆ ಸಭೆ ಮಾಡಲು ಸ್ಕ್ರೀನಿಂಗ್​ ಕಮಿಟಿ ಚಿಂತನೆ ನಡೆಸಿದೆ. AICC ಪ್ರಧಾನ ಕಾರ್ಯದರ್ಶಿ ಮೋಹನ್ ಪ್ರಕಾಶ್ ನೇತೃತ್ವದ ಕಮಿಟಿ ಸಮಗ್ರವಾಗಿ ಚರ್ಚಿಸಿ, ಗೆಲ್ಲಬಹುದಾದಂತಹ ಸಮರ್ಥ ಅಭ್ಯರ್ಥಿಯನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಿದೆ. ಸ್ಕ್ರೀನಿಂಗ್ ಕಮಿಟಿ ಮೂವರಲ್ಲಿ ಇಬ್ಬರನ್ನ ಆಯ್ಕೆ ಮಾಡಲಿದ್ದು, ಅಂತಿಮವಾಗಿ ಹೈಕಮಾಂಡ್ ನಾಯಕರು ಪರಿಶೀಲಿಸಿ ಒಬ್ಬರ ಹೆಸರನ್ನು ಫೈನಲ್ ಮಾಡಲಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ಜಿದ್ದಾಜಿದ್ದಿ ಯಾಕೆ..?

ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ನಡುವೆ ಸಿಎಂ ಕುರ್ಚಿಗಾಗಿ ಫೈಟಿಂಗ್​ ನಡೆಯುತ್ತಿದೆ. ಬಹಿರಂಗವಾಗಿ ಎಲ್ಲವೂ ಚೆನ್ನಾಗಿದೆ ಎನ್ನುವಂತೆ ಇಬ್ಬರೂ ನಾಯಕರು ತೋರಿಸಿಕೊಳ್ತಿದ್ದಾರೆ. ಆದರೆ ಒಳಗೊಳಗೆ ಇಬ್ಬರು ನಾಯಕರು ಟಿಕೆಟ್​ ಹಂಚಿಕೆಯಿಂದಲೇ ಹಿಡಿತ ಸಾಧಿಸಲು ಮುಂದಾಗಿದ್ದು, ತಮ್ಮ ಬೆಂಬಲಿಗರಿಗೆ ಟಿಕೆಟ್​ ಕೊಡಿಸಲು ದುಂಬಾಲು ಬಿದ್ದಿದ್ದಾರೆ. ಈ ಬಾರಿ ಕಾಂಗ್ರೆಸ್​ ಅಭ್ಯರ್ಥಿಗಳು ಹೆಚ್ಚಿನ ಮಟ್ಟದಲ್ಲಿ ಗೆಲ್ಲುವ ಸಾಧ್ಯತೆ ಇರುವ ಕಾರಣಕ್ಕೆ ಟಿಕೆಟ್​ ಸಿಕ್ಕರೆ ಗೆಲ್ಲಿಸಿಕೊಳ್ಳಬಹುದು, ಆ ಬಳಿಕ ಮುಖ್ಯಮಂತ್ರಿ ಆಯ್ಕೆ ವೇಳೆ ಬೆಂಬಲ ಸಿಗುತ್ತದೆ ಎನ್ನುವ ಲೆಕ್ಕಾಚಾರದಲ್ಲಿ ಉಭಯ ನಾಯಕರಿದ್ದಾರೆ. ಸಿದ್ದರಾಮಯ್ಯ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವ ಹೊಂದಿದ್ದು, ಹಳೇ ಮೈಸೂರು ಹಾಗು ಕರಾವಳಿ ಭಾಗದಲ್ಲಿ ಡಿ.ಕೆ ಶಿವಕುಮಾರ್​ ಪ್ರಭಾವ ಬಳಸುತ್ತಿದ್ದಾರೆ. ಈಗ ಟಿಕೆಟ್​ ಕೊಡಿಸಿದ ಬಳಿಕ ಯಾರು ಹೆಚ್ಚಿನ ಟಿಕೆಟ್​ ಪಡೆದುಕೊಳ್ತಾರೆ ಅನ್ನೋದ್ರ ಮೇಲೆ ಕಾಂಗ್ರೆಸ್​ನಲ್ಲಿ ಯಾರು ಪ್ರಭಾವಿಗಳು ಅನ್ನೋದು ಕೂಡ ನಿರ್ಧಾರ ಆಗಲಿದೆ.

Tags: Congress Partyಡಿ.ಕೆ. ಶಿವಕುಮಾರ್ವಿಧಾನಸಭಾ ಚುನಾವಣೆಸಿದ್ದರಾಮಯ್ಯ
Previous Post

ಆರೋಗ್ಯ ರಕ್ಷಣೆಯೂ ಸರ್ಕಾರಗಳ ಆದ್ಯತೆಗಳೂ ಭಾಗ – 2

Next Post

ಟ್ರಾಫಿಕ್​ ಫೈನ್​ ಕಟ್ಟಿದ್ರಾ..? ಅಯ್ಯಯ್ಯೋ ತಪ್ಪಿಸಿಕೊಳ್ಳಲು ಇಲ್ಲಿತ್ತು ಅವಕಾಶ..!

Related Posts

Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
0

ವಿಶೇಷ ಆಂಬ್ಯುಲೆನ್ಸ್'ಗಳು ರಸ್ತೆ ಅಪಘಾತದ ಸ್ಥಳಗಳನ್ನು ನಿಮಿಷಗಳಲ್ಲಿ ತಲುಪುವಂತೆ ನೋಡಿಕೊಳ್ಳುವ ಮಹತ್ವಾಕಾಂಕ್ಷೆಯ ಯೋಜನೆಯನ್ನ ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...

Read moreDetails

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
ಹೊರಟವರೂ ನೀವೇ.. ಕಾಡುವವರೂ ನೀವೇ..!

ಹೊರಟವರೂ ನೀವೇ.. ಕಾಡುವವರೂ ನೀವೇ..!

December 17, 2025

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025
Next Post
ಲಾಕ್ ಡೌನ್: ಪೊಲೀಸ್ ಅಟ್ಟಹಾಸದ ವಿರುದ್ಧ ಭುಗಿಲೆದ್ದ ಜನಾಕ್ರೋಶ..!

ಟ್ರಾಫಿಕ್​ ಫೈನ್​ ಕಟ್ಟಿದ್ರಾ..? ಅಯ್ಯಯ್ಯೋ ತಪ್ಪಿಸಿಕೊಳ್ಳಲು ಇಲ್ಲಿತ್ತು ಅವಕಾಶ..!

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada